Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ ಬುದ್ಧ ಮಹಾಗುರು
Share:
Poems January 4, 2020 ಪದ್ಮಾಲಯ ನಾಗರಾಜ್

ನನ್ನ ಬುದ್ಧ ಮಹಾಗುರು

ನನ್ನ ಬುದ್ಧ ಮಹಾಗುರುವು…
ಧರ್ಮವಲ್ಲ ದೈವವಲ್ಲ
ನುಡಿಯಲ್ಲ ಪಡಿಯಲ್ಲ
ವಿಗ್ರಹವಲ್ಲ ಅನುಗ್ರಹವಲ್ಲ
ಸಂಭ್ರಮವಲ್ಲ ಉತ್ಸವವಲ್ಲ
ಸುಖವಲ್ಲ ದುಃಖವಲ್ಲ
ವಾದವಲ್ಲ ಬೇಧವಲ್ಲ
ಮಂತ್ರವಲ್ಲ ತಂತ್ರವಲ್ಲ
ಮಾನಾವಮಾನ ಅಲ್ಲವೇ ಅಲ್ಲ!

ನನ್ನ ಬುದ್ಧ ಮಹಾಗುರುವೆಂದರೆ
ಕಥೆಯಲ್ಲ ವ್ಯಥೆಯಲ್ಲ
ಜಾತಿಯಲ್ಲ ಜ್ಯೋತಿಯಲ್ಲ
ಬೆಡಗಲ್ಲ ಬೆರಗಲ್ಲ
ಜನುಮವಲ್ಲ ಜರೆಯಲ್ಲ
ಕೋಪವಲ್ಲ ತಾಪವಲ್ಲ
ರೂಪವಲ್ಲ ನೋಟವಲ್ಲ
ಅನ್ಯವಲ್ಲ ಅನನ್ಯವಲ್ಲ
ಧ್ಯಾನವಲ್ಲ ಧಾತನಲ್ಲ
ಅವ ಲೋಕಪರ ನಿರಂತರ…
ನನ್ನ ಬುದ್ಧಮಹಾಗುರುವು…

ಅಲ್ಲಮನ ಅಲ್ಲಗಳಲಿ
ಬಸವಣ್ಣನ ತಾಯ್ಗರುಳ ಸಂಬಂಧದಲಿ
ವೇಮನನ ವಿಮಲ ಪ್ರಜ್ಞೆಯಲಿ
ಸೂಫಿಗಳ ನಡೆಸಾರದಲಿ
ಕಬೀರನ ಕರೆಗಳಲಿ
ತಾವೋನ ತಾವಲ್ಲದ ತಾವಿನಲಿ
ಮಂಟೇದಯ್ಯನ ನೀಲಿ ಗ್ಯಾನದಲಿ
ಬಾಬಾಸಾಹೇಬರ ಮಹಾಕರುಣೆಯಲಿ
ಸದಾ ಎಚ್ಚರದಿ ಎಚ್ಚೆತ್ತುಕೊಂಡಿಹನು!!!

ಆದರೆ…
ತಪ್ಪು ನುಡಿವ ಕರ್ಮಿಯಾಗಿಹ
ಜಾತಿಬಿಡದ ನೀಚನಾಗಿಹ
ಸಂಗ್ರಹೇಚ್ಚೆಗೆ ಜಾರಿಕೊಂಡಿಹ
ನಾ ಮೇಲೆನುವ ಮದಾಂಧನಾಗಿಹ
ನನ್ನ ನಾ ಕಲ್ಪಿಸಿಕೊಳ್ಳುತ್ತಿರುವ
ನನ್ನ ನಾ ಸುಖಿಸುತ್ತಿರುವ
ನನ್ನೊಳು ನಾ ಚದುರಿಹೋಗಿರುವ
ನನ್ನೊಳು ಹುಡುಕಲು ಆತ ಎಲ್ಲಿಹನು?

Previous post ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
Next post ಗುರುಪಥ
ಗುರುಪಥ

Related Posts

ಗ್ರಹಣ
Share:
Poems

ಗ್ರಹಣ

December 9, 2025 ಡಾ. ಪಂಚಾಕ್ಷರಿ ಹಳೇಬೀಡು
ಗ್ರಹಣ ಹಿಡಿದದ್ದು ಯಾರಿಗೆ? ರವಿಗೋ, ಶಶಿಗೋ, ಮೂರ್ಖನಿಗೋ? ವಿಶಾಲಾಗಸದಿ ಸುತ್ತುವರು ಭೂರವಿಚಂದ್ರತಾರೆ ಸೃಷ್ಟಿಯಲಿ ಸನಿಹವಿಲ್ಲ, ಸಂಬಂಧವುಂಟು! ಸ್ಪರ್ಷ ಮೊದಲಿಲ್ಲ...
ದಾರಿಯಲ್ಲದ ದಾರಿ…
Share:
Poems

ದಾರಿಯಲ್ಲದ ದಾರಿ…

October 10, 2023 ಕೆ.ಆರ್ ಮಂಗಳಾ
ಗುರು ತೋರಿದ ದಾರಿಯಲಿ ಬಂಡೆಗಳ ಸಿಡಿಸಬೇಕು ಗುಡ್ಡಗಳ ಒಡೆಯಬೇಕು ಕಮರಿ, ಹೊಳ್ಳ ದಾಟಬೇಕು ಮುಳ್ಳುಗಂಟಿ ಕಿತ್ತಬೇಕು ಇಷ್ಟಪಟ್ಟು ನಡೆಯದಿದ್ದರೆ ಇದು ಬಲು ಕಷ್ಟದ ದಾರಿ...

Comments 6

  1. Mahantesh Mysuru
    Jan 6, 2020 Reply

    ಬುದ್ದ ಮಹಾಗುರು ಕವನ ತುಂಬಾ ಚನ್ನಾಗಿದೆ. ಮತ್ತೆ ಮತ್ತೆ ಮನನ ಮಾಡುವಂತಿದೆ. ರೂಪವಲ್ಲ ನೋಟವಲ್ಲ, ಅನ್ಯವಲ್ಲ ಅನನ್ಯವಲ್ಲ, ಧ್ಯಾನವಲ್ಲ ಧಾತನಲ್ಲ… ಸಾಲುಗಳು ಬಹಳ ಸೊಗಸಾಗಿವೆ.

  2. ಶಿವಕುಮಾರ್ ಸಾಲಿ
    Jan 8, 2020 Reply

    ಬುದ್ದನಂತಹ ಜ್ಞಾನಿಯನ್ನು ನಿಜಕ್ಕೂ ಎಲ್ಲೆಲ್ಲಿ ಕಾಣಬೇಕೆಂದು ಸೂಚಿಸಿದ ಶರಣ ನಾಗರಾಜವರಿಗೆ ವಂದನೆಗಳು

  3. Chetan M.P
    Jan 9, 2020 Reply

    ಕವನದ ಒಂದೊಂದು ಪದವೂ ಮನನಯೋಗ್ಯ

  4. Dinesh P
    Jan 14, 2020 Reply

    ಬುದ್ಧನನ್ನ ಬದುಕಿನಲ್ಲಿ ಕಾಣುವ ಸುಂದರ ಪರಿಕಲ್ಪನೆ.

  5. Jayaraj Bidar
    Jan 16, 2020 Reply

    ಬುದ್ದನನ್ನು ಎಲ್ಲಿ, ಹೇಗೆ ಹುಡುಕಿಕೊಳ್ಳಬೇಕೆಂದು ಗೊತ್ತಾಯಿತು. ಬುದ್ದನ ಜಾಗದಲ್ಲಿ ಬಸವನ ಹೆಸರು ಹಾಕಿದರೂ ಕವನಕ್ಕೆ ಚ್ಯುತಿ ಬರುವುದಿಲ್ಲ. ಮಹಾತ್ಮರನ್ನು ಹೀಗೇ ಹುಡುಕಿಕೊಳ್ಳಬೇಕು.

  6. Chinmayi
    May 15, 2021 Reply

    ಬುದ್ದ ಬುದ್ದನಿಗೇ ಸರಿ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ನಾನು ಯಾರು?
ನಾನು ಯಾರು?
December 8, 2021
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
ಕಾಲ ಎಲ್ಲಿದೆ?
ಕಾಲ ಎಲ್ಲಿದೆ?
January 7, 2022
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ವಚನ – ಚಿಂತನ
ವಚನ – ಚಿಂತನ
October 10, 2023
ನಾನು ಯಾರು? ಎಂಬ ಆಳ-ನಿರಾಳ-5
ನಾನು ಯಾರು? ಎಂಬ ಆಳ-ನಿರಾಳ-5
August 2, 2020
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ನೋಟದ ಕೂಟ…
ನೋಟದ ಕೂಟ…
May 10, 2023
Copyright © 2026 Bayalu