Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರ್ಥ – ವ್ಯರ್ಥ
Share:
Poems April 5, 2026 ಜಬೀವುಲ್ಲಾ ಎಂ.ಅಸದ್

ಅರ್ಥ – ವ್ಯರ್ಥ

ಮುಗಿಲಿಗೆ ಜಿಗಿದ ಪಾದ
ಮಸ್ತಕದ ಕಂದಕದಲ್ಲಿ ಚಿಗುರಿ
ಶತಮಾನಗಳ ಮೊಳೆ ಹೊಡೆದ
ಬಿಸಿ ನೆತ್ತರು ಹೆಪ್ಪುಗಟ್ಟಿದ ಗುರುತು
ಕಾಲದ ಸಹಿಯಾಗಿ ಬದಲಾಗಿ
ಉಸಿರ ಗೊರಿಯೊಳಗೆ ಬೆರೆತು
ಹೆಜ್ಜೆ ಗುರುತುಗಳಲ್ಲಿ ಕಣ್ಣುಗಳು
ಬುಗುರಿಯಾಗಿ ಗರಗರ ತಿರುಗಿ
ಕುರುಡು ದಾರಿಯ ಅರಸಿ

ನೆರಳಿಗೆ ಬಿದ್ದ ಬೆಂಕಿ
ಯ ಆರಿಸುವ ಯತ್ನದಲಿ
ಆತ್ಮವೂ ಧಘಧಗಿಸಿ ಉರಿದು
ಆವಿಯಾಗಿ ಕರಗಿ
ಅನಂತತೆಯ ಶೂನ್ಯದಲಿ

ಹೊಕ್ಕುಳ ಬಳ್ಳಿ ಸುತ್ತಿದ ನಾಲಿಗೆ
ಚಡಪಡಿಸುತಿದೆ ಒಂದೇ ಸಮನೆ
ದಿಕ್ಕಿಲ್ಲದ ದೃಷ್ಟಿ ಗೋಡೆಗೆ ಬಡಿದು
ನೆಲಕೆ ಬಿದ್ದು ಹೊರಳಾಡಿ
ಅತ್ತು

ಕಂಬನಿಗಳ ಕನ್ನಡಿಯ ಯೋಮದಲ್ಲಿ
ಅಲೆಮಾರಿ ಒಂಟಿ ಹಕ್ಕಿಯ
ಅನಾಥ ಸದ್ದು ಮೊಳಗಿ
ರೆಕ್ಕೆ ಮುರಿದ ನೋವು ಹೂ ಮುಡಿದು
ಮಡಿದ ಹೃದಯದ ಮಣ್ಣಲ್ಲಿ ಹರಿದು
ಅಂತರಂಗದ ಕಣಿವೆಯಲಿ ನದಿಯಾಗಿ ಉಕ್ಕಿ
ಕಾಣದಾಯಿತು ಕಡಲು ಬಿಕ್ಕಿ

ಎಲ್ಲೊ ಬಿದ್ದಿದೆ ಆ ಮುರಿದ ಮರದ ಕಾಲು
ಸೂರ್ಯ ಸಾಯುವ ಈ ಸರಿಹೊತ್ತಲಿ
ಹೊತ್ತಿಸದ ದೀಪದ ನೆರಳನು
ಸುಮ್ಮನೆ ಹುಡುಕದಿರು ನೀನು

ಕತ್ತಲ ಬೀಜದ ಮೊಳಕೆಯ ಮಿಂಚು
ಹೊಂಚು ಹಾಕುತಿದೆ
ಕಟ್ಟಿದ ಅರಿವೆಯ ಬಿಡಿಸಿ
ಅರಿವಿನ ಕಂಗಳ ಮಿಡಿಸಿ
ಕಾಣು, ಕಾಣುವುದೇನು?
ಕಂಡರೆ, ಕಂಡಿಲ್ಲ ನೀನು
ಏನನ್ನೂ…

Previous post ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
Next post ನನ್ನನ್ನು ಕ್ಷಮಿಸು
ನನ್ನನ್ನು ಕ್ಷಮಿಸು

Related Posts

ಹಣತೆಯ ಹಂಗು
Share:
Poems

ಹಣತೆಯ ಹಂಗು

October 19, 2025 ಕೆ.ಆರ್ ಮಂಗಳಾ
ನಾನೆಂಬ ಕತ್ತಲೆಗೆ ನೀನೆಂಬ ಜ್ಯೋತಿ ನಾನಿದ್ದಾಗ ನೀ ಇರಲೇ ಬೇಕೆನುವ ತರ್ಕ ನಾನು ಕರಗದೆ ನೀನಾಗಲಾರೆ ನೀನು ಸರಿಯದೇ ಬೆಳಕ ಕಾಣಲಾರೆ… ಕತ್ತಲೆಗಲ್ಲವೆ ಬೆಳಕಿನ ಮೋಹ? ಕೈಯ ಹಣತೆಯಲಿ...
ನನ್ನ-ನಿನ್ನ ನಡುವೆ
Share:
Poems

ನನ್ನ-ನಿನ್ನ ನಡುವೆ

June 5, 2021 ಕೆ.ಆರ್ ಮಂಗಳಾ
ನನ್ನ-ನಿನ್ನ ನಡುವೆ ಗೋಡೆ ಎಬ್ಬಿಸಿದವರಾರು ಪರದೆ ಬಿಟ್ಟವರಾರು? ಕತ್ತಲು ತುಂಬಿದವರಾರು? ಮಂಜು ಕವಿಸಿದವರಾರು? ನಿನ್ನಿಂದ ನನ್ನ ದೂರ ಮಾಡಿದವರಾರು? ನನ್ನ-ನಿನ್ನ ನಡುವೆ ಕಂದ...

Comments 1

  1. ಸಿದ್ದು ಪಾಟೀಲ್, ಗೌರಿಬಿದನೂರು
    Apr 9, 2026 Reply

    ಕಾಣುತ್ತಿರುವುದು, ಕಂಡೂ ಕಾಣದಿರುವುದು- ಇವುಗಳ ತಾಕಲಾಟದಲ್ಲಿ ಅರ್ಥಗಳು ವ್ಯರ್ಥಗಳಾಗಿ, ವ್ಯರ್ಥವೆಂದವುಗಳು ಅರ್ಥವನ್ನು ಹುದುಗಿಸಿಕೊಂಡ ಪರಿ ಈ ಜಗ, ಈ ಜೀವನ. ಸೊಗಸಾದ ಕವನ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನನ್ನ ಶರಣರು…
ನನ್ನ ಶರಣರು…
April 9, 2021
ಇದ್ದಷ್ಟೇ…
ಇದ್ದಷ್ಟೇ…
January 10, 2021
ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
April 5, 2026
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
ಮನೆ ನೋಡಾ ಬಡವರು
ಮನೆ ನೋಡಾ ಬಡವರು
April 29, 2018
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
April 6, 2024
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
Copyright © 2026 Bayalu