Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗಂಟಿನ ನಂಟು
Share:
Poems November 7, 2020 ಕೆ.ಆರ್ ಮಂಗಳಾ

ಗಂಟಿನ ನಂಟು

ಕಣ್ಣು ಮುಂಜಾಗಿದ್ದವೋ ಬೆಳಕು ಸಾಲದಾಗಿತ್ತೋ
ನೂಲುವಾಗ ಗೊತ್ತಾಗಲೇ ಇಲ್ಲ
ಎಂಥ ಸಿಕ್ಕುಗಳು ಅಂತೀರಿ!
ನೇಯ್ಗೆಯ ತುಂಬೆಲ್ಲಾ ಗಂಟಿನುಂಡೆಗಳು

ಅಹಮಿಕೆಗೆ ಆಕ್ರೋಶದ ಗಂಟು
ಆಕ್ರೋಶಕೆ ಮದದ ಗಂಟು
ಮದಕೆ ಸೊಕ್ಕಿನ ಗಂಟು
ಸೊಕ್ಕಿಗೆ ತಿರಸ್ಕಾರದ ಗಂಟು
ತಿರಸ್ಕಾರಕ್ಕೆ ಸೇಡಿನ ಗಂಟು
ಸೇಡಿಗೆ ಭಾವದ ಗಂಟು
ಭಾವಕೆ ನಿರೀಕ್ಷೆಯಾ ಗಂಟು
ನಿರೀಕ್ಷೆಗೆ ಪ್ರೇಮದ ಗಂಟು
ಪ್ರೇಮಕೆ ಕಾಮದ ಗಂಟು
ಕಾಮಕ್ಕೆ ಬಯಕೆಯ ಗಂಟು
ಬಯಕೆಗೆ ಆಸೆಯ ಗಂಟು…
ಎಡಕ್ಕೆ ಬಲದ ಗಂಟು
ದ್ವೈತಕ್ಕೆ ಅದ್ವೈತದ ಗಂಟು
ಅಸ್ತಿತ್ವಕೆ ನಾಸ್ತಿತ್ವದ ಗಂಟು
ಮಾತಿಗೆ ಪ್ರತಿಮಾತಿನ ಗಂಟು
ಭಾವಗಳಿಗೆ ನಂಬಿಕೆಯ ಗಂಟು
ನಂಬಿಕೆಗಳಿಗೆ ಅಹಮಿಕೆಯ ಗಂಟು
ನಾನೆಂಬುದಕೆ ನನ್ನದೆಂಬ ಗಂಟು
ಕಾರಣಕ್ಕೆ- ಪ್ರತಿಕಾರಣದ ಗಂಟು…
ಹೀಗೆ ಹಾಕುತ್ತಲೇ ಹೋಗಿದ್ದೇನೆ ಗಂಟಿಗೆ ಗಂಟು

ಈ ಗಂಟುಗಳೇ
ನಡೆವ ದಾರಿಯಲಿ ಮುಳ್ಳಾದವು
ಹೃದಯಗಳ ನಡುವೆ ಬೆಟ್ಟಗಳಾದವು
ಸಂಬಂಧಗಳಲ್ಲಿ ಕಣಿವೆ ಕೊರೆದವು
ಮಾತುಗಳಲ್ಲಿ ವಿಷ ಬಿತ್ತಿದವು
ಗೊಂದಲದಲ್ಲಿ ಮುಳುಗಿಸಿದವು
ಮನದ ತಿಳಿ ಕದಡಿ ಕೊಚ್ಚೆ ಎಬ್ಬಿಸಿದವು…
ಹುಬ್ಬುಗಳ ನಡುವೆ ತೂರಿಕೊಂಡು
ನಗುವ ನುಂಗಿ ಎದೆಯ ಒತ್ತುತ್ತಲೇ ಇದ್ದವು…

ಗುರು ತೋರಿದ ಉಪಾಯದಲಿ
ನೂಲು ಹರಿಯದಂತೆ
ಗಂಟು ಬಿಚ್ಚುವ ಕಲೆ
ಸಿಕ್ಕಾಗದಂತೆ ಎಳೆಯ ನೇಯುವ ಕಲೆ
ಒಂದೊಂದಾಗಿ ತಿಳಿಯತೊಡಗಿತ್ತು
ಕಾರ್ಯ-ಕಾರಣ-ಪರಿಣಾಮಗಳ
ಭವಯಾನದ ಕರ್ಮ ಅರಿವಿಗೆ ನಿಲುಕಿತ್ತು.

Previous post ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
Next post ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ

Related Posts

ಸಾವಿನ ಅರಿವೆ ಕಳಚಿ!
Share:
Poems

ಸಾವಿನ ಅರಿವೆ ಕಳಚಿ!

September 14, 2024 ಜಬೀವುಲ್ಲಾ ಎಂ.ಅಸದ್
ತೆರೆದ ಬೆಂಕಿಯ ಕಣ್ಣಲಿ ತಾವರೆಯ ಪ್ರತಿಬಿಂಬ ಕತ್ತಲೆ ಬೆಳಕಿನ ನಡುವಿನ ಯುದ್ಧ ಮುಗುಳ್ನಕ್ಕ ಬುದ್ಧ! ಕಟ್ಟಿದ ಸೇತುವೆ ಬಳಸಿದ ಲತೆ ಚಿಗುರಿದ ಎಲೆಎಲೆಯ ತುಂಬಾ ಇಬ್ಬನಿಯ ಕಲರವ...
ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...

Comments 1

  1. Harsha m patil
    Nov 11, 2020 Reply

    ಗಂಟಿಗೆ ಗಂಟು ಹಾಕುತ್ತಿರುವ ನಮಗೆ ಬದುಕೇ ಗಂಟಾಗಿ ಹೋಗಿದೆ. ರಿಪೇರಿ ಮಾಡಲು ಸಾಧ್ಯವಿಲ್ಲದಂತೆ ಸಂಬಂಧಗಳನ್ನು ಹಾಳುಮಾಡಿಕೊಂಡಿದ್ದೇವೆ….. ಕಣ್ಣಿಗೆ ಕಟ್ಟುವ ಚಿತ್ರಣ ನೀಡುವ ಕವನ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
ಹುಡುಕಾಟ
ಹುಡುಕಾಟ
July 21, 2024
ಭವ ರಾಟಾಳ
ಭವ ರಾಟಾಳ
September 10, 2022
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ಭಾರ
ಭಾರ
October 6, 2020
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
July 10, 2023
Copyright © 2026 Bayalu