Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನೊಳಗಣ ಮರೀಚಿಕೆ
Share:
Poems February 5, 2020 ಪದ್ಮಾಲಯ ನಾಗರಾಜ್

ನನ್ನೊಳಗಣ ಮರೀಚಿಕೆ

ಈ ಊರು
ನದಿದಡೆಯಲ್ಲಿನ
ಪ್ರವಾಹ ಭೀತಿಯ ಅಭದ್ರತೆ…

ಈ ಊರು
ಛಿದ್ರ ವಿಛಿದ್ರಗಳ ಸಂಗಮ ಬಿಂದು…

ಈ ಊರು
ಪ್ರತಿಮಾ ವಿಧಾನದ ಭಾವಸುಧೆ…

ಈ ಊರು
ವಿಷಾದ, ವ್ಯಸನಗಳ ನದೀ ಸುಳಿ…

ಈ ಊರು
ಸುಖದ ಸಂಗ್ರಹಣೆಗಳ ದಗಲ್ಬಾಜಿ…

ಈ ಊರು
ಸ್ನೇಹ ಪ್ರೀತಿಗಳ ತೂಗು ತಕ್ಕಡಿ…

ಈ ಊರು
ವಾಸ್ತವ ಅರಿಯದಾ ದರ್ಶನ…

ಈ ಊರು
ಗತ ಚರಿತೆಗಳ ಅನುಶಾಸನ…

ಈ ಊರು
ಅಗಣಿತ ಕಲೆಗಳ ಅಂಗಳ…

ಈ ಊರು
ನೀತಿಪಾಠಗಳ ತವರೂರು..

ಈ ಊರಿಗೆ
ಅವನೀತಿ ಸೃಜಿಸಲು ಶಾಲೆ ಬೇಕಿಲ್ಲ…

ಈ ಊರು
ತನಗೆ ತನ್ನದೇ ಸೃಜಿಸುತ್ತಿದೆ…

ಈ ಊರು
ತನ್ನನ್ನು ತಾನೇ ಕೊಳ್ಳೆಹೊಡೆಯುತ್ತಿದೆ…

ಈ ಊರು
ತನ್ನೊಳು ತಾನೇ ಕೊಳೆಯುತ್ತಿದೆ…

ಈ ಊರು
ಪರಂಪರಾ ರಚನೆಗಳ ಊಳಿಗ…

ಈ ಊರು
ಕೈಗೆಟುಕದಾ ಕನಸು…

ಈ ಊರು
ಎಂದಾದರೂ ಉರುಳಿ ಹೋಗುವ ಬಡಪಾಯಿ…

ಈ ಊರು
ಸದಾ ಬೆಂಬಿಡದ ಮರೀಚಿಕೆ

ಈ ಊರು
ಕಡುಖಾಲಿಯಾದ ಮಹಮೌನ…

ಈ ಊರು
ಎಂದೂ ಖಾಲಿಯಾಗದಾ ನಶ್ವರ…

ಈ ಊರು
ಯಾರೂ ಯೋಚಿಸದಾ
ಸಮೃದ್ಧ ಬಯಲವನಾ…

ಈ ಊರು
ಏನೂ ಇಲ್ಲದ ನಿರಂತರ…

ಈ ಊರು
ಏನೂ ಅಲ್ಲವೆನಲೂ
ಇಲ್ಲವಾದ ಕಡು ನಿರುತ್ತರಾ.

Previous post ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
Next post ಶರಣ- ಎಂದರೆ…
ಶರಣ- ಎಂದರೆ…

Related Posts

ಪ್ರೇಮ ಮತ್ತು ದ್ವೇಷ
Share:
Poems

ಪ್ರೇಮ ಮತ್ತು ದ್ವೇಷ

July 10, 2025 ಜಬೀವುಲ್ಲಾ ಎಂ.ಅಸದ್
ಹಾರುವುದಾದರೂ ಎಲ್ಲಿಗೆ? ರೆಕ್ಕೆ ಇಲ್ಲದ ಹಕ್ಕಿಗಳು ಹೇಗೆ? ಗಾಳಿ ಹಾರಿಸುವುದಿಲ್ಲ ನೆಲ ನಡೆಸುವುದಿಲ್ಲ ಜಲ ಈಜಿಸುವುದಿಲ್ಲ ಕಲಿಯಬೇಕು ತಂತಾನೆ ಎಲ್ಲಾ ಹಾಗೂ ಪ್ರೀತಿಸುವುದನ್ನು...
ಕೇಳಿಸಿತೇ?
Share:
Poems

ಕೇಳಿಸಿತೇ?

April 6, 2024 ಜ್ಯೋತಿಲಿಂಗಪ್ಪ
ಈ ಮೂರರ ತಿರುಳ ತೆಗೆದವರಾರು ಐದರ ಒಗಟ ಬಿಡಿಸಿದವರಾರು ಆರರ ಬೆಡಗು ಸವಿದವರಾರು ಎರಡರಲಿ ಒಂದಾಗುವುದು ಒಂದರಲಿ ಹಲವಾಗುವುದು ಒಂದೆರಡಾಗಿ ಎರಡು ನಾಲ್ಕಾಗಿ… ಅನಂತವ ಕಂಡರೆ...

Comments 2

  1. ಶ್ರೀಶೈಲ, ಗದಗ
    Feb 6, 2020 Reply

    ಒಳಗಿರುವ ಮರೀಚಿಕೆ ಯಾವುದು? ಆತ್ಮವೇ? ಮನಸ್ಸೇ? ಮಾಯೆಯೆ?

  2. Lingaraj Patil
    Feb 9, 2020 Reply

    ನಾಗರಾಜ ಸರ್, ದಯವಿಟ್ಟು ನೀವು ಲೇಖನಗಳನ್ನು ಬರೆಯಿರಿ, ನಿಮ್ಮ ವಿಚಾರಗಳಲ್ಲಿ ನವ ಮಾರ್ಗದ ಸೂಚನೆಗಳಿವೆ. ಅರ್ಥೈಸಿಕೊಳ್ಳಲು ತುಸು ಬಿಗಿಯೆನಿಸಿದರೂ ನನಗೆ ಅವು ಬಹಳ ಹಿಡಿಸಿವೆ. ಬಹಳ ತಿಂಗಳಾದವು, ನೀವು ಲೇಖನ ಬರೆಯದೆ, ನನ್ನ ಕೋರಿಕೆಯನ್ನು ಮನ್ನಿಸುವಿರೆಂದು ಭಾವಿಸುತ್ತೇನೆ.
    ನನ್ನ ಬುದ್ಧ ಕವನ ಸೊಗಸಾಗಿತ್ತು. ನನ್ನ ಊರು, ನನ್ನೊಳಗಿನ ವ್ಯಾಪಾರದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
ಹಣತೆ ಸಾಕು
ಹಣತೆ ಸಾಕು
September 14, 2024
ನೂರನೋದಿ ನೂರಕೇಳಿ…
ನೂರನೋದಿ ನೂರಕೇಳಿ…
April 29, 2018
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಹೀಗೊಂದು ತಲಪರಿಗೆ (ಭಾಗ-5)
ಹೀಗೊಂದು ತಲಪರಿಗೆ (ಭಾಗ-5)
December 8, 2021
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
June 14, 2024
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
April 9, 2021
Copyright © 2025 Bayalu