Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವು-ಮರೆವಿನಾಟ
Share:
Poems August 8, 2021 ಕೆ.ಆರ್ ಮಂಗಳಾ

ಅರಿವು-ಮರೆವಿನಾಟ

ನೀನರಿಯೆ ನಾನಾರೆಂದು
ನಾಮರೆತೆ ನೀನಾರೆಂದು
ನನ್ನಲ್ಲೇ ನೀನಿದ್ದರೂ
ನಿನ್ನಿಂದಲೇ ನಾ ಬದುಕಿದ್ದರೂ…
ಇದೇ ಅಲ್ಲವೇ ವಿಸ್ಮಯ?

ನಾ-ನೀನೆಂಬ ಉಭಯವೇ ಇಲ್ಲ
ಭ್ರಮೆಗೆ ಬಲಿಯಾಗದೆ
ತಿಳಿದು ನೋಡೆಂದ ಗುರು-
ನೀನೇ ನಾನೋ, ನಾನೇ ನೀನೋ…
ಮತ್ತೇ ಶುರುವಾಯ್ತು ಗೊಂದಲ.

ನೀನು ನೀನೆಂದು
ಕನವರಿಸುತಿರುವುದೆಲ್ಲ ಬುದ್ಧಿಯ ಬೇಧ
ನಾನು ನಾನು ಎಂದು
ಬಡಬಡಿಸುತಿರುವುದೆಲ್ಲ ಮನದ ಕಸ

ಈ ತಿಪ್ಪೆಯ ಮೇಲೆ ಕೂತು
ಹಿಡಿಯಬಹುದೇ ಸತ್ಯದ ಕೈಯ?
ಅಂಟಿಸಿಕೊಂಡ ರೆಕ್ಕೆಗಳ ನೆಚ್ಚಿ
ಹಾರಲಾದೀತೆ ಬಯಲಿನತ್ತ?

ಬಣ್ಣಬಣ್ಣದ ಮಾತುಗಳೆಲ್ಲ
ಮೌನದಲಿ ಕರಗಿ
ಎಲ್ಲ ಖಾಲಿಯಾಗುವ ತನಕ
ಕೇಳಲಾದೀತೆ ಎದೆಯ ಗುಟ್ಟು?

Previous post ಹುಡುಕಾಟ…
ಹುಡುಕಾಟ…
Next post ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ

Related Posts

ಗೆರೆ ಎಳೆಯದೆ…
Share:
Poems

ಗೆರೆ ಎಳೆಯದೆ…

October 13, 2022 ಜ್ಯೋತಿಲಿಂಗಪ್ಪ
ನೀನು ಕೂಗುವ ತನಕ ನನ್ನ ಕಿವಿಯಲಿ ಸದ್ದಿರಲಿಲ್ಲ ನನ್ನ ಸದ್ದಲಿ ನಿನ್ನ ಕಿವಿಯು ತೆರೆಯಲಿಲ್ಲ ನನ್ನ ನಿನ್ನ ಪ್ರತಿಷ್ಠೆ ಕಣ್ಣಲಿ ಬೆಳಕಾಗಲಿಲ್ಲ ಈ ಗಾಯಕೆ ಮುಲಾಮು ನಿನ್ನಿಂದ...
ದಡ ಸೋಂಕದ ಅಲೆಗಳು
Share:
Poems

ದಡ ಸೋಂಕದ ಅಲೆಗಳು

July 10, 2025 ಜ್ಯೋತಿಲಿಂಗಪ್ಪ
ನದಿ ಕೂಡುವ ಕಡಲ ಅಂಚು ನಿಂತು ಸಂಬಂಧ ಹುಡುಕುತಿರುವೆ ಕಡಲ ಸೇರುವ ನೀರು ನದಿ ಯಾವುದು ಕಡಲು ಯಾವುದು ಸಂಬಂಧ ಅಸಂಬಂಧ ಎರಡೆಂಬ ಭಿನ್ನ ಅಳಿಯದೇ.. ದಾರಿ ತೋರುವ ಕೈಯ ಹಿಡಿದಿರುವೆ...

Comments 2

  1. Jyothilingappa
    Aug 9, 2021 Reply

    ಬುದ್ಧಿಯ ಬೇಧ
    ಮನದ ಕಸ… ಆಹಾ!

  2. ಪೇರೂರು ಜಾರು, ಮಂಗಳೂರು
    Aug 14, 2021 Reply

    ಅರಿವು ಮರೆವು
    ಅರಿತೇ ಮರೆಯುವುದು
    ಅರಿಯದೇ ಮರೆಯುವುದು
    ಕೆಲವ ಕುರಿತು ಮರೆಯುವುದು
    ಬಯಲಾಗು ಮರೆಯುವುದು
    ಎಲ್ಲ ಆಟಕ್ಕೂ ಕೊನೆ ತಿಳಿ
    ಅದೇ ಅರಿವು ತಿಳಿಯದೊಡೆ
    ಬಾಳ ಮರೆವು
    ಆಟ ಮುಗಿಯಲೇ ಬೇಕು
    ಮಂಗಳ ಹಾಡಲೇ ಬೇಕು
    (ಮಂಗಳಾ ಬರೆಯಲೂ ಬೇಕು)

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!
September 14, 2024
ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
August 6, 2022
ನಿಜ ನನಸಿನ ತಾವ…
ನಿಜ ನನಸಿನ ತಾವ…
July 10, 2023
ತತ್ವಪದಗಳ ಜಾಡು ಹಿಡಿದು…
ತತ್ವಪದಗಳ ಜಾಡು ಹಿಡಿದು…
October 6, 2020
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
ಒಳಗಣ ಮರ
ಒಳಗಣ ಮರ
March 12, 2022
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
Copyright © 2026 Bayalu