Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅನಾದಿ ಕಾಲದ ಗಂಟು…
Share:
Poems November 10, 2022 ಕೆ.ಆರ್ ಮಂಗಳಾ

ಅನಾದಿ ಕಾಲದ ಗಂಟು…

ಹಗುರಾಗುತಿದೆ ಹೃದಯ
ಹೆಗಲ ಹೊರೆ ಇಳಿದು
ಭೂಮಿಗಿಂತಲೂ ವಜನ
ಹತ್ತಿಗಿಂತಲೂ ಹಗುರ
ಹೊರಲಾಗದ ಭಾರ ಹೊತ್ತಿದ್ದ
ಎದೆಗೆ, ಈಗ ಎಂಥದೋ ನಿರಾಳ…

ಕಣ್ಣುಬಿಟ್ಟಾಗಿನಿಂದ ಕಂಡದ್ದು
ಎಲ್ಲೆಲ್ಲೋ ಕೇಳಿದ್ದು
ಅವರಿವರು ಕಲಿಸಿದ್ದು
ಮೂಸಿದ್ದು ಹೊಸೆದದ್ದು
ಖಾಲಿಯಾಗದ ಗಂಟು
ಹೆಗಲೇರಿ ಕುಳಿತಿತ್ತು…

ಮುಟ್ಟಿದ್ದು ಮೂರಾಗಿ
ಇಟ್ಟಿದ್ದು ಆರಾಗಿ
ಬಗಲಚೀಲದಲಿದ್ದವು
ಚಿತ್ರವಿಭ್ರಮದ ಸರಕು
ಭವದ ಸಂತೆಯಲಿತ್ತು
ಅನಾದಿ ಕಾಲದ ಗಂಟು…

ಮಾಯೆಯೋ ಮರೆವೋ
ರೂಢಿಗೆ ಬಿದ್ದ ಚಾಳಿಯೋ
ಕಾರ್ಯ-ಕಾರಣದ ಚಕ್ರವೋ?
ಸ್ವಲಿಖಿತ ಹಣೆಬರಹವೋ
ಛಿದ್ರಚಿತ್ತದ ವ್ಯಾಧಿಯಲಿ
ನರಳುತಿದೆ ಲೋಕ…

ಬೆಳೆದಂತೆ ಭುಜವೇರುತ್ತಾ
ನರನಾಡಿಗಳ ಹಬ್ಬಿ
ನನ್ನ ನುಂಗಿ ಬಿಟ್ಟಿದ್ದು
ಈವರೆಗೂ ಅರಿವಾಗಲೇ ಇಲ್ಲ!!
ಗುರು ತೋರುವ ತನಕ
ಭಾರ ಹೊತ್ತುದೇ ತಿಳಿಯಲಿಲ್ಲ!!!

Previous post ಹಾಯ್ಕುಗಳು
ಹಾಯ್ಕುಗಳು
Next post ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?

Related Posts

ನನ್ನೊಳಗಣ ಮರೀಚಿಕೆ
Share:
Poems

ನನ್ನೊಳಗಣ ಮರೀಚಿಕೆ

February 5, 2020 ಪದ್ಮಾಲಯ ನಾಗರಾಜ್
ಈ ಊರು ನದಿದಡೆಯಲ್ಲಿನ ಪ್ರವಾಹ ಭೀತಿಯ ಅಭದ್ರತೆ… ಈ ಊರು ಛಿದ್ರ ವಿಛಿದ್ರಗಳ ಸಂಗಮ ಬಿಂದು… ಈ ಊರು ಪ್ರತಿಮಾ ವಿಧಾನದ ಭಾವಸುಧೆ… ಈ ಊರು ವಿಷಾದ, ವ್ಯಸನಗಳ ನದೀ ಸುಳಿ… ಈ ಊರು...
ಕ್ವಾಂಟಮ್ ಮೋಡಿ
Share:
Poems

ಕ್ವಾಂಟಮ್ ಮೋಡಿ

November 9, 2021 ಜ್ಯೋತಿಲಿಂಗಪ್ಪ
ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು ಎಣಿಸಲಾರೆ ಈ ಬಯಲ ಹೆಜ್ಜೆ ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ ನನ್ನೀ ನೆರಳಾಟವ ಮೆಚ್ಚಿದೆ ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ ಈಗ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ಲಿಂಗಾಚಾರ
ಲಿಂಗಾಚಾರ
May 6, 2021
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
Copyright © 2023 Bayalu