Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಡೆಯ ಎಡೆ…
Share:
Poems April 5, 2026 ಕೆ.ಆರ್ ಮಂಗಳಾ

ನಡೆಯ ಎಡೆ…

ಅತ್ತಿದ್ದು ನಕ್ಕಿದ್ದು
ಒಳಗೊಳಗೇ ಬಿಕ್ಕಿದ್ದು
ಮತ್ತೆ ಜಂಜಡಕೆ ಬೀಳಲಾರೆ ಇನ್ನು
ಎಲ್ಲ ಕಲಿಸುವ ಬದುಕು
ಎಲ್ಲ ತಿಳಿಸುವ ಗುರುವು
ದಾಟಬಲ್ಲೆನು ಈಜಿ ನೂರು ಕಡಲು

ಸುಖ-ದುಃಖ ಬರಹವನು
ಬರೆವ ಕೈಗೆ ನಮಿಸಿ
ತಪ್ಪುಸರಿಗಳ ಲೆಕ್ಕ ಒಪ್ಪಿಸಿರುವೆ
ಸಂಚಯದ ಸಂಚಿಯನು
ಕೊಡವಿ ಖಾಲಿ ಮಾಡಿ
ಅಳಿದುಳಿದುದೆಲ್ಲಾ ಹುರಿದುಬಿಡುವೆ

ಹಿಂದಣದ ಹೊರೆಯಿಲ್ಲ
ಮುಂದಣದ ಹಂಗಿಲ್ಲ
ಸಮತೆಯ ಸಿರಿಯು ಕಂಗೊಳಿಸಲಿ
ಹೊಸ ಹಸಿರು ಹೊಸ ಉಸಿರು
ಹೊಸ ಕಂಪು ಹೊಸ ತಂಪು
ನಡೆಯ ಎಡೆಯಿರಲಿ ನಿತ್ಯಸತ್ಯತೆಗೆ

ಚಳಿಗಾಳಿ ಮಳೆ ಬಿಸಿಲು
ನರನರಗಳೊಳಗಿಳಿದು
ತೂಗಿ ತೊನೆದಿಹುದು ಜೀವತಾನ
ಹಗಲಿರುಳ ತೆರೆಗಳಲಿ
ಋತುಮಾಸ ಕವಲಿನಲಿ
ಹೊರಳಿ ಸಾಗಿಹುದು ಬಾಳಯಾನ

ಆ ಮುಗಿಲು ಬಿದ್ದಾಗ
ಹಸುರೆದ್ದು ಬಂದಾಗ
ಸುಂದರವು ಸೃಷ್ಟಿಯೆಲ್ಲಾ
ಅಂತರವು ಅಳಿದಾಗ
ನಾ ಕರಗಿ ಹೋದಾಗ
ಅಮೃತವು ಮರ್ತ್ಯವೆಲ್ಲಾ…

Previous post ನನ್ನನ್ನು ಕ್ಷಮಿಸು
ನನ್ನನ್ನು ಕ್ಷಮಿಸು

Related Posts

ಹಾಯ್ಕು
Share:
Poems

ಹಾಯ್ಕು

September 6, 2023 ಜ್ಯೋತಿಲಿಂಗಪ್ಪ
೦೧ ದೀಪ ಹಿಡಿದು ಇರುಳು ಆ ನಕ್ಷತ್ರ ಹುಡುಕಲುಂಟೇ… ೦೨ ಮದವೇ ಮದ್ಯ ಮದ ಏರಿದ ಅಷ್ಟೂ ಮತ್ತು ಏರಿತು. ೦೩ ಸಾವು ಎಂಬುದು ಕೊಬ್ಬಿನ ಮಾತು ಅಲ್ಲಾ ಮೆಲ್ಲ ಮಾತಾಡು. ೦೪...
ಹಣತೆಯ ಹಂಗು
Share:
Poems

ಹಣತೆಯ ಹಂಗು

October 19, 2025 ಕೆ.ಆರ್ ಮಂಗಳಾ
ನಾನೆಂಬ ಕತ್ತಲೆಗೆ ನೀನೆಂಬ ಜ್ಯೋತಿ ನಾನಿದ್ದಾಗ ನೀ ಇರಲೇ ಬೇಕೆನುವ ತರ್ಕ ನಾನು ಕರಗದೆ ನೀನಾಗಲಾರೆ ನೀನು ಸರಿಯದೇ ಬೆಳಕ ಕಾಣಲಾರೆ… ಕತ್ತಲೆಗಲ್ಲವೆ ಬೆಳಕಿನ ಮೋಹ? ಕೈಯ ಹಣತೆಯಲಿ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಮೊಟ್ಟೆ- ಗೂಡು
ಮೊಟ್ಟೆ- ಗೂಡು
April 11, 2025
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಗುರುಪಥ
ಗುರುಪಥ
January 4, 2020
ಆಸರೆ
ಆಸರೆ
August 6, 2022
ಸೂರ್ಯ
ಸೂರ್ಯ
January 8, 2023
ಹುಡುಕಾಟ
ಹುಡುಕಾಟ
July 21, 2024
Copyright © 2026 Bayalu