Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆಗು ಕನ್ನಡಿಯಂತೆ…
Share:
Poems September 13, 2025 ಕೆ.ಆರ್ ಮಂಗಳಾ

ಆಗು ಕನ್ನಡಿಯಂತೆ…

ಗ್ರಹಿಸು
ಸಂಗ್ರಹಿಸಬೇಡ
ಏನನ್ನೂ…
ಕಂಡದ್ದು ಕೇಳಿದ್ದು
ಮೂಸಿದ್ದು ಮುಟ್ಟಿದ್ದು
ಅನುಭವಿಸಿದ್ದು
ಓದಿದ್ದು ಕೂಡ…

ತೂರಿಹೋಗಲಿ
ಅವಿತ
ವಾಸನೆಗಳೆಲ್ಲಾ
ಮುಗಿಬಿದ್ದು
ಬರುವ
ಯೋಚನೆಗಳೆಲ್ಲಾ
ಹೊಂಚು
ಹಾಕುವ
ಸಂಚಯಗಳೆಲ್ಲಾ…
ಸಂಕಲ್ಪ
ವಿಕಲ್ಪಗಳ
ತೊಳಲಾಟಗಳೆಲ್ಲಾ…

ಮಾತು
ಬಲಿಯದ ಮುನ್ನ
ಮೌನ ತಾಳು
ಮೌನ
ಕರಗುವ ಮುನ್ನ
ಖಾಲಿಯಾಗು…

ಸಹನಳಾಗು
ಭೂಮಿಯಂತೆ
ಸ್ವತಂತ್ರವಾಗಿರು
ಗಾಳಿಯಂತೆ
ಹರಿಯುತಿರು
ನೀರಿನಂತೆ
ಶುದ್ಧವಾಗಿರು
ಬೆಂಕಿಯಂತೆ
ಮುಕ್ತವಾಗಿರು
ಆಗಸದಂತೆ…

ಗುರು-
ಎಲ್ಲ ಹೇಳಿಯೂ
ಹೇಳದ ಗುಟ್ಟು…
ತೋರುವ ಕನ್ನಡಿ
ಕೂಡಿಡದು ಏನನೂ…
ಕನ್ನಡಿಯಾದರಲ್ಲವೆ
ಮನವೆಂಬುದು
ಬೇರಲ್ಲಾ
ಮಹಾದೇವನ ಅರುಹು.

Previous post ನಾನು  ಬಿಂಬ
ನಾನು ಬಿಂಬ
Next post ಕುವೆಂಪು ಕಣ್ಣಲ್ಲಿ ಬಸವಣ್ಣ
ಕುವೆಂಪು ಕಣ್ಣಲ್ಲಿ ಬಸವಣ್ಣ

Related Posts

…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
ಆ ದಾರಿಯೇನು ಕುರುಡೇ…
Share:
Poems

ಆ ದಾರಿಯೇನು ಕುರುಡೇ…

June 5, 2021 ಜ್ಯೋತಿಲಿಂಗಪ್ಪ
ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ ಈ ಹುಣುಸೇ ಮರದ ಹುಳಿಗೇನು ಮುಪ್ಪೇ ಕನ್ಯೆಯ ಬೆನ್ನ ಬೆವರ ಉಪ್ಪು...

Comments 1

  1. ಸುರೇಶ್ ಪಾಟೀಲ್
    Oct 2, 2025 Reply

    ಅಕ್ಕಾ, ಪದೇಪದೇ ಓದಿಸಿಕೊಳ್ಳುವ ಮಾತುಗಳಿವೆ ನಿಮ್ಮ ಕವನದಲ್ಲಿ, ಬಹಳ ಹಿಡಿಸಿತು. ಅಂತಹ ಗುರು ಸಿಗುವ ಪುಣ್ಯ ಎಲ್ಲರಿಗೂ ಇರುವುದಿಲ್ಲ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
September 10, 2022
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ಶರಣನಾಗುವ ಪರಿ
ಶರಣನಾಗುವ ಪರಿ
June 3, 2019
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
ಧರೆಗೆ ಸೂತಕವುಂಟೆ?
ಧರೆಗೆ ಸೂತಕವುಂಟೆ?
August 11, 2025
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
Copyright © 2026 Bayalu