Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರಡು ಎಲ್ಲಿ?
Share:
Poems October 5, 2021 ಕೆ.ಆರ್ ಮಂಗಳಾ

ಎರಡು ಎಲ್ಲಿ?

ನಾನು ದ್ವೈತವೋ ಅದ್ವೈತವೋ
ಹೀಗೊಂದು ಪ್ರಶ್ನೆ ಎದ್ದದ್ದೇ ತಡ
ನಡೆದಿತ್ತು ಒಳಗೊಂದು ತಾಕಲಾಟ-

ಒಂದೆಡೆ-
ನೆನಪುಗಳಿಗೆ, ಕನಸುಗಳಿಗೆ
ಪ್ರೀತಿಯ ಕನವರಿಕೆಗಳಿಗೆ
ಎದೆಯ ಹಂಬಲಗಳಿಗೆಲ್ಲ
ನಾನೇ ಕರುಳಿನ ಸೆಲೆ
ಪೋಣಿಸುತಾ ಮಾತುಗಳ
ನಾನಿಲ್ಲದೆ ನೀನಿಲ್ಲ ಎಂದಿತು ಮನ.

ಇನ್ನೊಂದೆಡೆ-
ಪರವಸ್ತುವಿನ ಪ್ರತಿನಿಧಿ ನಾ
ಜಗತ್ಕರ್ತನ ಪ್ರತಿಬಿಂಬ
ಎಲ್ಲದರ ಸೂತ್ರಧಾರಿ
ನಾನೇ ಅಂತಿಮಸತ್ಯ
ಆತ್ಮದ ಪರ ನಡೆದಿತ್ತು
ಚಿತ್ತದ ವಕಾಲತ್ತು.

ಮನವು ಕಲ್ಪನೆಯಾಟ
ಆತ್ಮ ಜ್ಞಾನದ ನೋಟ
ಮನವು- ಆತ್ಮಗಳೆರಡೂ
ನಾನಲ್ಲ ಗುರುವೇ.
ಇಲ್ಲದ ಮನವೂ ಅಲ್ಲ
ಕಲ್ಪಿತ ಆತ್ಮನೂ ಅಲ್ಲ
ಎರಡರ ಹಂಗಳಿದಲ್ಲದೆ
ಆಳ-ನಿರಾಳವಿಲ್ಲ.

Previous post ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
Next post ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…

Related Posts

ನನ್ನ ಬುದ್ಧ ಮಹಾಗುರು
Share:
Poems

ನನ್ನ ಬುದ್ಧ ಮಹಾಗುರು

January 4, 2020 ಪದ್ಮಾಲಯ ನಾಗರಾಜ್
ನನ್ನ ಬುದ್ಧ ಮಹಾಗುರುವು… ಧರ್ಮವಲ್ಲ ದೈವವಲ್ಲ ನುಡಿಯಲ್ಲ ಪಡಿಯಲ್ಲ ವಿಗ್ರಹವಲ್ಲ ಅನುಗ್ರಹವಲ್ಲ ಸಂಭ್ರಮವಲ್ಲ ಉತ್ಸವವಲ್ಲ ಸುಖವಲ್ಲ ದುಃಖವಲ್ಲ ವಾದವಲ್ಲ ಬೇಧವಲ್ಲ ಮಂತ್ರವಲ್ಲ...
ಮರೆತೆ…
Share:
Poems

ಮರೆತೆ…

July 4, 2022 ಜ್ಯೋತಿಲಿಂಗಪ್ಪ
ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹೀಗೊಂದು ತಲಪರಿಗೆ (ಭಾಗ-5)
ಹೀಗೊಂದು ತಲಪರಿಗೆ (ಭಾಗ-5)
December 8, 2021
ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
September 14, 2024
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಅನಾದಿ ಕಾಲದ ಗಂಟು…
ಅನಾದಿ ಕಾಲದ ಗಂಟು…
November 10, 2022
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
June 12, 2025
ಶರಣನಾಗುವ ಪರಿ
ಶರಣನಾಗುವ ಪರಿ
June 3, 2019
Copyright © 2025 Bayalu