Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರ್ಥ – ವ್ಯರ್ಥ
Share:
Poems April 5, 2026 ಜಬೀವುಲ್ಲಾ ಎಂ.ಅಸದ್

ಅರ್ಥ – ವ್ಯರ್ಥ

ಮುಗಿಲಿಗೆ ಜಿಗಿದ ಪಾದ
ಮಸ್ತಕದ ಕಂದಕದಲ್ಲಿ ಚಿಗುರಿ
ಶತಮಾನಗಳ ಮೊಳೆ ಹೊಡೆದ
ಬಿಸಿ ನೆತ್ತರು ಹೆಪ್ಪುಗಟ್ಟಿದ ಗುರುತು
ಕಾಲದ ಸಹಿಯಾಗಿ ಬದಲಾಗಿ
ಉಸಿರ ಗೊರಿಯೊಳಗೆ ಬೆರೆತು
ಹೆಜ್ಜೆ ಗುರುತುಗಳಲ್ಲಿ ಕಣ್ಣುಗಳು
ಬುಗುರಿಯಾಗಿ ಗರಗರ ತಿರುಗಿ
ಕುರುಡು ದಾರಿಯ ಅರಸಿ

ನೆರಳಿಗೆ ಬಿದ್ದ ಬೆಂಕಿ
ಯ ಆರಿಸುವ ಯತ್ನದಲಿ
ಆತ್ಮವೂ ಧಘಧಗಿಸಿ ಉರಿದು
ಆವಿಯಾಗಿ ಕರಗಿ
ಅನಂತತೆಯ ಶೂನ್ಯದಲಿ

ಹೊಕ್ಕುಳ ಬಳ್ಳಿ ಸುತ್ತಿದ ನಾಲಿಗೆ
ಚಡಪಡಿಸುತಿದೆ ಒಂದೇ ಸಮನೆ
ದಿಕ್ಕಿಲ್ಲದ ದೃಷ್ಟಿ ಗೋಡೆಗೆ ಬಡಿದು
ನೆಲಕೆ ಬಿದ್ದು ಹೊರಳಾಡಿ
ಅತ್ತು

ಕಂಬನಿಗಳ ಕನ್ನಡಿಯ ಯೋಮದಲ್ಲಿ
ಅಲೆಮಾರಿ ಒಂಟಿ ಹಕ್ಕಿಯ
ಅನಾಥ ಸದ್ದು ಮೊಳಗಿ
ರೆಕ್ಕೆ ಮುರಿದ ನೋವು ಹೂ ಮುಡಿದು
ಮಡಿದ ಹೃದಯದ ಮಣ್ಣಲ್ಲಿ ಹರಿದು
ಅಂತರಂಗದ ಕಣಿವೆಯಲಿ ನದಿಯಾಗಿ ಉಕ್ಕಿ
ಕಾಣದಾಯಿತು ಕಡಲು ಬಿಕ್ಕಿ

ಎಲ್ಲೊ ಬಿದ್ದಿದೆ ಆ ಮುರಿದ ಮರದ ಕಾಲು
ಸೂರ್ಯ ಸಾಯುವ ಈ ಸರಿಹೊತ್ತಲಿ
ಹೊತ್ತಿಸದ ದೀಪದ ನೆರಳನು
ಸುಮ್ಮನೆ ಹುಡುಕದಿರು ನೀನು

ಕತ್ತಲ ಬೀಜದ ಮೊಳಕೆಯ ಮಿಂಚು
ಹೊಂಚು ಹಾಕುತಿದೆ
ಕಟ್ಟಿದ ಅರಿವೆಯ ಬಿಡಿಸಿ
ಅರಿವಿನ ಕಂಗಳ ಮಿಡಿಸಿ
ಕಾಣು, ಕಾಣುವುದೇನು?
ಕಂಡರೆ, ಕಂಡಿಲ್ಲ ನೀನು
ಏನನ್ನೂ…

Previous post ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
Next post ನನ್ನನ್ನು ಕ್ಷಮಿಸು
ನನ್ನನ್ನು ಕ್ಷಮಿಸು

Related Posts

ಮಣ್ಣಿನ ಹೃದಯದಲಿ
Share:
Poems

ಮಣ್ಣಿನ ಹೃದಯದಲಿ

September 13, 2025 ಜಬೀವುಲ್ಲಾ ಎಂ.ಅಸದ್
ಅಳಿದ ಮೇಲೆ ಉಳಿಯುವುದೇನು? ಕೇವಲ ಕುರುಹು ಅಷ್ಟೇ! ಗಾಳಿ ಬೀಸಿದಾಗ ಎಲೆ ಉದುರಿದ ಹಾಗೇ ಕಾಲ ಉರುಳುವ ಬಗೆ ಇರುಳ ಕಣ್ಣಿನಾಗಸದಿ ಕನಸು ನಾವೆಯಾಗಿ ತೇಲುವುದು ಚುಚ್ಚುವ ಮುಳ್ಳುಗಳ...
ನೆಲದ ನಿಧಾನ
Share:
Poems

ನೆಲದ ನಿಧಾನ

April 29, 2018 ಕೆ.ಆರ್ ಮಂಗಳಾ
ನನ್ನ ಶರಣರು ಅವರು ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...

Comments 1

  1. ಸಿದ್ದು ಪಾಟೀಲ್, ಗೌರಿಬಿದನೂರು
    Apr 9, 2026 Reply

    ಕಾಣುತ್ತಿರುವುದು, ಕಂಡೂ ಕಾಣದಿರುವುದು- ಇವುಗಳ ತಾಕಲಾಟದಲ್ಲಿ ಅರ್ಥಗಳು ವ್ಯರ್ಥಗಳಾಗಿ, ವ್ಯರ್ಥವೆಂದವುಗಳು ಅರ್ಥವನ್ನು ಹುದುಗಿಸಿಕೊಂಡ ಪರಿ ಈ ಜಗ, ಈ ಜೀವನ. ಸೊಗಸಾದ ಕವನ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗುರುಪಥ
ಗುರುಪಥ
January 4, 2020
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
February 11, 2022
ಶಿವಾಚಾರ
ಶಿವಾಚಾರ
April 9, 2021
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
January 7, 2022
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
Copyright © 2026 Bayalu