Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನೆಂಬ ನಿನಾದ…
Share:
Poems January 15, 2026 ಕೆ.ಆರ್ ಮಂಗಳಾ

ನಾನೆಂಬ ನಿನಾದ…

ನಾ ಹುಟ್ಟುವ ಮುನ್ನ
ಹೇಗಿದ್ದೆ ನೆನಪಿಲ್ಲಾ
ಹುಟ್ಟಿನೊಡನೆ
ಬಂದ ಬಳುವಳಿಯೇ
ನಾನೆಂಬ ಎಳೆ
ಈ ಅಹಮಿಕೆಗೆ
ಪ್ರಾಣ ಒತ್ತೆಯಿಟ್ಟು
ಎಷ್ಟು ಯುಗಗಳಾದವು?

ಒಂದೆಳೆ ಇದ್ದುದು
ಒತ್ತೊತ್ತಾಗಿ ಸೇರುತ್ತಾ
ಬುಟ್ಟಿಯಾಗಿ, ಬಟ್ಟೆಯಾಗಿ
ಬಲೆಯಾಗಿ ನನ್ನ
ತನ್ನೊಳು ಬಂಧಿಸಿದ್ದ
ತಿಳಿಸಲು ನೀನೇ
ಬರಬೇಕಾಯಿತು ಗುರುವೇ.

ತಾ ಬೀಗಲು
ಒಂದೊಂದ ಹೆಸರಿಟ್ಟು
ರೂಪ ಕೊಟ್ಟು,
ಬಣ್ಣ ತುಂಬಿ
ನಂಟನಂತೆ, ನಲ್ಲನಂತೆ
ಚಂದದ ಮಾತುಗಳಲ್ಲಿ
ನಿಜವ ಮರೆಸುತ್ತಾ
ಕಾವಲುಗಾರನಂತೆ
ತನ್ನ ಹಿತವನೇ ಕಾವುದು

ತನ್ನಿರುವಿನ
ಸುಳುಹು ಸಿಗದಂತೆ
ನಾಜೂಕಾಗಿ
ಕಾರ್ಯಸಾಧಿಸುವ
ಅದರ ಪಟ್ಟುಗಳನರಿತು
ಕೋಡ ಹಿಡಿದು
ನೆಲಕ್ಕೆ ಚಚ್ಚಿ
ಕಂಡಲ್ಲಿ ಗುಂಡು ಸಿಡಿಸಿ
ಕೊಂದೇ ಬಿಟ್ಟೆನೆಂದು
ಅಂದುಕೊಳ್ಳುವಾಗಲೇ
ಇನ್ನೆಲ್ಲೋ ಚಿಗಿತು
ಮತ್ತೆಲ್ಲೋ
ಹೂ-ಕಾಯಿ ಬಿಟ್ಟು
ಕನ್ನಡಿಯ ಬಿಂಬದಂತೆ
ಅಣಕಿಸುತ್ತದೆ…
ಮುಪ್ಪಿಲ್ಲದುದಕೆ
ಸಾವುಂಟೆ?
ನನಗೂ- ನಿನಗೂ
ನಡುವೆ ನಿಂತಿದೆ
ಉಸಿರುಗಟ್ಟಿಸುವ
ಗಟ್ಟಿಗಾಜಿನ ಪರದೆ.

ಸಿಟ್ಟು- ಸೆಡವುಗಳ
ನೋವು ಕ್ಲೇಷಗಳ
ಭವದ ಬೇರು
ಎಲ್ಲಿದೆ ಎನುವುದ
ನಾನೀಗ ಬಲ್ಲೆ
ಒಳಗೂ-ಹೊರಗೂ
ತನಗಾಗಿಯೇ
ತಡಬಡಿಸುತ್ತದೆ
ಚೂರು ಧಕ್ಕೆಯಾದರೂ
ಸಿಡಿಲು ಬಡಿದಂತೆ
ಚಡಪಡಿಸುತ್ತದೆ
ಒತ್ತುತ್ತದೆ
ಎದೆ ಮೇಲೆ ಕುಳಿತು
ಮಣಭಾರದಂತೆ
ತೊಲಗಿಸು ತಂದೆ
ನಾನೆಂಬ ಹೊರೆಯ.

ಅರಿವಿನ ರೆಪ್ಪೆ
ತೆರೆಯದ ಕೂಸಿಗೆ
ಬಯಲ ಅನಾವರಣ!
ಮಾಗಿ ಕಾಲದಲಿ
ವಸಂತದ ವರ್ಣನೆಯೇ?
ನಮ್ಮಿಬ್ಬರ ನಡುವೆ
ನೆಲ-ಮುಗಿಲಿನಂತರ
ಕರುಣೆ ಇರಲಿ ಗುರುವೆ.

ಗುರು:
ನೆರಳಲಿ ನಿಂತು
ಕತ್ತಲು ಎನುವರೆ?
ಉಸಿರೇ ಇಲ್ಲದ
ನೆಲೆಯೇ ಕಾಣದ
ತೃಣಕಣ ಹಮ್ಮಿಗೆ
ಹೆದರುವುದೇ?

ಕೂಗಿ ಕರೆದರೂ
ಕಿವಿಗೊಡದಿರು
ಹತ್ತಿರ ಬಂದರೂ
ಗಮನಿಸದಿರು
ಎದುರೇ ನಿಂತರೂ
ಉತ್ತರಿಸದಿರು
ಮಾತಿನ ಕೂಟಕೆ
ಮರುಳಾಗದಿರು
ಮೌನದೊಳಗೂ
ಪಿಸುನುಡಿಯದಿದ್ದೊಡೆ
ಕೇಳದು ಎಂದಿಗೂ
ನಾನೆಂಬ ನಿನಾದ.

ಅರಿವಿಗೂ- ನಿನಗೂ
ಕೂದಲೆಳೆಯಂತರ
ಕೊರಗುವುದೇಕೆ ಕಂದಾ?
ಬೀಗುವ ಹಮ್ಮೇ
ಆಗುವ ಹಂಬಲ
ಎರಡೂ ಬೇಡ ಕೂಸೇ
ನೀ ನೀನಾಗಿದ್ದರೆ
ಅದುವೆ ಚೆನ್ನ
ಈ ಮರ್ಮವ ನೀನರಿಯೇ

ನಿನ್ನೆ-ನಾಳೆಗಳ
ನಂಟನು ಬಿಟ್ಟರೆ
ನಾನೆಂಬುದರ
ಸೊಂಟವೇ ಮುರಿವುದು
ನಿನ್ನ ಕಣ್ಣಲೇ
ನಿನ್ನನು ಕಂಡರೆ
ಹಮ್ಮಿನ ಭಾವವೇ
ಕರಗುವುದು.

ಈ ಕ್ಷಣದಲಿ
‘ಆ ಇಗೋ’ ಎಲ್ಲಿದೆ?
ಅದು ಕಾಲದ ಬಾಗಿಲ
ಕಾಯುವ ಕಾವಲು.
ಬಯಲ ಪ್ರೀತಿಯ
ಅನಂತದ ಶಿಶುವಿಗೆ
ಕಾಲದ ಸೂತಕ
ಕಾಡುವುದೇ?

Previous post ಬಯಲಾದ ದೇವರು
ಬಯಲಾದ ದೇವರು
Next post ಸರ್ವ ಧರ್ಮ ಸಮನ್ವಯ
ಸರ್ವ ಧರ್ಮ ಸಮನ್ವಯ

Related Posts

ಸೂರ್ಯ
Share:
Poems

ಸೂರ್ಯ

January 8, 2023 ಜ್ಯೋತಿಲಿಂಗಪ್ಪ
ಸೂರ್ಯ ಈ ಸಂತೆಯೊಳಗೇನು ಹುಡುಕುತಿರುವೇ…? ನಿಶ್ಶಬ್ದ, ಮಾರುವುದಿಲ್ಲವೇ…! ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು ಸುಮ್ಮನೇ ಕುಳಿತು ಕಣ್ಣೊಳಗಣ ಬೆಳಕ ಸದ್ದು ಕೇಳು ಈ ಸಂತೆಗೆ...
ಸನ್ಯಾಸ ದೀಕ್ಷೆ
Share:
Poems

ಸನ್ಯಾಸ ದೀಕ್ಷೆ

June 12, 2025 ಜಬೀವುಲ್ಲಾ ಎಂ.ಅಸದ್
ತುಂಬಿದ ಅಹಂ- ಸ್ವಾರ್ಥದ ಚೀಲವನು ಬಯಲಿಗೊಯ್ದು ಸುರಿದು ಸ್ವತಃ ಖಾಲಿಯಾಗಿ ಸಂಭ್ರಮಿಸುವುದು – ಸನ್ಯಾಸ ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ ಬೇರು ಬಿಟ್ಟು ಬಿಸಿಲು...

Comments 2

  1. Dr.Basavaraj Sabarad
    Jan 17, 2026 Reply

    ಮಂಗಳಾ ಅವರ ಕವಿತೆಗಳು ತುಂಬಾ ಅರ್ಥಪೂರ್ಣವಾಗಿವೆ.ಅಭಿನಂದನೆಗಳು.

  2. Dr. Shraddhananda swamiji, Vijayapura
    Feb 5, 2026 Reply

    The poem is really good.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ವಚನಗಳಲ್ಲಿ ಖಗೋಳ ವಿಜ್ಞಾನ
ವಚನಗಳಲ್ಲಿ ಖಗೋಳ ವಿಜ್ಞಾನ
September 7, 2020
ಗುರುವಿನ ಸಂಸ್ಮರಣೆ
ಗುರುವಿನ ಸಂಸ್ಮರಣೆ
October 6, 2020
ಸುಮ್ಮನೆ ಇರು
ಸುಮ್ಮನೆ ಇರು
December 6, 2020
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
July 10, 2023
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಗಂಟಿನ ನಂಟು
ಗಂಟಿನ ನಂಟು
November 7, 2020
ಅನುಭವ ಮಂಟಪದ ವಿನ್ಯಾಸ…
ಅನುಭವ ಮಂಟಪದ ವಿನ್ಯಾಸ…
February 16, 2026
Copyright © 2026 Bayalu