Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಾಯದೊಳಗಣ ಬಯಲು
Share:
Poems November 7, 2020 ಜ್ಯೋತಿಲಿಂಗಪ್ಪ

ಕಾಯದೊಳಗಣ ಬಯಲು

ಈ ಬಯಲು ಗುರುತಿಸಲಾರೆ
ನನ್ನ ಕಣ್ಣ ಎದುರು ನಾನು
ಬಯಸುವ ರೂಹು ಇಲ್ಲ

ಕಣ್ಣು ಹೇಳಿದುದು ಸುಳ್ಳೇ

ನೀ ಬಿಟ್ಟ ಉಸಿರಲೊಂದು
ದನಿ ಇದೆ ನಾ ಕೇಳಲಾರೆ

ಉಸಿರು ಒಳಗಣ ದನಿ
ಉಸಿರು ನುಂಗಿತು
ಕಣ್ಣ ಒಳಗಣ ಉಸಿರು
ನೋಟ ನುಂಗಿತು

ಈ ಗೆರೆ ಕೊರೆದು
ಹೋದವರು ಯಾರು ಯಾರು
ಅಳಿಸದಾ ಗೆರೆಯೇ…

ನಾನು ನಾನೇ ಕೊರೆದುದು ಅಳಿಸದುದು
ನಾ ಹೆತ್ತ ಕೂಸು
ತಾಯಿ ಆಗದಿರೆ ಗಂಡನಿಗೆ ಕಳಂಕ

ಕಾಯ ಉಸಿರು, ಉಸಿರು ಕಾಯ
ಪ್ರಾಣ ಇರುವ ದೇಹ
ದೇಹ ಇರುವ ಪ್ರಾಣ
ಉಸಿರ ಒಳಗಣ ಆ ಸದ್ದು
ಏನದು…

ಒಂದೊಂದು ಕಾಯದಲೂ
ಒಂದು ಚೈತನ್ಯ ಎಂಬರಿವು ಈಗ
ಈಗ ಈ ಐನಸ್ಟೈನ್ ಚೈತನ್ಯ
ಸೂತ್ರ ಬಯಲು

ಬಾಗಿಲಿಗೆ ಮೊಳೆ ಜಡಿದು
ಒಳಗೆ ಕಾಲಿಟ್ಟಿರುವೆ.

Previous post ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
Next post ಗಂಟಿನ ನಂಟು
ಗಂಟಿನ ನಂಟು

Related Posts

ಕನ್ನಡಿ ನಂಟು
Share:
Poems

ಕನ್ನಡಿ ನಂಟು

October 10, 2023 ಜ್ಯೋತಿಲಿಂಗಪ್ಪ
ಮಾಳಿಗೆ ಮನೆ ಮನೆಯೊಳಗಣ ಕತ್ತಲಿಗೆ ಬಯಲೊಳಗೊಂದು ಕನ್ನಡಿ ಕಿಲಾಡಿ ಬೆಳಕು ಕಿಂಡಿಯಲಿ ಹರಿದು ಒಳಗು ಎಲ್ಲಾ ಬೆಳಗು ಕಟ್ಟೆಯಲಿ ಕುಳಿತು ಅಜ್ಜಾ ಮೊಮ್ಮಗನ ಈ ಕನ್ನಡೀ ಕಿಲಾ ಡೀ ಆಟಾ...
ಎಲ್ಲಿದೆ ಈ ಕ್ಷಣ?
Share:
Poems

ಎಲ್ಲಿದೆ ಈ ಕ್ಷಣ?

October 21, 2024 ಕೆ.ಆರ್ ಮಂಗಳಾ
ವರ್ತಮಾನದಲ್ಲಿ ನಡೆಯಲರಿಯದೆ ನುಡಿಯಲರಿಯದೆ ಬಾಳಲರಿಯದೆ ಕಳದೇ ಹೋಗುವ ಬದುಕು ಕಾಣಲಾರದು ಯಾಕೆ- ‘ಈ ಕ್ಷಣ’? ರಾಗಾಲಾಪಗಳ ಬಣ್ಣಗಳಲಿ ಮಿಂದೇಳುತಿರುವಾಗ ಬಯಕೆ ಬೇಗುದಿಗಳಲಿ...

Comments 2

  1. Umesh Patri
    Nov 11, 2020 Reply

    ಕಣ್ಣು ಹೇಳುವುದು ಸುಳ್ಳೋ, ಮನಸ್ಸು ಹೇಳುವುದು ಸುಳ್ಳೋ… ಕೊನೆಗೆ ಈ ಬದುಕೇ ಸುಳ್ಳೋ… ಕವಿಯ ಗೊಂದಲ ಬಿಡುಗಡೆಯಾದರೂ ಓದುಗನ ಗೊಂದಲ ಹಾಗೇ ಉಳಿಯುತ್ತದೆ.

  2. Manikanta Dogila
    Nov 11, 2020 Reply

    ಪ್ರಾಣ ಇರುವ ದೇಹ
    ದೇಹ ಇರುವ ಪ್ರಾಣ… ಕಾಡುವ ಸಾಲುಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ನೋಟದ ಕೂಟ…
ನೋಟದ ಕೂಟ…
May 10, 2023
ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?
October 21, 2024
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಎರವಲು ಮನೆ…
ಎರವಲು ಮನೆ…
August 10, 2023
ಕಾಲನೆಂಬ ಜಾಲಗಾರ…
ಕಾಲನೆಂಬ ಜಾಲಗಾರ…
January 7, 2019
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
July 21, 2024
Copyright © 2025 Bayalu