Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅಂದು-ಇಂದು
Share:
Poems December 8, 2021 ಕೆ.ಆರ್ ಮಂಗಳಾ

ಅಂದು-ಇಂದು

ಅಂದು-
ಹೇಗೋ ಎಂತೋ
ಸುರುಸುರುಳಿಯಾಗಿ
ಬಗೆಬಗೆಯಲಿ ಪರಿಪರಿಯಲಿ
ಸುತ್ತಿಕೊಂಡಿದ್ದು-
ಮೆತ್ತಿಕೊಂಡಿದ್ದು
ಬೆಳೆಯುತ್ತಾ-ಬಲಿಯುತ್ತಾ
ನಂಟಾಗಿ- ಗಂಟಾಗಿ
ಯಮಯಾತನೆಯ ಹೊರೆಯಾಗಿ
ಮುಡಿಯೇರಿ ಭವಭಾರ
ಉಸಿರ ಹಿಸುಕಿತ್ತು.

ಇಂದು-
ಹೊರೆಗಳನು ಇಳುಹುತ್ತಾ
ಗಂಟುಗಳ ಬಿಡಿಸುತ್ತಾ
ಪೊರೆಗಳನು ಕಳಚುತ್ತಾ
ಹಗುರಾಗಿ ನವಿರಾಗಿ
ಸಾಗುತಿದೆ ನಡಿಗೆ
ಕಾಲದೊಂದಿಗೆ ಚಲನೆ…

ಗುರು ಸಿಕ್ಕು ಬೆಳಕಾಗಿ
ಗಮ್ಯತೆಯ ಅರಿವಾಗಿ
ಕೇಳುವ- ಕೆದಕುವ
ಸಂಚಿ ಬರಿದಾಗಿತ್ತು…
ನಿನ್ನೆ ಕಳೆದ ಮೇಲೆ
ನಾಳೆ ಎಂಬುದೂ ಇಲ್ಲ…
ಮಾತು ಮರೆತಾ ‘ನಾನು’
ಮಾತಿಲ್ಲದಾ ನೀನು
ಸಂಧಿಸುವ ಆ ಗಳಿಗೆ
ಬರಬಾರದೇ ಇಂದೇ?

Previous post ಬೆಳಕಲಿ ದೀಪ
ಬೆಳಕಲಿ ದೀಪ
Next post ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ

Related Posts

ಹಾಯ್ಕು
Share:
Poems

ಹಾಯ್ಕು

September 6, 2023 ಜ್ಯೋತಿಲಿಂಗಪ್ಪ
೦೧ ದೀಪ ಹಿಡಿದು ಇರುಳು ಆ ನಕ್ಷತ್ರ ಹುಡುಕಲುಂಟೇ… ೦೨ ಮದವೇ ಮದ್ಯ ಮದ ಏರಿದ ಅಷ್ಟೂ ಮತ್ತು ಏರಿತು. ೦೩ ಸಾವು ಎಂಬುದು ಕೊಬ್ಬಿನ ಮಾತು ಅಲ್ಲಾ ಮೆಲ್ಲ ಮಾತಾಡು. ೦೪...
ಕುರುಹೇ ಬಯಲು
Share:
Poems

ಕುರುಹೇ ಬಯಲು

February 16, 2026 ಜ್ಯೋತಿಲಿಂಗಪ್ಪ
ದೇವರಿಗೆ ಕುರುಹು ಇಲ್ಲ ಕುರುಹುವಿಗೆ ದೇವರು ಉಂಟು ಬೆರಳು ಮಡಿಚಿದರೆ ನಾನು ಬೆರಳು ಬಿಚ್ಚಿದರೆ ನೀನು ಹೆಜ್ಜೆ ಹೆಜ್ಜೆಯಲಿ ಸದ್ದಿಲ್ಲದ ನಡೆ ಬಿಲ್ಲು ಇಲ್ಲದ ಬಾಣ ಮುಟ್ಟೀತೇ ಗುರಿ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಿವನ ಕುದುರೆ – 2
ಶಿವನ ಕುದುರೆ – 2
June 3, 2019
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ಮತ್ರ್ಯಲೋಕದ ಮಹಾಮನೆ
ಮತ್ರ್ಯಲೋಕದ ಮಹಾಮನೆ
January 15, 2026
ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
April 11, 2025
ನೆಲದ ನಿಧಾನ
ನೆಲದ ನಿಧಾನ
April 29, 2018
ನೀರಬೊಂಬೆಗೆ ನಿರಾಳದ ಗೆಜ್ಜೆ
ನೀರಬೊಂಬೆಗೆ ನಿರಾಳದ ಗೆಜ್ಜೆ
April 29, 2018
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
April 29, 2018
ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
August 6, 2022
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
Copyright © 2026 Bayalu