Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
…ಬಯಲನೆ ಬಿತ್ತಿ
Share:
Poems August 11, 2025 ಜ್ಯೋತಿಲಿಂಗಪ್ಪ

…ಬಯಲನೆ ಬಿತ್ತಿ

ಅಲ್ಲಿ
ನೇತಾಡುವ
ಪಟಗಳೆಲ್ಲಾ ನಿನ್ನೆಯವು
ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ

ಕಣ್ಣೊಳಗಣ ರೂಹು ಕಣ್ಣ ಕೊಲ್ಲದು
ಕಂಗಳ ಮರೆಯ ಕತ್ತಲಿಗೆ
ಕಂಗಳೇ ಪ್ರಮಾಣ

ಪದದ ಅರ್ಥ ಬಿಟ್ಟು
ಕೊಡದ ಗುಟ್ಟು

ನಿಂದರೆ ನೆಳಲಿಲ್ಲ
ನಡೆದರೆ ಹೆಜ್ಜೆಯಿಲ್ಲ

ಊರಿಂದ ಹೋದವರು
ದೂರದ ಸುದ್ದಿ ಹೇಳರು

ಮರವೇ ಬಿದ್ದು ಒಣಗಿತು
ನೆಳಲು
ಇನ್ನೇನು ಇಲ್ಲ

ನೆಲಕ್ಕೆ ಬಿದ್ದ ಹಣ್ಣು
ಮಣ್ಣಾಗುವುದ ಕಾಯುತ್ತಾ ಇದೆ ಬೀಜ.

Previous post ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
Next post ಪೊರೆವ ದನಿ…
ಪೊರೆವ ದನಿ…

Related Posts

ಸಂಭ್ರಮಿಸುವೆ ಬುದ್ದನಾಗಿ
Share:
Poems

ಸಂಭ್ರಮಿಸುವೆ ಬುದ್ದನಾಗಿ

August 11, 2025 ಜಬೀವುಲ್ಲಾ ಎಂ.ಅಸದ್
ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...
ಪೊರೆವ ದನಿ…
Share:
Poems

ಪೊರೆವ ದನಿ…

August 11, 2025 ಕೆ.ಆರ್ ಮಂಗಳಾ
ಮೈಯೆಲ್ಲಾ ಕಿವಿಯಾಗಿ ಮನವೆಲ್ಲಾ ಕಣ್ಣಾಗಿ ಕೇಳಿಸಿಕೊಂಡೆನಯ್ಯಾ ನೀನಾಡಿದ ಒಂದೊಂದು ನುಡಿಯ ಮರೆತು ಹೋಗದಂತೆ ನಾಲಿಗೆಗೆ ಮಂತ್ರವಾಗಿಸಿದೆ ಜಾರಿಹೋಗದಂತೆ ಜೋಪಾನದಿ...

Comments 1

  1. ಡಾ.ಉಮೇಶ ಸೊರಬ
    Aug 13, 2025 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ” ಬಯಲನೆ ಬಿತ್ತಿ ” , ಕಾಲದ ಪರಿಧಿಯಾಚೆ ನಿಂತ ಜಾಗೃತ ಮನಸ್ಸೊಂದು ‘ ಬಯಲು ‘ ಜಿಜ್ಞಾಸೆ ಗೆ ಆತುಕೊಂಡು ಮನುಷ್ಯ ಸಂಬಂಧಗಳ ಅರ್ಥವನ್ನು ವ್ಯಾಖ್ಯಾನಿಸುವ ಅಪರೂಪದ ಕವಿತೆಯಾಗಿ ಮೂಡಿಬಂದಿದೆ.ಕವಿಯ ಅರಿವು ಮತ್ತು ಅನುಭವಗಳು ಕವಿತೆಯ ಆಶಯವನ್ನು ವಿಶೇಷ ರೂಪಕಗಳ ಮೂಲಕ ಹೃದ್ಯಗೊಳಿಸುವ ಕುಶಲಕಾರ್ಯ ಇಲ್ಲಿ ವಿಶೇಷವಾಗಿ ಗೋಚರಿಸುತ್ತದೆ.’ ಪದದ ಅರ್ಥವನ್ನು ಬಿಟ್ಟುಕೊಡದ ಗುಟ್ಟ’ ನು ಬಯಲುಮಾಡ ಹೊರಡುವ ಸಹೃದಯರಿಗೆ ಈ ಕವಿತೆ ಒಂದು ಕೌತುಕದ ಸವಾಲೇ ಆಗಿದೆ…..
    ಕವಿಗೆ ಅಭಿನಂದನೆಗಳು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಿದ್ಯೆಯೊಳಗಣ ಅವಿದ್ಯೆ
ವಿದ್ಯೆಯೊಳಗಣ ಅವಿದ್ಯೆ
February 6, 2019
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ನಾನು ಯಾರು? ಎಂಬ ಆಳ ನಿರಾಳ-3
ನಾನು ಯಾರು? ಎಂಬ ಆಳ ನಿರಾಳ-3
May 6, 2020
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
ಅನಾದಿ ಕಾಲದ ಗಂಟು…
ಅನಾದಿ ಕಾಲದ ಗಂಟು…
November 10, 2022
ಶರಣರು ಕಂಡ ಸಮಸಮಾಜ
ಶರಣರು ಕಂಡ ಸಮಸಮಾಜ
July 4, 2022
ಮಾತು ಮಾಯೆ
ಮಾತು ಮಾಯೆ
July 4, 2021
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
ನೆಲದ ನಿಧಾನ
ನೆಲದ ನಿಧಾನ
April 29, 2018
Copyright © 2026 Bayalu