Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯ ಸಂತ
Share:
Poems September 7, 2020 ಜ್ಯೋತಿಲಿಂಗಪ್ಪ

ಸಂತೆಯ ಸಂತ

ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ
ಕಣ್ಣಿಗೆ ಕರುಳು ಇರಬಾರದು
ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ
ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ

ಈ ಮೂರು ಮೊಳದ ಗುಂಡಿಯ ತೋಡುವರೈದು ಮಂದಿ
ಓಡುವ ಸೂರ್ಯನ ಹಿಡಿಯಲಾಗದು ನೆರಳು
ಬಿಡಮ್ಮಾ ಇದು ಯಾವ ತತ್ವದ ಹಾಡೋ
ತಂಬೂರಿ ಮೀಟುವ ಬೆರಳು ಮೊಂಡು

ನೆನೆದರೆ ಕಾಡುವುದು ಮರೆಹು
ಮರೆದರೆ ಕಾಡುವುದು ನೆನಹು
ಅರಿದರೆ ಕಾಡುವುದು ನೆನಹು ಮರೆಹು
ಶಬ್ದದೊಳಗಣ ನಿಸದ್ದುವ ಬಲ್ಲವರೇ ಬಲ್ಲರು

ನಿನ್ನಿಂದ ನಾನರಿದೆನಲ್ಲದೆ ಎನ್ನಿಂದ ನೀನಾಗಲಿಲ್ಲ
ಅಂತರಂಗದಲಿ ಅಡಗಿಸಿಟ್ಟ ಭಾವ
ಬಹಿರಂಗದಲಿ ಪೂಜೆಗೊಳ್ಳದು
ಕಣ್ಣ ಒಳಗಣ ಬಿಂಬ ಕಣ್ಣಿಗೆ ಇಂಬು

ಬೆಟ್ಟ ಏರಿ ಬಂದವನ ಕೂಡೇನು ಕಷ್ಟ ಸುಖ
ನೆಲದಲಿ ತೆವಳುವ ಮಣ್ಣು
ಮಣ್ಣಿಲ್ಲದೆ ಇರದು
ಅಂಗವಿಲ್ಲದವಗೆ ಅಂಗಿ ತೊಡಿಸಲುಂಟೇ…

Previous post ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
Next post ಮನಸ್ಸು
ಮನಸ್ಸು

Related Posts

ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...
ಕಣ್ಣ ದೀಪ
Share:
Poems

ಕಣ್ಣ ದೀಪ

September 7, 2021 ಜ್ಯೋತಿಲಿಂಗಪ್ಪ
ನನ್ನ ಮನೆಯ ಅಂಗಳದಲ್ಲಿ ಒಬ್ಬ ಬುದ್ಧನಿದ್ದಾನೆ ಶೋ ಕೇಸಿನಲ್ಲಿ ಒಬ್ಬ ಬುದ್ಧನಿದ್ದಾನೆ ಗೋಡೆಯ ಮೇಲೆ ಒಬ್ಬ ಬುದ್ಧನಿದ್ದಾನೆ ಎಲ್ಲೆಲ್ಲೂ ಬುದ್ಧ ಬುದ್ಧ ಒಳಗೆ ಖಾಲಿ ಗೋಡೆಯ ಹಿಂದೆ...

Comments 2

  1. Mariswamy Gowdar
    Sep 10, 2020 Reply

    ಕಣ್ಣೊಳಗಣ ಕರುಳು ಹಿಂಗಿದಲ್ಲದೆ ನಿನ್ನ ನೋಡಲಾಗದು… ವಚನ ನೆನಪಿಸಿದಿರಿ. ಸುಂದರ ಕವನ.

  2. Nagaraju M.P
    Sep 13, 2020 Reply

    ಕವನ abstract art ಅನ್ನು ನೆನಪಿಸುವಂತಿದೆ. ನಿಮ್ಮ ಅಲ್ಲಮ ಮತ್ತು ಅಕ್ಕನ ನೆನಪಿನ ಕವನಗಳನ್ನು ನಾನು ಓದಿದ್ದೇನೆ, ಚೆನ್ನಾಗಿವೆ ಸರ್.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಶಿವನ ಕುದುರೆ – 2
ಶಿವನ ಕುದುರೆ – 2
June 3, 2019
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
June 5, 2021
ಶಿವಯೋಗ
ಶಿವಯೋಗ
July 4, 2021
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ಶರಣನಾಗುವ ಪರಿ
ಶರಣನಾಗುವ ಪರಿ
June 3, 2019
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
Copyright © 2023 Bayalu