Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರ್ಥ – ವ್ಯರ್ಥ
Share:
Poems April 5, 2026 ಜಬೀವುಲ್ಲಾ ಎಂ.ಅಸದ್

ಅರ್ಥ – ವ್ಯರ್ಥ

ಮುಗಿಲಿಗೆ ಜಿಗಿದ ಪಾದ
ಮಸ್ತಕದ ಕಂದಕದಲ್ಲಿ ಚಿಗುರಿ
ಶತಮಾನಗಳ ಮೊಳೆ ಹೊಡೆದ
ಬಿಸಿ ನೆತ್ತರು ಹೆಪ್ಪುಗಟ್ಟಿದ ಗುರುತು
ಕಾಲದ ಸಹಿಯಾಗಿ ಬದಲಾಗಿ
ಉಸಿರ ಗೊರಿಯೊಳಗೆ ಬೆರೆತು
ಹೆಜ್ಜೆ ಗುರುತುಗಳಲ್ಲಿ ಕಣ್ಣುಗಳು
ಬುಗುರಿಯಾಗಿ ಗರಗರ ತಿರುಗಿ
ಕುರುಡು ದಾರಿಯ ಅರಸಿ

ನೆರಳಿಗೆ ಬಿದ್ದ ಬೆಂಕಿ
ಯ ಆರಿಸುವ ಯತ್ನದಲಿ
ಆತ್ಮವೂ ಧಘಧಗಿಸಿ ಉರಿದು
ಆವಿಯಾಗಿ ಕರಗಿ
ಅನಂತತೆಯ ಶೂನ್ಯದಲಿ

ಹೊಕ್ಕುಳ ಬಳ್ಳಿ ಸುತ್ತಿದ ನಾಲಿಗೆ
ಚಡಪಡಿಸುತಿದೆ ಒಂದೇ ಸಮನೆ
ದಿಕ್ಕಿಲ್ಲದ ದೃಷ್ಟಿ ಗೋಡೆಗೆ ಬಡಿದು
ನೆಲಕೆ ಬಿದ್ದು ಹೊರಳಾಡಿ
ಅತ್ತು

ಕಂಬನಿಗಳ ಕನ್ನಡಿಯ ಯೋಮದಲ್ಲಿ
ಅಲೆಮಾರಿ ಒಂಟಿ ಹಕ್ಕಿಯ
ಅನಾಥ ಸದ್ದು ಮೊಳಗಿ
ರೆಕ್ಕೆ ಮುರಿದ ನೋವು ಹೂ ಮುಡಿದು
ಮಡಿದ ಹೃದಯದ ಮಣ್ಣಲ್ಲಿ ಹರಿದು
ಅಂತರಂಗದ ಕಣಿವೆಯಲಿ ನದಿಯಾಗಿ ಉಕ್ಕಿ
ಕಾಣದಾಯಿತು ಕಡಲು ಬಿಕ್ಕಿ

ಎಲ್ಲೊ ಬಿದ್ದಿದೆ ಆ ಮುರಿದ ಮರದ ಕಾಲು
ಸೂರ್ಯ ಸಾಯುವ ಈ ಸರಿಹೊತ್ತಲಿ
ಹೊತ್ತಿಸದ ದೀಪದ ನೆರಳನು
ಸುಮ್ಮನೆ ಹುಡುಕದಿರು ನೀನು

ಕತ್ತಲ ಬೀಜದ ಮೊಳಕೆಯ ಮಿಂಚು
ಹೊಂಚು ಹಾಕುತಿದೆ
ಕಟ್ಟಿದ ಅರಿವೆಯ ಬಿಡಿಸಿ
ಅರಿವಿನ ಕಂಗಳ ಮಿಡಿಸಿ
ಕಾಣು, ಕಾಣುವುದೇನು?
ಕಂಡರೆ, ಕಂಡಿಲ್ಲ ನೀನು
ಏನನ್ನೂ…

Previous post ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
Next post ನನ್ನನ್ನು ಕ್ಷಮಿಸು
ನನ್ನನ್ನು ಕ್ಷಮಿಸು

Related Posts

ಕ್ವಾಂಟಮ್ ಮೋಡಿ
Share:
Poems

ಕ್ವಾಂಟಮ್ ಮೋಡಿ

November 9, 2021 ಜ್ಯೋತಿಲಿಂಗಪ್ಪ
ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು ಎಣಿಸಲಾರೆ ಈ ಬಯಲ ಹೆಜ್ಜೆ ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ ನನ್ನೀ ನೆರಳಾಟವ ಮೆಚ್ಚಿದೆ ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ ಈಗ...
ಭಾರ
Share:
Poems

ಭಾರ

October 6, 2020 ಕೆ.ಆರ್ ಮಂಗಳಾ
ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...

Comments 1

  1. ಸಿದ್ದು ಪಾಟೀಲ್, ಗೌರಿಬಿದನೂರು
    Apr 9, 2026 Reply

    ಕಾಣುತ್ತಿರುವುದು, ಕಂಡೂ ಕಾಣದಿರುವುದು- ಇವುಗಳ ತಾಕಲಾಟದಲ್ಲಿ ಅರ್ಥಗಳು ವ್ಯರ್ಥಗಳಾಗಿ, ವ್ಯರ್ಥವೆಂದವುಗಳು ಅರ್ಥವನ್ನು ಹುದುಗಿಸಿಕೊಂಡ ಪರಿ ಈ ಜಗ, ಈ ಜೀವನ. ಸೊಗಸಾದ ಕವನ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
September 10, 2022
ತುತ್ತೂರಿ…
ತುತ್ತೂರಿ…
June 10, 2023
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ಹಣತೆಯ ಹಂಗು
ಹಣತೆಯ ಹಂಗು
October 19, 2025
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
ಆಸರೆ
ಆಸರೆ
August 6, 2022
ಹುಲಿ ಸವಾರಿ…
ಹುಲಿ ಸವಾರಿ…
June 10, 2023
Copyright © 2026 Bayalu