Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ವರದಿ ಕೊಡಬೇಕಿದೆ
Share:
Poems March 17, 2021 ಕೆ.ಆರ್ ಮಂಗಳಾ

ವರದಿ ಕೊಡಬೇಕಿದೆ

ತನುವ ಭೇದಿಸಿ, ಮನವ ಶೋಧಿಸಿ
ವರದಿ ಕೊಡಲು ಅಟ್ಟಿದ್ದಾನೆ ಗುರು
ನನ್ನೊಳಗೆ ನನ್ನ…

ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ
ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ
ಎಲ್ಲೋ ಓದಿದ್ದನ್ನು, ಯಾರೋ ಹೇಳಿದ್ದನ್ನು
ನಕಲು ಮಾಡಿ ಒಪ್ಪಿಸುವಂತೆಯೂ ಇಲ್ಲ…
ಆಸೆಗಳ ಮೊಗೆತ, ಭಾವಗಳ ರಭಸ
ಕಲ್ಪಿತಗಳ ನೆಗೆತ, ವಿಚಾರಗಳ ಓಟ
ಏನ ಹಿಡಿಯಲಿ, ಎಲ್ಲಿ ಕೆದಕಲಿ?
ಪಾಚಿ ಇದೆ, ಸೆಳೆತ ಇದೆ
ಮರೆವಿನ ಜಾಲಗಳಿವೆ, ಅಪರಿಚಿತ ಜಾಗಗಳಿವೆ
ದಾರಿ ತಪ್ಪಿಸುವ ಕತ್ತಲಿದೆ…

ಹೊರ ಸುದ್ದಿಗಳನು ವರದಿ ಮಾಡಿ
ಅಭ್ಯಾಸವಾದವಳಿಗೆ
ಮನವ ನೋಡುವುದು,
ಅಂತರಂಗದ ಸಮಾಚಾರ ಬರೆವುದು
ಇಷ್ಟು ಸವಾಲಿನದೆಂದು ತಿಳಿದಿರಲೇ ಇಲ್ಲ…
ಕಂಗಾಲಾಗಿ ಕೂರುವಂತಿಲ್ಲ
ಗಡುವು ಮೀರುವಂತಿಲ್ಲ
ಗುರು ಕೊಟ್ಟ ಕಂದೀಲು ಹಿಡಿದು
ಒಳಗಡಿ ಇಟ್ಟಾಗಿದೆ…
ಒಂದೊಂದನೆ ಎತ್ತಿ, ಬಗೆಬಗೆದು ನೋಡಿ
ಹಿಂದು-ಮುಂದಿನ ತಂತುಗಳ ಹುಡುಕಿ
ವರದಿ ಕೊಡಬೇಕಿದೆ ಗುರುವಿಗೆ ವರದಿ ಕೊಡಬೇಕಿದೆ…

Previous post ಬಯಲಾಟ
ಬಯಲಾಟ
Next post ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು

Related Posts

ಲಿಂಗದ ಹಂಗೇ…
Share:
Poems

ಲಿಂಗದ ಹಂಗೇ…

September 10, 2022 ಜ್ಯೋತಿಲಿಂಗಪ್ಪ
ಹೊದಿಯೋಕೊಂದು ಆಕಾಶ ಮಲಗೋಕೊಂದು ನೆಲ ಕುಡಿಯೋಕೊಂದು ಸಿಂಧು ಉಣ್ಣೋಕೆ ಒಂದಿಷ್ಟು ಭಿಕ್ಷೆ ಹಾಡೋಕೊಂದು ತಂಬೂರಿ ಕೇಳೋಕೊಂದು ಕಿವಿ ಇನ್ನೇನು ಆಂ ಮರೆತೇ ಮೆರೆಯಲು ಒಂದು ಮರೆವು...
ಗಾಳಿ ಬುರುಡೆ
Share:
Poems

ಗಾಳಿ ಬುರುಡೆ

June 17, 2020 ಪದ್ಮಾಲಯ ನಾಗರಾಜ್
ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು ಗಾಳಿಗೆ ತೂರ್ಹೋಗಬೇಡಾ //ನಂಬಿ// ಚಿತ್ರಾ...

Comments 1

  1. Vinay Bengaluru
    Mar 20, 2021 Reply

    ಯಾವ ಗುರುವಿಗೆ ವರದಿ ಕೊಡಬೇಕು ಅಕ್ಕಾ? ಹಾಗೆ ವರದಿ ಕೇಳಿದ ಗುರು ಯಾರು?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
ನೆಮ್ಮದಿ
ನೆಮ್ಮದಿ
April 6, 2020
ನೆಲದ ನಿಧಾನ
ನೆಲದ ನಿಧಾನ
April 29, 2018
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ನಾನು ಯಾರು?
ನಾನು ಯಾರು?
December 8, 2021
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
September 5, 2019
Copyright © 2023 Bayalu