Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀನು ನಾನಲ್ಲ…
Share:
Poems July 21, 2024 ಕೆ.ಆರ್ ಮಂಗಳಾ

ನೀನು ನಾನಲ್ಲ…

ಹಿಂದಿನ ಹೆಜ್ಜೆಗಳಲಿ
ತನ್ನನ್ನೇ ಅರಸುವ
ಮುಂದಿನ ದಿನಗಳಲಿ
ತನ್ನನ್ನೇ ಮೆರೆಯಿಸುವ
ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ

ಎಂದೋ ಆದುದನು
ಜತನದಲಿ ಕೂಡಿಟ್ಟು
ಎಲ್ಲವನೂ ಎಲ್ಲರನೂ
ಆ ಅಳತೆಯಲೇ ತೂಗುವ
ತಿಕಲು ಬುದ್ಧಿಯೇ ನೀನು ನಾನಲ್ಲ

ಕಂಗಳಲಿ ಕರುಳಾಗಿ
ರಸದ ದಾಸನಾಗಿ
ವಾಸನೆಯ ಜಾಡಿಗಿಳಿದು
ಸ್ಪರ್ಶಸುಖಕೆ ಬೆನ್ನುಹತ್ತಿ
ಹಿತವಾದುದನೇ ಕೇಳಲೆಳೆಸುವ ನೀನು ನಾನಲ್ಲ

ನೆನಹಿನಲಿ ಅಲೆಯಾಗಿ
ನಡೆಯಲ್ಲಿ ಸೋಗಾಗಿ
ನುಡಿಯಲ್ಲಿ ಕಪಟವಾಗಿ
ಕನಸಿನಲಿ ಬತ್ತಲೆಯಾಗಿ
ಚಿತ್ತದಲಿ ಹೆಪ್ಪುಗಟ್ಟಿದ ನೀನು ನಾನಲ್ಲ

ಆಸೆಗಣ್ಣಾಗಿ ಸುಖಕೆ ಬಾಯಾರಿ
ಸಾಧಿಸುವ ಹುಚ್ಚಾಗಿ
ಕೀರ್ತಿಕಾಮನೆಗೆ ಕಳವಳಿಸಿ
ಗುಪ್ತ ಬಯಕೆಗಳ ದಂಡಾಗಿ
ಒಳಗೊಳಗೆ ಅಂಡಲೆವ ನೀನು ನಾನಲ್ಲ

ಬಿರುಮಾತಿನ ಬಾಣವಾಗಿ
ದೂರುಗಳ ಧಾರೆಯಾಗಿ
ದ್ವೇಷದ ಕೊಂಬಾಗಿ
ಕುದಿವ ಮನವಾಗಿ, ಮೊನಚು ಅಂಬಾಗಿ
ಇದಿರ ಇರಿಯಲು ಕಾಯುವ ನೀನು ನಾನಲ್ಲ

ಮಾತಿಗೆ ಮಾತಾಗಿ
ದ್ವೇಷಕ್ಕೆ ದ್ವೇಷವಾಗಿ
ಕಷ್ಟಗಳಿಗೆ ಕೊಚ್ಚಿಹೋಗಿ
ಬೇಕು ಬೇಡಗಳ ಆಟದಲಿ ಸಿಲುಕಿ
ಕೊರಗಿ ಕಣ್ಣೀರಾಗುವ ನೀನು ನಾನಲ್ಲ

ಮೆಚ್ಚುಗೆಗೆ ಮರುಳಾಗುವ
ಹೊಗಳಿಕೆಗೆ ಹಿರಿಹಿಗ್ಗುವ
ತೆಗಳಿಕೆಗೆ ಮುನಿಸೇಳುವ
ಬೇಕಾದವರ ಅಟ್ಟಕ್ಕೇರಿಸುತಾ
ಬೇಡಾದವರ ನೀಕರಿಸುವ ನೀನು ನಾನಲ್ಲ

ಅಸೂಯೆಯಲಿ ಬೇಯುವ
ಎಡಬಿಡಂಗಿಯಲಿ ತುಯ್ಯುವ
ಆಲಸಕೆ ಮೈಚಾಚುವ
ಜ್ಞಾನಕ್ಕೆ ಮರುಳಾಗುವ
ಚಟಗಳಿಗೆ ಬೆನ್ನು ಬೀಳುವ ನೀನು ನಾನಲ್ಲ.

ಈ ಬಗೆಬಗೆಯ ಹೊಂಡದಲಿ
ಮುಳಿಗೇಳುವ ಮಜದಲಿ
ನಿಜದ ನಾನು ನನಗೆ ಸಿಗಲೇ ಇಲ್ಲ
ಇದೆ-ಇಲ್ಲಗಳ ನಡುವೆ
ಅಲ್ಲದ್ದು ತೂರಿಕೊಂಡು
ಬದುಕು ಲಪಟಾಯಿಸಿದ್ದು ಅರಿವಾಗಲಿಲ್ಲ.

Previous post ಹುಡುಕಾಟ
ಹುಡುಕಾಟ
Next post ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್

Related Posts

ಬೆಳಕಲಿ ದೀಪ
Share:
Poems

ಬೆಳಕಲಿ ದೀಪ

December 8, 2021 ಜ್ಯೋತಿಲಿಂಗಪ್ಪ
ಅಕಾಲ; ಹಗಲು ಕನಸು ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ.. ಈ ಜ್ಞಾನದ ಕೇಡು ನನಗೆ ಕಣ್ಣಲ್ಲಿ ಕತ್ತಲಿರಿಸಿದೆ ಬೆಳಕಲಿ ದೀಪ...
ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ನದಿಯನರಸುತ್ತಾ…
ನದಿಯನರಸುತ್ತಾ…
October 6, 2020
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
ಗುರುವೆಂಬೋ ಬೆಳಗು…
ಗುರುವೆಂಬೋ ಬೆಳಗು…
February 6, 2025
ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
February 5, 2020
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ಶಿವಾಚಾರ
ಶಿವಾಚಾರ
April 9, 2021
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
April 6, 2024
Copyright © 2026 Bayalu