Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಾಯದೊಳಗಣ ಬಯಲು
Share:
Poems November 7, 2020 ಜ್ಯೋತಿಲಿಂಗಪ್ಪ

ಕಾಯದೊಳಗಣ ಬಯಲು

ಈ ಬಯಲು ಗುರುತಿಸಲಾರೆ
ನನ್ನ ಕಣ್ಣ ಎದುರು ನಾನು
ಬಯಸುವ ರೂಹು ಇಲ್ಲ

ಕಣ್ಣು ಹೇಳಿದುದು ಸುಳ್ಳೇ

ನೀ ಬಿಟ್ಟ ಉಸಿರಲೊಂದು
ದನಿ ಇದೆ ನಾ ಕೇಳಲಾರೆ

ಉಸಿರು ಒಳಗಣ ದನಿ
ಉಸಿರು ನುಂಗಿತು
ಕಣ್ಣ ಒಳಗಣ ಉಸಿರು
ನೋಟ ನುಂಗಿತು

ಈ ಗೆರೆ ಕೊರೆದು
ಹೋದವರು ಯಾರು ಯಾರು
ಅಳಿಸದಾ ಗೆರೆಯೇ…

ನಾನು ನಾನೇ ಕೊರೆದುದು ಅಳಿಸದುದು
ನಾ ಹೆತ್ತ ಕೂಸು
ತಾಯಿ ಆಗದಿರೆ ಗಂಡನಿಗೆ ಕಳಂಕ

ಕಾಯ ಉಸಿರು, ಉಸಿರು ಕಾಯ
ಪ್ರಾಣ ಇರುವ ದೇಹ
ದೇಹ ಇರುವ ಪ್ರಾಣ
ಉಸಿರ ಒಳಗಣ ಆ ಸದ್ದು
ಏನದು…

ಒಂದೊಂದು ಕಾಯದಲೂ
ಒಂದು ಚೈತನ್ಯ ಎಂಬರಿವು ಈಗ
ಈಗ ಈ ಐನಸ್ಟೈನ್ ಚೈತನ್ಯ
ಸೂತ್ರ ಬಯಲು

ಬಾಗಿಲಿಗೆ ಮೊಳೆ ಜಡಿದು
ಒಳಗೆ ಕಾಲಿಟ್ಟಿರುವೆ.

Previous post ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
Next post ಗಂಟಿನ ನಂಟು
ಗಂಟಿನ ನಂಟು

Related Posts

ದಾರಿ ಬಿಡಿ…
Share:
Poems

ದಾರಿ ಬಿಡಿ…

December 6, 2020 ಕೆ.ಆರ್ ಮಂಗಳಾ
ದಾರಿ ಬಿಡಿ ದಾರಿ ಬಿಡಿ ಕಲ್ಯಾಣಪುರಕೆ ಹೊರಟಿದ್ದೇನೆ ದಾರಿಬಿಡಿ ನೆನಪುಗಳೇ ಜಗ್ಗದಿರಿ ಹಿಂದಕ್ಕೆ ಅಡ್ಡಕೆ ಕಾಲ್ಕೊಟ್ಟು ಕೆಳಗೆ ಕೆಡವದಿರಿ ಕಳೆದ ಕಾಲಗಳಿಗೆಳೆದು ಸಮಯ...
ಸುಮ್ಮನೆ ಇರು
Share:
Poems

ಸುಮ್ಮನೆ ಇರು

December 6, 2020 ಜ್ಯೋತಿಲಿಂಗಪ್ಪ
ನಾನು ನೋಡಿದ್ದೇನು ಕೇಳಿದ್ದೇನು ಬಿಡು ನಾನಿರುವುದೇ ಹೀಗೆ ನೋಡೆ ಕೇಳೆ ಕಣ್ಣ ಕೊಳೆ ಕಿವಿಯ ಕಸ ತೊಳೆ ಇರುವೆ ಇರುವ ಹಾಗೆ ನಿನ್ನ ಬೆಳಕಲಿ ನನ್ನ ನೆಳಲ ತುಂಬದಿರು ಕೇಡು ನನದಲ್ಲ...

Comments 2

  1. Umesh Patri
    Nov 11, 2020 Reply

    ಕಣ್ಣು ಹೇಳುವುದು ಸುಳ್ಳೋ, ಮನಸ್ಸು ಹೇಳುವುದು ಸುಳ್ಳೋ… ಕೊನೆಗೆ ಈ ಬದುಕೇ ಸುಳ್ಳೋ… ಕವಿಯ ಗೊಂದಲ ಬಿಡುಗಡೆಯಾದರೂ ಓದುಗನ ಗೊಂದಲ ಹಾಗೇ ಉಳಿಯುತ್ತದೆ.

  2. Manikanta Dogila
    Nov 11, 2020 Reply

    ಪ್ರಾಣ ಇರುವ ದೇಹ
    ದೇಹ ಇರುವ ಪ್ರಾಣ… ಕಾಡುವ ಸಾಲುಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಸಂತೆಯ ಸಂತ
ಸಂತೆಯ ಸಂತ
September 7, 2020
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ನೂರನೋದಿ ನೂರಕೇಳಿ…
ನೂರನೋದಿ ನೂರಕೇಳಿ…
April 29, 2018
WHO AM I?
WHO AM I?
June 17, 2020
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ಶರಣ ಕುಂಬಾರಣ್ಣನ ಸರಸ ದಾಂಪತ್ಯ
ಶರಣ ಕುಂಬಾರಣ್ಣನ ಸರಸ ದಾಂಪತ್ಯ
May 1, 2019
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
Copyright © 2021 Bayalu