Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವಿನ ಬಾಗಿಲು…
Share:
Poems October 13, 2022 ಕೆ.ಆರ್ ಮಂಗಳಾ

ಅರಿವಿನ ಬಾಗಿಲು…

ಹುಚ್ಚು ಮನಸಿನ ಕುಣಿತ
ದಿಕ್ಕುದಿಕ್ಕಿಗೂ ಸೆಳೆತ
ಅಡಿಗಡಿಗು ಎಡತಾಕುವ
ವಿಷಯಗಳ ಡೈನಮೈಟು
ಕಾಲು ಎಚ್ಚರ ತಪ್ಪದಂತೆ
ಜಾಣ ನಡಿಗೆಯ ಹೇಳಿಕೊಡುತಾನೆ
ಹುಟ್ಟು-ಸಾವಿನ ಚಕ್ರದ ಮರ್ಮ ತೋರುತಾನೆ

ಭಾವ ಜಾಲಗಳ ಹೆಣಿಗೆ
ಚಿತ್ತ ಭ್ರಾಂತಿಯ ಮೆರವಣಿಗೆ
ಪಂಚೇಂದ್ರಿಯಗಳ ಉರವಣೆ
ಮುಗಿಯಲಾರದ ಬವಣೆ
ಉಸಿರುಸಿಕ್ಕು ಚಡಪಡಿಸುವಾಗ
ಬಲೆ ಕತ್ತರಿಸುವ ಕಲೆಯ ಕಲಿಸುತಾನೆ
ಮತ್ತೆ ಅದ ಕಟ್ಟದಾ ತಂತ್ರ ತಿಳಿಸುತಾನೆ

ಬಾಳ ಕದಳಿಯಲಿ
ಬಸವಳಿದು ಕುಸಿದಾಗ
ದಿಕ್ಕುಗಾಣದೆ ಕಂಗೆಟ್ಟು ಅಲೆವಾಗ
ಮಮ್ಮಲ ಮರುಗುತಾನೆ
ಮಮತೆಯಲಿ ಕೈಹಿಡಿದು
ಪಯಣದ ನಿಜವ ಅರುಹುತಾನೆ
ಮತ್ತೆ ದಾರಿತಪ್ಪದ ಗುಟ್ಟು ಕಲಿಸುತಾನೆ

ನಿನ್ನ ನೀತಿಳಿಯೆಂದು
ಅರಿವಿನ ಕಂದೀಲ ಕೈಗಿಕ್ಕಿ
ಅಂತರಂಗದ ಪಯಣಕೆ
ಮನವ ಸಿದ್ಧಗೊಳಿಸುತಾನೆ
ಭವದ ಬೆಂಗುಡಿಯ ಬಿಡಿಸಿ
ಭಕ್ತಿಯ ಮರ್ಮವನು ಅಂಗೈಗೆ ಇಡುತಾನೆ
ನಿಜಮುಕ್ತಿಯ ಮಾರ್ಗವನು ತೋರುತಾನೆ

ತಿದ್ದಿ ತೀಡಿ ಬೆಳೆಸುತಾನೆ
ಝುಂಕಿಸಿ ಮನವ ಚುಚ್ಚುತಾನೆ
ಕದ್ದು ನಡೆದರೆ ಗುದ್ದುತಾನೆ
ಸುಳ್ಳು ನುಡಿಯಲು ಕೆರಳುತಾನೆ
ಸೋಗು ಮುಖಗಳ ಕೆಡವುತಾನೆ
ಬೀಳದಂತೆ ಎಚ್ಚರಿಸುತಾನೆ
ಬಿದ್ದಾಗಲೆಲ್ಲಾ ಎತ್ತುತಾನೆ

ಬೈದು ಬುದ್ಧಿ ಹೇಳುತಾನೆ
ನನ್ನ ಮೋಸ ನನಗೆ ತೋರುತಾನೆ
ಕಂಗಳ ಕರುಳ ಕತ್ತರಿಸುತಾನೆ
ಮನದ ತಿರುಳ ಹುರಿಯುತಾನೆ
ಮಾತಿನ ಮೂಲಕೆ ಒಯ್ಯುತಾನೆ
ಅರಿವಿನ ನೆಲೆಯತ್ತ ನಡೆಸುತಾನೆ
ನನ್ನ ಒಳಗನು ನನಗೆ ಪರಿಚಯಿಸುತಾನೆ

ನನ್ನ ನನಗೊಪ್ಪಿಸಲು
ಗುರು ತೆರೆಯದ ಕಿಟಕಿಗಳಿಲ್ಲ…
ತೋರದ ದಾರಿಗಳಿಲ್ಲ…
ಹೇಳದ ಗುಟ್ಟುಗಳಿಲ್ಲ…
ಸತ್ಯದ ದಾರಿ ತೋರಿದ
ಎನ್ನ ಭಾಗ್ಯದ ಬಾಗಿಲು ನೀ
ಶರಣು ಗುರುವೇ ನಿನಗೆ ಶರಣು ಶರಣು.

Previous post ಗೆರೆ ಎಳೆಯದೆ…
ಗೆರೆ ಎಳೆಯದೆ…
Next post ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?

Related Posts

ಇದ್ದ ಅಲ್ಲಮ ಇಲ್ಲದಂತೆ
Share:
Poems

ಇದ್ದ ಅಲ್ಲಮ ಇಲ್ಲದಂತೆ

April 29, 2018 ಡಾ. ಶಶಿಕಾಂತ ಪಟ್ಟಣ
ಕಲ್ಯಾಣ ಹಣತೆ ಭಕ್ತಿ ರಸ ತೈಲ ಅನುಭವ ಅಬ್ಬರ ಚಿಂತನೆ ಹೊರಗೆ ದುಡಿ ಮದ್ದಳೆ ಸದ್ದು ಒಳಗೊಳಗೆ ಮಿಡಿವ ತಂತಿ. ಕಾಣಲಾಗದ ತೋರಬಾರದ ಮಹಾ ಘನವ ತೋರಿ ಅರಿವು ಮರೆಯ ಜಾಣ ಅಂಧ ಮೌಢ್ಯಕೆ...
ಈ ಕ್ಷಣದ ಸತ್ಯ
Share:
Poems

ಈ ಕ್ಷಣದ ಸತ್ಯ

March 12, 2022 ಕೆ.ಆರ್ ಮಂಗಳಾ
ಧಗಧಗಿಸಿ ಮೇಲೇರುತಿಹ ಕೆನ್ನಾಲಿಗೆಯ ಈ ಬೆಂಕಿ ಅಡಗಿತ್ತು ಎಲ್ಲಿ? ಮರದ ಬೊಡ್ಡೆಯಲೋ? ಒಣಗಿದ ಸೌದೆಯಲೋ, ಮದ್ದಗೀರಿದ ಕಡ್ಡಿಯಲ್ಲೋ, ಊದುತಿಹ ಗಾಳಿಯಲ್ಲೋ? ಎಲ್ಲಿಂದ ಬಂತು ಕಣ್ಣ...

Comments 3

  1. ಶರಣ್ ಸ್ವಾಮಿ ಮಠಪತಿ
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  2. Sharan swami
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  3. ಪೆರೂರು ಜಾರು, ಉಡುಪಿ
    Oct 20, 2022 Reply

    ಗುರು ಅರಿವಿನ ಬಾಗಿಲಾದರೆ ಓಕೆ; ಗರುವದ ಬಾಗಿಲಾದರೆ ಜೋಕೆ; ಈಗಿನ ಗುರುಗಳನ್ನು ಕಾಣುವಾಗ ಹೊರಗೆ ಒಳಗೆ ಬರಿ ಬಯಕೆ!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ನಾನು ಯಾರು?
ನಾನು ಯಾರು?
December 8, 2021
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
September 10, 2022
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ
May 6, 2021
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ನಾನು ಯಾರು? ಎಂಬ ಆಳ ನಿರಾಳ-3
ನಾನು ಯಾರು? ಎಂಬ ಆಳ ನಿರಾಳ-3
May 6, 2020
Copyright © 2023 Bayalu