Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆಗು ಕನ್ನಡಿಯಂತೆ…
Share:
Poems September 13, 2025 ಕೆ.ಆರ್ ಮಂಗಳಾ

ಆಗು ಕನ್ನಡಿಯಂತೆ…

ಗ್ರಹಿಸು
ಸಂಗ್ರಹಿಸಬೇಡ
ಏನನ್ನೂ…
ಕಂಡದ್ದು ಕೇಳಿದ್ದು
ಮೂಸಿದ್ದು ಮುಟ್ಟಿದ್ದು
ಅನುಭವಿಸಿದ್ದು
ಓದಿದ್ದು ಕೂಡ…

ತೂರಿಹೋಗಲಿ
ಅವಿತ
ವಾಸನೆಗಳೆಲ್ಲಾ
ಮುಗಿಬಿದ್ದು
ಬರುವ
ಯೋಚನೆಗಳೆಲ್ಲಾ
ಹೊಂಚು
ಹಾಕುವ
ಸಂಚಯಗಳೆಲ್ಲಾ…
ಸಂಕಲ್ಪ
ವಿಕಲ್ಪಗಳ
ತೊಳಲಾಟಗಳೆಲ್ಲಾ…

ಮಾತು
ಬಲಿಯದ ಮುನ್ನ
ಮೌನ ತಾಳು
ಮೌನ
ಕರಗುವ ಮುನ್ನ
ಖಾಲಿಯಾಗು…

ಸಹನಳಾಗು
ಭೂಮಿಯಂತೆ
ಸ್ವತಂತ್ರವಾಗಿರು
ಗಾಳಿಯಂತೆ
ಹರಿಯುತಿರು
ನೀರಿನಂತೆ
ಶುದ್ಧವಾಗಿರು
ಬೆಂಕಿಯಂತೆ
ಮುಕ್ತವಾಗಿರು
ಆಗಸದಂತೆ…

ಗುರು-
ಎಲ್ಲ ಹೇಳಿಯೂ
ಹೇಳದ ಗುಟ್ಟು…
ತೋರುವ ಕನ್ನಡಿ
ಕೂಡಿಡದು ಏನನೂ…
ಕನ್ನಡಿಯಾದರಲ್ಲವೆ
ಮನವೆಂಬುದು
ಬೇರಲ್ಲಾ
ಮಹಾದೇವನ ಅರುಹು.

Previous post ನಾನು  ಬಿಂಬ
ನಾನು ಬಿಂಬ
Next post ಕುವೆಂಪು ಕಣ್ಣಲ್ಲಿ ಬಸವಣ್ಣ
ಕುವೆಂಪು ಕಣ್ಣಲ್ಲಿ ಬಸವಣ್ಣ

Related Posts

ನೆಟ್ಟ ನಂಜು ಹಾಲೀಂಟದು
Share:
Poems

ನೆಟ್ಟ ನಂಜು ಹಾಲೀಂಟದು

June 5, 2021 Bayalu
ಯಾರ ಮನೆ ಯಾರ ತೆನೆ ಯಾರ ಅನ್ನ ಯಾರ ಚಿನ್ನ ಸಾವಲಿ ಜೊತೆ ಬರಲಿಹುದೆ ಕಟ್ಟಿ ಒಯ್ಯಲಾಗುವುದೆ ಆ ಬಂಧು ಈ ಬಳಗ ಆ ಹಣವು ಈ ಎಣೆಯು ಕಟ್ಟು ಕಟ್ಟಿ ಇಟ್ಟ ಗಂಟು ಯಾರಿಗೊ ಹೋಗಲಿಕುಂಟು...
ಹುಡುಕಿಕೊಡು ಗುರುವೇ…
Share:
Poems

ಹುಡುಕಿಕೊಡು ಗುರುವೇ…

July 4, 2022 ಕೆ.ಆರ್ ಮಂಗಳಾ
ದೇಹದಲ್ಲೋ ಭಾವದಲ್ಲೋ ಎದೆಯ ಒಳಗೋ ತಲೆಯ ಒಳಗೋ ಕಳೆದುಹೋಗಿದ್ದೇನೆ ನಾನು ಕಳೆದುಹೋಗಿದ್ದೇನೆ… ಕುಲದಲ್ಲೋ ಛಲದಲ್ಲೋ ಹಠದಲ್ಲೋ ಅಹಮಿನಲ್ಲೋ ಸೇರಿಹೋಗಿದ್ದೇನೆ ನಾನು...

Comments 1

  1. ಸುರೇಶ್ ಪಾಟೀಲ್
    Oct 2, 2025 Reply

    ಅಕ್ಕಾ, ಪದೇಪದೇ ಓದಿಸಿಕೊಳ್ಳುವ ಮಾತುಗಳಿವೆ ನಿಮ್ಮ ಕವನದಲ್ಲಿ, ಬಹಳ ಹಿಡಿಸಿತು. ಅಂತಹ ಗುರು ಸಿಗುವ ಪುಣ್ಯ ಎಲ್ಲರಿಗೂ ಇರುವುದಿಲ್ಲ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ
June 5, 2021
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
ಬರಿದಾಗುವ ಬೆರಗು
ಬರಿದಾಗುವ ಬೆರಗು
February 6, 2025
ಶಿವಯೋಗ
ಶಿವಯೋಗ
July 4, 2021
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಈ  ದಾರಿ…
ಈ ದಾರಿ…
May 10, 2023
ನನ್ನೆದುರು ನಾ…
ನನ್ನೆದುರು ನಾ…
March 6, 2024
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
Copyright © 2026 Bayalu