Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿಜ ನನಸಿನ ತಾವ…
Share:
Poems July 10, 2023 ಕೆ.ಆರ್ ಮಂಗಳಾ

ನಿಜ ನನಸಿನ ತಾವ…

ಕಣ್ಣು ಮುಚ್ಚಿದಾಗ ಬರುವ ಕನಸಿಗೂ
ಕಣ್ಬಿಟ್ಟಾಗಿನ ದಿನದ ಚಿತ್ರಾವಳಿಗೂ
ಏನಿಹುದು ಅಂತರ?
ನಗು, ಅಳು, ನೋವು, ಸಂಕಟ…
ಅನುಭವದಲ್ಲಿ ಅದ್ದಿ ತೆಗೆದಂತೆ
ಎಲ್ಲ ಎದುರೆದುರೇ ನಡೆದಂತೆ!
ಹೊಯ್ದಾಟಗಳ ಹಗಲ ನನಸು,
ಕನವರಿಕೆಗಳಾ ಇರುಳ ಕನಸು

ನನಸಂತೆ ಕನಸಲೂ ಅದೇ ಅದೇ
ಒಡಲ ಹಸಿವು, ಹುಸಿಗಳು
ಚಡಪಡಿಕೆಗಳು, ಹುಡುಕಾಟಗಳು
ಅಸಹಾಯಕತೆಯ ತಡವರಿಕೆಗಳು
ಇಲ್ಲಿರುವವರೆಲ್ಲಾ ಅಲ್ಲಿ ಸಿಗುತ್ತಾರೆ
ಅಲ್ಲಿಯವರೆಲ್ಲಾ ಇಲ್ಲಿ ಕಾಣುತ್ತಾರೆ
ಸಂಬಂಧಗಳು, ವಿರೋಧಗಳು,
ದಡಗಳೆರಡರ ಮೇಲೂ ನಿತ್ಯ ಹರಿದಾಡುತ್ತವೆ

ಕನಸು-ನನಸಿನ ಮೋಡಿಯಾಟದಲಿ
ನಾಳೆಗಳು ನಿನ್ನೆಗಳಾಗುತಿವೆ
ಮಲಗಿದಾಗ ದಿನ ಮರೆಯಾಗುತ್ತದೆ
ಎಚ್ಚರಾದಾಗ ಕನಸು ಸರಿಯುತ್ತದೆ
ಯಾವುದು ದಿಟ, ಯಾವುದು ಸಟೆ?
ಅಲ್ಲಿ ತೋರಿದ್ದೋ, ಇಲ್ಲಿ ಕಂಡದ್ದೋ?

ಅರಿವಾಗಿ ಎದೆಗಿಳಿದ ಗುರು ಹೇಳಿದ-
ಎರಡೂ ಸುಳ್ಳಲ್ಲ, ನಿಜದಿರುವೂ ಅಲ್ಲಿಲ್ಲ
ವಿಷಮ ವಿಷಯಗಳ ಹಗಲಿನ ಜಾತ್ರೆ
ಸಿಗದ ಬೇಗುದಿಗಳ ಇರುಳಿನ ಸಂತೆ
ಎಚ್ಚರವಾಗದ ಅಮಲಿನ ಬದುಕಿಗೆ
ಸತ್ಯದ ನೆಲೆಯು ಕಾಣುವುದೆ?
ಕನಸೊಳಗೊಂದು ಕನಸನು ಕಟ್ಟಲು
ನಿಜ ನನಸಿನ ಮರ್ಮ ತಿಳಿಯುವುದೆ?

ನಿನ್ನ ಕದಳಿಯ ನೀ ದಾಟಲೇ ಬೇಕು
ನಿನ್ನ ತಾವಕೆ ನೀ ಸೇರಲೇ ಬೇಕು
ಜಂಗಮ ಚಲನೆಯ ಲಾಸ್ಯವನರಿಯಲು
ಅಚಲವಾಗಿ ನೀ ನಿಲ್ಲಲೇ ಬೇಕು.

Previous post ಗೇಣು ದಾರಿ
ಗೇಣು ದಾರಿ
Next post ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2

Related Posts

ನಿಮ್ಮಿಂದಲೇ ನಾನು
Share:
Poems

ನಿಮ್ಮಿಂದಲೇ ನಾನು

February 11, 2022 ಜ್ಯೋತಿಲಿಂಗಪ್ಪ
ನಾನು ಹುಟ್ಟಿದ ಮೇಲೆ ಹುಟ್ಟಿತು ನನ್ನ ಇತಿಹಾಸ ನಾನು ಸತ್ತ ಮೇಲೆ ಹುಟ್ಟಿದ್ದು ನನ್ನ ಚರಿತ್ರೆ ಈ ನಡುವಿನ ಅಂತರ ನಾನು ಇದ್ದುದ್ದು ನನ್ನ ಸುಳ್ಳು ನಿಜ ನಾನು ಹೇಳಬಲ್ಲನೇ ನನ್ನ...
ನನ್ನೆದುರು ನಾ…
Share:
Poems

ನನ್ನೆದುರು ನಾ…

March 6, 2024 ಕೆ.ಆರ್ ಮಂಗಳಾ
ಅದೇಕೋ ಮೊನ್ನೆ ಮೊನ್ನೆ ಸಂತೆ ತೋರುವೆ, ಜಾತ್ರೆ ನೋಡುವೆ ನಡಿ ನನ್ನೊಡನೆ ಎಂದ ಗುರು ಹಿಗ್ಗಿನಲಿ, ಗೆಲುವಿನಲಿ ಚೆಂದದ ಸಿಂಗಾರದಲಿ ಹೊರಟಿತ್ತು ನನ್ನ ಮೆರವಣಿಗೆ ಸಂಭ್ರಮವೇನು,...

Comments 1

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Jul 13, 2023 Reply

    ಕಣ್ಣೆಚ್ಚರದಲಿ ಕನಸ ನೋಡಬೇಕು.. ಎಂಬುದನ್ನು ಎಷ್ಟು ಸರಳವಾಗಿ ಹೇಳಿರುವಿರಿ.
    ಓದುವುದೇ ಒಂದು ಚೆಂದ .

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
June 14, 2024
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ಹುಡುಕಾಟ
ಹುಡುಕಾಟ
July 21, 2024
ಪ್ರಭುವಿನ ಗುರು ಅನಿಮಿಷ -3
ಪ್ರಭುವಿನ ಗುರು ಅನಿಮಿಷ -3
October 21, 2024
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
Copyright © 2026 Bayalu