Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅನಾದಿ ಕಾಲದ ಗಂಟು…
Share:
Poems November 10, 2022 ಕೆ.ಆರ್ ಮಂಗಳಾ

ಅನಾದಿ ಕಾಲದ ಗಂಟು…

ಹಗುರಾಗುತಿದೆ ಹೃದಯ
ಹೆಗಲ ಹೊರೆ ಇಳಿದು
ಭೂಮಿಗಿಂತಲೂ ವಜನ
ಹತ್ತಿಗಿಂತಲೂ ಹಗುರ
ಹೊರಲಾಗದ ಭಾರ ಹೊತ್ತಿದ್ದ
ಎದೆಗೆ, ಈಗ ಎಂಥದೋ ನಿರಾಳ…

ಕಣ್ಣುಬಿಟ್ಟಾಗಿನಿಂದ ಕಂಡದ್ದು
ಎಲ್ಲೆಲ್ಲೋ ಕೇಳಿದ್ದು
ಅವರಿವರು ಕಲಿಸಿದ್ದು
ಮೂಸಿದ್ದು ಹೊಸೆದದ್ದು
ಖಾಲಿಯಾಗದ ಗಂಟು
ಹೆಗಲೇರಿ ಕುಳಿತಿತ್ತು…

ಮುಟ್ಟಿದ್ದು ಮೂರಾಗಿ
ಇಟ್ಟಿದ್ದು ಆರಾಗಿ
ಬಗಲಚೀಲದಲಿದ್ದವು
ಚಿತ್ರವಿಭ್ರಮದ ಸರಕು
ಭವದ ಸಂತೆಯಲಿತ್ತು
ಅನಾದಿ ಕಾಲದ ಗಂಟು…

ಮಾಯೆಯೋ ಮರೆವೋ
ರೂಢಿಗೆ ಬಿದ್ದ ಚಾಳಿಯೋ
ಕಾರ್ಯ-ಕಾರಣದ ಚಕ್ರವೋ?
ಸ್ವಲಿಖಿತ ಹಣೆಬರಹವೋ
ಛಿದ್ರಚಿತ್ತದ ವ್ಯಾಧಿಯಲಿ
ನರಳುತಿದೆ ಲೋಕ…

ಬೆಳೆದಂತೆ ಭುಜವೇರುತ್ತಾ
ನರನಾಡಿಗಳ ಹಬ್ಬಿ
ನನ್ನ ನುಂಗಿ ಬಿಟ್ಟಿದ್ದು
ಈವರೆಗೂ ಅರಿವಾಗಲೇ ಇಲ್ಲ!!
ಗುರು ತೋರುವ ತನಕ
ಭಾರ ಹೊತ್ತುದೇ ತಿಳಿಯಲಿಲ್ಲ!!!

Previous post ಹಾಯ್ಕುಗಳು
ಹಾಯ್ಕುಗಳು
Next post ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?

Related Posts

…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
ಬಯಲಾಟ
Share:
Poems

ಬಯಲಾಟ

March 17, 2021 ಜ್ಯೋತಿಲಿಂಗಪ್ಪ
ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ಗುರುಪಥ
ಗುರುಪಥ
January 4, 2020
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ನನ್ನೆದುರು ನಾ…
ನನ್ನೆದುರು ನಾ…
March 6, 2024
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಲಿಂಗಾಚಾರ
ಲಿಂಗಾಚಾರ
May 6, 2021
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
Copyright © 2025 Bayalu