Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವು-ಮರೆವಿನಾಟ
Share:
Poems August 8, 2021 ಕೆ.ಆರ್ ಮಂಗಳಾ

ಅರಿವು-ಮರೆವಿನಾಟ

ನೀನರಿಯೆ ನಾನಾರೆಂದು
ನಾಮರೆತೆ ನೀನಾರೆಂದು
ನನ್ನಲ್ಲೇ ನೀನಿದ್ದರೂ
ನಿನ್ನಿಂದಲೇ ನಾ ಬದುಕಿದ್ದರೂ…
ಇದೇ ಅಲ್ಲವೇ ವಿಸ್ಮಯ?

ನಾ-ನೀನೆಂಬ ಉಭಯವೇ ಇಲ್ಲ
ಭ್ರಮೆಗೆ ಬಲಿಯಾಗದೆ
ತಿಳಿದು ನೋಡೆಂದ ಗುರು-
ನೀನೇ ನಾನೋ, ನಾನೇ ನೀನೋ…
ಮತ್ತೇ ಶುರುವಾಯ್ತು ಗೊಂದಲ.

ನೀನು ನೀನೆಂದು
ಕನವರಿಸುತಿರುವುದೆಲ್ಲ ಬುದ್ಧಿಯ ಬೇಧ
ನಾನು ನಾನು ಎಂದು
ಬಡಬಡಿಸುತಿರುವುದೆಲ್ಲ ಮನದ ಕಸ

ಈ ತಿಪ್ಪೆಯ ಮೇಲೆ ಕೂತು
ಹಿಡಿಯಬಹುದೇ ಸತ್ಯದ ಕೈಯ?
ಅಂಟಿಸಿಕೊಂಡ ರೆಕ್ಕೆಗಳ ನೆಚ್ಚಿ
ಹಾರಲಾದೀತೆ ಬಯಲಿನತ್ತ?

ಬಣ್ಣಬಣ್ಣದ ಮಾತುಗಳೆಲ್ಲ
ಮೌನದಲಿ ಕರಗಿ
ಎಲ್ಲ ಖಾಲಿಯಾಗುವ ತನಕ
ಕೇಳಲಾದೀತೆ ಎದೆಯ ಗುಟ್ಟು?

Previous post ಹುಡುಕಾಟ…
ಹುಡುಕಾಟ…
Next post ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ

Related Posts

ಆ ದಾರಿಯೇನು ಕುರುಡೇ…
Share:
Poems

ಆ ದಾರಿಯೇನು ಕುರುಡೇ…

June 5, 2021 ಜ್ಯೋತಿಲಿಂಗಪ್ಪ
ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ ಈ ಹುಣುಸೇ ಮರದ ಹುಳಿಗೇನು ಮುಪ್ಪೇ ಕನ್ಯೆಯ ಬೆನ್ನ ಬೆವರ ಉಪ್ಪು...
ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...

Comments 2

  1. Jyothilingappa
    Aug 9, 2021 Reply

    ಬುದ್ಧಿಯ ಬೇಧ
    ಮನದ ಕಸ… ಆಹಾ!

  2. ಪೇರೂರು ಜಾರು, ಮಂಗಳೂರು
    Aug 14, 2021 Reply

    ಅರಿವು ಮರೆವು
    ಅರಿತೇ ಮರೆಯುವುದು
    ಅರಿಯದೇ ಮರೆಯುವುದು
    ಕೆಲವ ಕುರಿತು ಮರೆಯುವುದು
    ಬಯಲಾಗು ಮರೆಯುವುದು
    ಎಲ್ಲ ಆಟಕ್ಕೂ ಕೊನೆ ತಿಳಿ
    ಅದೇ ಅರಿವು ತಿಳಿಯದೊಡೆ
    ಬಾಳ ಮರೆವು
    ಆಟ ಮುಗಿಯಲೇ ಬೇಕು
    ಮಂಗಳ ಹಾಡಲೇ ಬೇಕು
    (ಮಂಗಳಾ ಬರೆಯಲೂ ಬೇಕು)

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಈ ಕನ್ನಡಿ
ಈ ಕನ್ನಡಿ
March 6, 2024
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ನಾನೆಲ್ಲಿ ಇದ್ದೆ?
ನಾನೆಲ್ಲಿ ಇದ್ದೆ?
April 29, 2018
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
Copyright © 2025 Bayalu