Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರಡು ಎಲ್ಲಿ?
Share:
Poems October 5, 2021 ಕೆ.ಆರ್ ಮಂಗಳಾ

ಎರಡು ಎಲ್ಲಿ?

ನಾನು ದ್ವೈತವೋ ಅದ್ವೈತವೋ
ಹೀಗೊಂದು ಪ್ರಶ್ನೆ ಎದ್ದದ್ದೇ ತಡ
ನಡೆದಿತ್ತು ಒಳಗೊಂದು ತಾಕಲಾಟ-

ಒಂದೆಡೆ-
ನೆನಪುಗಳಿಗೆ, ಕನಸುಗಳಿಗೆ
ಪ್ರೀತಿಯ ಕನವರಿಕೆಗಳಿಗೆ
ಎದೆಯ ಹಂಬಲಗಳಿಗೆಲ್ಲ
ನಾನೇ ಕರುಳಿನ ಸೆಲೆ
ಪೋಣಿಸುತಾ ಮಾತುಗಳ
ನಾನಿಲ್ಲದೆ ನೀನಿಲ್ಲ ಎಂದಿತು ಮನ.

ಇನ್ನೊಂದೆಡೆ-
ಪರವಸ್ತುವಿನ ಪ್ರತಿನಿಧಿ ನಾ
ಜಗತ್ಕರ್ತನ ಪ್ರತಿಬಿಂಬ
ಎಲ್ಲದರ ಸೂತ್ರಧಾರಿ
ನಾನೇ ಅಂತಿಮಸತ್ಯ
ಆತ್ಮದ ಪರ ನಡೆದಿತ್ತು
ಚಿತ್ತದ ವಕಾಲತ್ತು.

ಮನವು ಕಲ್ಪನೆಯಾಟ
ಆತ್ಮ ಜ್ಞಾನದ ನೋಟ
ಮನವು- ಆತ್ಮಗಳೆರಡೂ
ನಾನಲ್ಲ ಗುರುವೇ.
ಇಲ್ಲದ ಮನವೂ ಅಲ್ಲ
ಕಲ್ಪಿತ ಆತ್ಮನೂ ಅಲ್ಲ
ಎರಡರ ಹಂಗಳಿದಲ್ಲದೆ
ಆಳ-ನಿರಾಳವಿಲ್ಲ.

Previous post ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
Next post ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…

Related Posts

ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...
ಗುಟುಕು ಆಸೆ…
Share:
Poems

ಗುಟುಕು ಆಸೆ…

May 8, 2024 ಜ್ಯೋತಿಲಿಂಗಪ್ಪ
ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಗಂಟಿನ ನಂಟು
ಗಂಟಿನ ನಂಟು
November 7, 2020
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ನಾನು ಯಾರು? ಎಂಬ ಆಳ ನಿರಾಳ-3
ನಾನು ಯಾರು? ಎಂಬ ಆಳ ನಿರಾಳ-3
May 6, 2020
ಸತ್ಯದ ಬೆನ್ನು ಹತ್ತಿ…
ಸತ್ಯದ ಬೆನ್ನು ಹತ್ತಿ…
April 29, 2018
ನನ್ನ ಶರಣರು…
ನನ್ನ ಶರಣರು…
April 9, 2021
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
February 6, 2025
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
Copyright © 2025 Bayalu