Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪೊರೆವ ದನಿ…
Share:
Poems August 11, 2025 ಕೆ.ಆರ್ ಮಂಗಳಾ

ಪೊರೆವ ದನಿ…

ಮೈಯೆಲ್ಲಾ ಕಿವಿಯಾಗಿ
ಮನವೆಲ್ಲಾ ಕಣ್ಣಾಗಿ
ಕೇಳಿಸಿಕೊಂಡೆನಯ್ಯಾ
ನೀನಾಡಿದ ಒಂದೊಂದು ನುಡಿಯ
ಮರೆತು ಹೋಗದಂತೆ
ನಾಲಿಗೆಗೆ ಮಂತ್ರವಾಗಿಸಿದೆ
ಜಾರಿಹೋಗದಂತೆ
ಜೋಪಾನದಿ ಎದೆಗಿಳಿಸಿಕೊಂಡೆ.

ಇಲ್ಲಿದೆ ಕೊಳೆ ಅಲ್ಲಿದೆ ಹೊಲೆ
ಇದೋ ನೋಡು
ದುರ್ವಿಚಾರಗಳ ನೆಲೆ
ಅದೇಕೆ ಬಂತು
ತನ್ನೆಲ್ಲಾ ಬಳಗಸಹಿತ
ದುರ್ಗುಣಗಳ ದಂಡು
ಹುಡುಕಿ ತೆಗೆ ತೆವಲುಗಳ
ಹಿಸುಕಿ ನೋಡು
ನಂಬಿಕೆಗಳ, ಭಾವಗಳ
ಬೂಟಾಟಿಕೆಯ ನಡೆಗಳ
ತೋರುತ್ತ ಹೋದೆಯಯ್ಯಾ
ಮಿಂಚಿನ ಚಾಟಿಯಂತೆ…

ಹಗಲುರಾತ್ರಿ ಎನದೆ
ಬೇಡದ್ದು, ಮರೆತದ್ದು
ಅಗತ್ಯವೇ ಇಲ್ಲದ್ದು
ಎಲ್ಲ ಕಲಬೆರಕೆಯಾಗಿ
ಸುಳಿಯಾಗಿ ಸೆಳೆವಾಗ
ಎದೆಯುದ್ದ, ಕೊರಳುದ್ದ
ಉಕ್ಕೇರಿ ಅಪ್ಪಳಿಸುವಾಗ
ಕೊಚ್ಚಿ ಹೋಗದಂತೆ
ನಿಲುವ ಗುಟ್ಟ ಹೇಳಿಕೊಟ್ಟೆ.

ಸುತ್ತುವರಿದ ಕದಳಿಯಲಿ
ಕಳೆದುಹೋಗದಂತೆ
ಎದುರಿನ ಜಾಲಕ್ಕೆ
ಸಿಕ್ಕಿ ಬೀಳದಂತೆ
ನನ್ನದೇ ಮೋಸಕ್ಕೂ
ನಾನೊಳಗಾಗದಂತೆ
ಭವದ ಜಟಿಲತೆಗಳಿಗೆ
ಎದೆಗುಂದದಂತೆ
ಮೂರರ ಮಾಯೆಗೆ
ಮಾರುಹೋಗದಂತೆ
ಪಾರಾಗುವ ಪಟ್ಟುಗಳ
ಕಲಿಸಿ ಕಾಪಾಡಿದೆ.

Previous post …ಬಯಲನೆ ಬಿತ್ತಿ
…ಬಯಲನೆ ಬಿತ್ತಿ
Next post ಮೈಯೆಲ್ಲಾ ಕಣ್ಣಾಗಿ (10)
ಮೈಯೆಲ್ಲಾ ಕಣ್ಣಾಗಿ (10)

Related Posts

ಆಗು ಕನ್ನಡಿಯಂತೆ…
Share:
Poems

ಆಗು ಕನ್ನಡಿಯಂತೆ…

September 13, 2025 ಕೆ.ಆರ್ ಮಂಗಳಾ
ಗ್ರಹಿಸು ಸಂಗ್ರಹಿಸಬೇಡ ಏನನ್ನೂ… ಕಂಡದ್ದು ಕೇಳಿದ್ದು ಮೂಸಿದ್ದು ಮುಟ್ಟಿದ್ದು ಅನುಭವಿಸಿದ್ದು ಓದಿದ್ದು ಕೂಡ… ತೂರಿಹೋಗಲಿ ಅವಿತ ವಾಸನೆಗಳೆಲ್ಲಾ ಮುಗಿಬಿದ್ದು ಬರುವ...
ಹಣತೆಯ ಹಂಗು
Share:
Poems

ಹಣತೆಯ ಹಂಗು

October 19, 2025 ಕೆ.ಆರ್ ಮಂಗಳಾ
ನಾನೆಂಬ ಕತ್ತಲೆಗೆ ನೀನೆಂಬ ಜ್ಯೋತಿ ನಾನಿದ್ದಾಗ ನೀ ಇರಲೇ ಬೇಕೆನುವ ತರ್ಕ ನಾನು ಕರಗದೆ ನೀನಾಗಲಾರೆ ನೀನು ಸರಿಯದೇ ಬೆಳಕ ಕಾಣಲಾರೆ… ಕತ್ತಲೆಗಲ್ಲವೆ ಬೆಳಕಿನ ಮೋಹ? ಕೈಯ ಹಣತೆಯಲಿ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
June 10, 2023
ತಮ್ಮೊಳಗಿರ್ದ ಮಹಾಘನವನರಿಯರು
ತಮ್ಮೊಳಗಿರ್ದ ಮಹಾಘನವನರಿಯರು
May 8, 2024
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
February 11, 2022
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಹಣತೆ ಸಾಕು
ಹಣತೆ ಸಾಕು
September 14, 2024
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
Copyright © 2026 Bayalu