Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪಾದಕೂ ನೆಲಕೂ…
Share:
Poems June 14, 2024 ಜ್ಯೋತಿಲಿಂಗಪ್ಪ

ಪಾದಕೂ ನೆಲಕೂ…

ಕಣ್ಣೇ ಸೋತಿರಲು
ಈ ಮಾಯಾಂಗನೆ ಬೆತ್ತಲೆ ಆಗುವಳು

ನದಿ
ಒಣಗಿದೆ ಒರತೆಯಲೂ ನೀರು ಜಿನುಗದು

ಕಣ್ಣ
ಒಳಗಣ ದೀಪ ಮಂಕು

ಯಾರಿಗೆ ಗೊತ್ತು
ಯಾವ ದಾರಿ ಎಲ್ಲಿಗೋ
ಪಾದಕೂ ನೆಲಕೂ ಎನಿತು ಅಂತರ

ಈ
ಕಣ್ಣ ಪಾಪೆ ಹೀರಿದ್ದಷ್ಟೇ ಬೆಳಕು
ಪಾಪೆ ಸುಕ್ಕು

ಮೊದಲು ಉಂಡಿಟ್ಟ ತಟ್ಟೆಗಳನೆಲ್ಲಾ ತಿಕ್ಕಿ ತೊಳೆಯಬೇಕು

ಈ ನನ್ನ ಗೆಳತಿಗೆ ಹೇಳುವುದೇನಿದೆ
ಎಲ್ಲಾ ಅರಿತೂ ಅರಿಯದಂತೆ
ಅರಿಯದಿರಲೂ ಅರಿದಂತೆಯೇ ಒಡನಾಡುವ ಚತುರೆ

ಈ
ಧ್ಯಾನದೊಳು ಏನಿದೆಯೋ…
ಏನಿಲ್ಲವೋ…

ಅಳಿಸಲಾಗದು
ಅಂಗೈಯ ಗೆರೆ
ಸಾವು ಎಂಬುದು ಅಮೂರ್ತ.

Previous post ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
Next post ಚಿತ್ತ ಸತ್ಯ…
ಚಿತ್ತ ಸತ್ಯ…

Related Posts

ಆಸರೆ
Share:
Poems

ಆಸರೆ

August 6, 2022 ಜ್ಯೋತಿಲಿಂಗಪ್ಪ
ಅರಿವಿನ ಮನೆಯ ಮುಂದೆ ನಿಂತು ಭಿಕ್ಷೆ ಬೇಡುತಿರುವೆ ನಿಂತು ನೀಡುವರು ಯಾರು ಮನೆ ಖಾಲಿ ಅರಿಯದೆ ಅರಿವು ನಿಲ್ಲದು ಊರ ಹೊರಗೆ ನಿಂತು ಒಳಗೆ ಹೋಗುವ ದಾರಿ ಕೇಳುತಿರುವೆ ಹೇಳರು. ಗಾಳಿಯ...
ಈ ಬಳ್ಳಿ…
Share:
Poems

ಈ ಬಳ್ಳಿ…

October 21, 2024 ಜ್ಯೋತಿಲಿಂಗಪ್ಪ
ಗಾಳಿ ಉರಿಸುವುದು ಆರಿಸುವುದು ದೀಪ ಬೆಳಗಿಸುವುದು ಯಾರು…? ನಾನೂ ಒಂದು ದೀಪ ದ್ವೀಪದ ದಡ ಕಾಯುತ್ತಾ ಕಾಯುತ್ತಾ ಅಲೆ ಎಣಿಸುತಿರುವೆ ಈ ಸಂಖ್ಯೆ ಮೂರನ್ನು ದಾಟದೇ… ಈ...

Comments 4

  1. Padmalaya
    Jun 14, 2024 Reply

    ಅತ್ಯಂತ….ಅತ್ಯಂತ…ಆಳ..ಕಣ್ಣಿಗೂ ಮೆದುಳಿಗೂ ಸಿಲುಕದಷ್ಟು ದೂರ…ದೂರ

  2. Giri Devaraj
    Jun 16, 2024 Reply

    ಸಾವು ಅಮೂರ್ತ- ಕವನ ಅನುಭಾವಿಕ ನೆಲೆಯಲ್ಲಿ ಮಾತಾಡುತ್ತದೆ🙏🏿

  3. ಬಸವ, ಕರುಣಾ ಜೀವ ಕಲ್ಯಾಣ ಟ್ರಸ್ಟ್, ದಾವಣಗೆರೆ
    Jun 17, 2024 Reply

    ಜ್ಯೋತಿಲಿಂಗಪ್ಪ ಅಣ್ಣಾವ್ರು ನಿಗೂಢ, ನಿಲುಕದ, ಪ್ರಜ್ಞೆ ಆಚೆಗಿನ ಕವಿ ಅನಿಸಿ ಮಿಂಚಿನಂತೆ ಅಲ್ಪ ಸ್ವಲ್ಪ ಅರ್ಥ ಗೋಚರಿಸಿ ನನ್ನ ಮಂದ ಮತಿಯ ಮಿತಿಯಿದು ಅನಿಸುತ್ತದೆ… ಚಿಂತನೆಗೆ, mysticism ಗೆ ದಾರಿ ತೋರುವ ಅವರಿಗೆ ಧನ್ಯವಾದಗಳು, ಕೃತಜ್ಞತೆಗಳು.

  4. Vishwa Loki
    Jul 1, 2024 Reply

    ಉಂಡಿಟ್ಟ ತಟ್ಟೆಗಳನ್ನೆಲ್ಲಾ ತಿಕ್ಕಿ ತೊಳೆಯುವುದೇ ಬದುಕಾಗಿದೆ. ಉಣ್ಣದೆ ಇರಲು ಸಾಧ್ಯವೇ? ತಿಕ್ಕಿ ತೊಳೆಯುವುದರಿಂದ ಮುಕ್ತಿ ಇಲ್ಲವೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ
January 10, 2021
ನದಿಯನರಸುತ್ತಾ…
ನದಿಯನರಸುತ್ತಾ…
October 6, 2020
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ಹೀಗೊಂದು ತಲಪರಿಗೆ (ಭಾಗ-4)
ಹೀಗೊಂದು ತಲಪರಿಗೆ (ಭಾಗ-4)
October 5, 2021
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ಹಣತೆ ಸಾಕು
ಹಣತೆ ಸಾಕು
September 14, 2024
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಧರೆಗೆ ಸೂತಕವುಂಟೆ?
ಧರೆಗೆ ಸೂತಕವುಂಟೆ?
August 11, 2025
Copyright © 2026 Bayalu