Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ತುದಿಗಳೆರಡು ಇಲ್ಲವಾದಾಗ…
Share:
Poems March 9, 2023 ಕೆ.ಆರ್ ಮಂಗಳಾ

ತುದಿಗಳೆರಡು ಇಲ್ಲವಾದಾಗ…

ಭೂಮಿ- ಆಕಾಶದ ದೂರ ಅಳಿದಾಗ
ಭುವಿಯ ಸೆಳೆತವೂ ಇಲ್ಲ
ಆಗಸದ ಎಳೆತವೂ ಇಲ್ಲ.

ಹಗಲು- ರಾತ್ರಿಗಳ ಭ್ರಮಣ ಸರಿದಾಗ
ಬೆಳಗಿನ ಬಯಕೆಯೂ ಇಲ್ಲ
ಕತ್ತಲೆಯ ಭಯವೂ ಇಲ್ಲ.

ಧರ್ಮ- ಅಧರ್ಮಗಳ ವಾದಗಳು ಸೋತಾಗ
ಧರ್ಮಾಂಧತೆಯೂ ಇಲ್ಲ
ಅಧರ್ಮದ ಜಂಜಡವೂ ಇಲ್ಲ.

ಪಾಪ- ಪುಣ್ಯಗಳ ಗುಟ್ಟು ಬಿಚ್ಚಿದಾಗ
ನರಕ ಭೀತಿಯೂ ಇಲ್ಲ
ಸ್ವರ್ಗದ ಆಸೆಯೂ ಇಲ್ಲ.

ದ್ವೈತ- ಅದ್ವೈತಗಳ ಮೇಲಾಟ ನಿಂತಾಗ
ಎರಡೆಂಬ ಭಿನ್ನತೆ ಇಲ್ಲ
ಬ್ರಹ್ಮ ನಾನೆಂಬ ಧಾಷ್ಟ್ಯವೂ ಇಲ್ಲ.

ಸಾಕಾರ- ನಿರಾಕಾರಗಳ ಗೊಂದಲ ಬಿಟ್ಟಾಗ
ಮೂರ್ತಿಗಳ ಹಂಗೂ ಇಲ್ಲ
ಕಾಣದುದರ ಕಲ್ಪನೆಯೂ ಇಲ್ಲ.

ರೂಪ- ವಿರೂಪಗಳ ದಿಟ್ಟಿಸಿ ಕಂಡಾಗ
ಸೌಂದರ್ಯದ ಬಣ್ಣನೆಯೂ ಇಲ್ಲ
ಕುರೂಪದ ಹೇವರಿಕೆಯೂ ಇಲ್ಲ.

ಸೋಲು- ಗೆಲುವುಗಳ ಒಳಹೊಕ್ಕು ಬಂದಾಗ
ಬೀಳುವ ಭಯವೂ ಇಲ್ಲ
ಬೀಗುವ ಭ್ರಮೆಯೂ ಇಲ್ಲ.

ಸುಖ- ದುಃಖಗಳ ಸುಳಿಯ ತೆಗೆದಾಗ
ಹಿತದ ಮೈಮರೆವಿಕೆ ಇಲ್ಲ
ತಲ್ಲಣದ ದುಗುಡವೂ ಇಲ್ಲ.

ಜ್ಞಾನ- ಅಜ್ಞಾನದ ಜಾಡ ತಿಳಿದಾಗ
ನಾ ಬಲ್ಲೆನೆಂಬ ಕೋಡೂ ಇಲ್ಲ
ಅರಿಯೆನೆಂಬ ಅಳುಕೂ ಇಲ್ಲ.

ಶ್ರೇಷ್ಠ- ಕನಿಷ್ಠತೆಯ ಹುಸಿಯನರಿತಾಗ
ಹಿರಿದೆಂಬ ಹೊಗಳಿಕೆ ಇಲ್ಲ
ಕಿರಿದೆಂಬ ತಾತ್ಸಾರವಿಲ್ಲ.

ಇದೆ- ಇಲ್ಲಗಳ ಹೊಯ್ದಾಟ ಮರೆಯಾದಾಗ
ಇರುವುದರ ಗುಂಗೂ ಇಲ್ಲ
ಇಲ್ಲದುದರ ಗುಲ್ಲೂ ಇಲ್ಲ.

ಬೇಕು- ಬೇಡಗಳ ಆಯ್ಕೆಗಳು ಸರಿದಾಗ
ಇನ್ನೇನಿದೆ ಹಾತೊರೆವುದಕೆ?
ಬೇಡೆಂದು ಬೇಸರಿಸುವುದಕೆ?

ತಾನು- ಎದಿರು ಎನುವ ಮಾಯೆ ಹರಿದಾಗ
ನಾನೆನ್ನುವ ಅಹಮಿಕೆ ಎಲ್ಲಿದೆ?
ನೀನೆನುವ ಬೇಧವಾದರೂ ಎಲ್ಲಿ?

Previous post ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
Next post ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ

Related Posts

ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

October 21, 2024 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...
ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...

Comments 3

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Mar 11, 2023 Reply

    ನಿಜ..ಎರಡರ ಹಂಗು ತೊರೆದರೆ ಏನೂ ಉಳಿಯದು.ಸರಳವಾಗಿ ಹೇಳಿರುವ ಇರಿ.

  2. ಸುನಂದಾ ರಾಚಣ್ಣ, ದಾವಣಗೆರೆ
    Mar 12, 2023 Reply

    ತುದಿಗಳೆರಡು ಇಲ್ಲವಾದಾಗ ಏನು ಇವೆ, ಏನೂ ಇಲ್ಲ ಎಂದಾಗ, ಇದು ಭ್ರಮೆಯೋ, ಕಲ್ಪನೆಯೋ, ನಿಜವೋ ಸುಳ್ಳೋ ತಿಳಿಯದೇ ತಲೆಕೆರೆದುಕೊಂಡಾಗ ಸಿಕ್ಕಿದ್ದು ಬಯಲು, ಬರೀ ಬಯಲು, ಅಲ್ಲೇನು ಹುಡುಕಲಿ? ಆದಿ, ಅಂತ್ಯ ಎರಡೂ ಇಲ್ಲ, ಬದುಕು ಸಾಗುತಿದೆ, ಜೀವನ ಎಂಥ ವಿಸ್ಮಯ ಅಲ್ಲವೇ?

  3. ಅಂಬಾರಾಯ ಬಿರಾದಾರ
    Mar 14, 2023 Reply

    ತುದಿ ಮೊದಲಿಲ್ಲದ ಘನ ಬಯಲು
    👌👍👌👍

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
ಮರೆತೆ…
ಮರೆತೆ…
July 4, 2022
ಪೊರೆವ ದನಿ…
ಪೊರೆವ ದನಿ…
August 11, 2025
ದಾಸೋಹ ತತ್ವ
ದಾಸೋಹ ತತ್ವ
January 10, 2021
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
ಹಾಯ್ಕುಗಳು
ಹಾಯ್ಕುಗಳು
November 10, 2022
Copyright © 2026 Bayalu