Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹೆಸರಿಲ್ಲದಾ ಊರಿನ ಹಾಡು
Share:
Poems May 6, 2020 ಪದ್ಮಾಲಯ ನಾಗರಾಜ್

ಹೆಸರಿಲ್ಲದಾ ಊರಿನ ಹಾಡು

ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ
ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ//

ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ
ಶೋಕಿ ದಾರಿಯು ತಾನೇ ಆಗುತಾ/ ಮಾಯೆಯೊಳಗೇ ಹಬ್ಬತೋ //ಅ.ಪ//

ಮೂರು ದಾರಿ ಸೇರೋ ಜಾಗದಿ ಗೂಡು ಕಟ್ಟಿ ಕುಣಿಯಿತೋ
ಗಂಡೂ ಅಲ್ಲಾ ಹೆಣ್ಣು ಅಲ್ಲದು/ ಆಟತಿಳಿದು ನಡೆಯಿರೋ //ಚಿಂತೆ//

ಹರಿವು ನದಿದಡಲಿ ಬೆಳೆದಾ/ ದಿಕ್ಕುಗಾಣದ ಮರವಿದೋ
ತಾಯಿ ತಂದೆ ಇದಕಾರಿಲ್ಲ/ ಹುಚ್ಚು ಕುದುರೆ ಪಯಣವೋ //ಚಿಂತೆ//

ರಂಕುಮುಂಡೆಯ ಮಡಿಲಲಿ ಚಿಂತೆ/ ಇಲ್ಲದೇ ತಾ ತೋರಿತೋ
ದಾಟ ಹೋಗಿ ಇದನೂ ಗೆದ್ದರು/ ಕೋಟಿಗೊಬ್ಬರು ನಿಜವಹುದೋ //ಚಿಂತೆ//

ಹೆಸರಾ ಇಲ್ಲದಾ ಊರಿನೊಳಗೆ/ ಹುಲ್ಲುಗುಡಿಸಲು ಇದ್ದಿತೋ
ಮೂರನಾಗಿಸಿ ಕೊಂದೇ ಹಾಕಿತ/ ಇದರ ನಿಜವನು ಅರಿಯಿರೋ.

-ಪದ್ಮಾಲಯ ನಾಗರಾಜ್

Previous post ಮನವೇ ಮನವೇ…
ಮನವೇ ಮನವೇ…
Next post WHO AM I?
WHO AM I?

Related Posts

ಇದ್ದ ಅಲ್ಲಮ ಇಲ್ಲದಂತೆ
Share:
Poems

ಇದ್ದ ಅಲ್ಲಮ ಇಲ್ಲದಂತೆ

April 29, 2018 ಡಾ. ಶಶಿಕಾಂತ ಪಟ್ಟಣ
ಕಲ್ಯಾಣ ಹಣತೆ ಭಕ್ತಿ ರಸ ತೈಲ ಅನುಭವ ಅಬ್ಬರ ಚಿಂತನೆ ಹೊರಗೆ ದುಡಿ ಮದ್ದಳೆ ಸದ್ದು ಒಳಗೊಳಗೆ ಮಿಡಿವ ತಂತಿ. ಕಾಣಲಾಗದ ತೋರಬಾರದ ಮಹಾ ಘನವ ತೋರಿ ಅರಿವು ಮರೆಯ ಜಾಣ ಅಂಧ ಮೌಢ್ಯಕೆ...
ಗುರುಪಥ
Share:
Poems

ಗುರುಪಥ

January 4, 2020 ಕೆ.ಆರ್ ಮಂಗಳಾ
ಎಲ್ಲೆಲ್ಲಿಯೋ ಸುತ್ತಿ, ಎಲ್ಲೆಲ್ಲಿಯೋ ಅಲೆದು ಕಂಡಕಂಡವರನ್ನೆಲ್ಲ ಕೇಳಿ ಓದುಬಲ್ಲವರನ್ನೆಲ್ಲ ಹುಡುಕಿ ಸುಸ್ತಾದದ್ದೆ ಬಂತು, ದಾರಿ ಸಿಗಲಿಲ್ಲ ಹೇಳುವದನ್ನೆಲ್ಲ ಹಿಡಿದು...

Comments 3

  1. Jyothilingappa
    May 7, 2020 Reply

    ಪದ್ಮಾಲಯ ರ ಕವನ ಸರಳ ಅರ್ಥಗರ್ಭಿತ.. ಹಾಡುವ ದಾಟಿ..ರಚನೆ.. ಸುಂದರ.

  2. Gangadhar navale
    May 14, 2020 Reply

    ಮನಸ್ಸಿನಲ್ಲಿರುವ ಚಿಂತೆಯೇ ಹಾವೆಂದುಕೊಂಡಿದ್ದೆ, ಚಿಂತೆಯೊಳಗೆ ಇರೋ ಹಾವು ಯಾವುದು? ಚಿಂತೆಯಲ್ಲಿರುವ ಹಾವು ಭ್ರಮೆಯೇ ಇರಬಹುದೆಂದುಕೊಂಡೆ.

  3. Chandru pujar
    Aug 25, 2020 Reply

    Dhanyvad Sar Tumba chennagide

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಸುಮ್ಮನೆ ಇರು
ಸುಮ್ಮನೆ ಇರು
December 6, 2020
ದಾಸೋಹ ತತ್ವ
ದಾಸೋಹ ತತ್ವ
January 10, 2021
ಬಸವನಾ ಯೋಗದಿಂ…
ಬಸವನಾ ಯೋಗದಿಂ…
July 1, 2018
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಅಬದ್ಧ ಆರ್ಥಿಕತೆ
ಅಬದ್ಧ ಆರ್ಥಿಕತೆ
March 5, 2019
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
Copyright © 2021 Bayalu