Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನೆ-ಇಂದು
Share:
Poems May 10, 2022 ಕೆ.ಆರ್ ಮಂಗಳಾ

ನಿನ್ನೆ-ಇಂದು

ನಿನ್ನೆ-

ಬೆಳಗ ಕಾಣದ ಮಸುಕು
ಚಿತ್ತದ ಜಾಡ್ಯ, ಮರೆವಿನ ಬಾಧೆ
ಬೆಂಬಿಡದ ಕಾಮನೆಗಳಲಿ
ಬಂಧಿಯಾಗಿದೆ ಜೀವ
ಬಿಡಿಸು ಗುರುವೆ ಇದರ ಪ್ರವರ…

ಇಂದು-

ಬೆಳಕ ಕೊಡುತಿಹ ಆ ದೀಪ
ಯಾವುದಕೆ ಅಂಟಿದೆ?
ಹಣತೆಗೋ, ಬತ್ತಿಗೋ,
ಎಣ್ಣೆಗೋ, ಗಾಳಿಗೋ…
ಇಲ್ಲಾ ನೋಡುವ ಕಣ್ಣ ಪಾಪೆಗೋ?

ಈ ಪ್ರಾಣ ಅದಾವುದಕೆ
ಅಂಟಿಕೊಂಡಿದೆ…
ದೇಹಕ್ಕೋ, ಉಸಿರಿಗೋ,
ನೀರಿಗೋ, ಸೇವಿಸುವ ಆಹಾರಕೋ
ಇಲ್ಲಾ ಒಳಗಣ ಪರಿಕರಗಳಿಗೋ…?

ಆ ಬೆಳಕಿನಂತೆ
ಈ ಪ್ರಾಣಕ್ಕೂ ಅಂಟಿಗೂ ಯಾವ ನಂಟೂ ಇಲ್ಲ…

ದೀಪ ಹಣತೆಯಲ್ಲಿ
ಜೀವ ದೇಹದಲ್ಲಿ
ಬಂಧಿಗಳೇ ಅಲ್ಲಾ!
ಅದು ಉರಿಯುತಲೇ ಬೆಳಗುವ…
ಇದು ಆಗುತಲೇ ಜೀವಿಸುವ…
ಸಹಜ ಪ್ರಕೃತಿಯ ಸೊಬಗು!
ಆಹಾ! ಎಂತಹ ಬೆಡಗು!!

Previous post ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
Next post ಹಿರಿಯರ ಹಾದಿ…
ಹಿರಿಯರ ಹಾದಿ…

Related Posts

ಕಣ್ಣ ಪರಿಧಿ
Share:
Poems

ಕಣ್ಣ ಪರಿಧಿ

February 10, 2023 ಜ್ಯೋತಿಲಿಂಗಪ್ಪ
ಕಣ್ಣ ಬಿಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಮುಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಒಳಗ ಕಾಣುವುದು ಕಾಣು ಕಾಣು ಕಾಣು ಏನು ಏನೂ ಇಲ್ಲ ಕಣ್ಣ ಪರದೆಯ ದಾಟಿ ಹೋದವರು ಯಾರು...
ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಈ  ದಾರಿ…
ಈ ದಾರಿ…
May 10, 2023
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ಶಿವಾಚಾರ
ಶಿವಾಚಾರ
April 9, 2021
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
October 21, 2024
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
Copyright © 2026 Bayalu