Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾದ ದೇವರು
Share:
Poems January 15, 2026 ಜ್ಯೋತಿಲಿಂಗಪ್ಪ

ಬಯಲಾದ ದೇವರು

ಈ
ದೇವರು
ಒಂದು ಕನಸು

ನಿಜವೂ ಅಹುದು
ಸುಳ್ಳೂ ಅಹುದು

ಕಲ್ಪನೆಯ ಹಾಗೆ
ಕಾಣುವುದು ಕಾಣದು

ನಂಬಿದರೆ ಕೇಡಿಲ್ಲ
ನಂಬದಿರಲೂ ಕೇಡಿಲ್ಲ

ಕೇಡೆಲ್ಲವೂ ನನ್ನವು

ಈ
ಸುಳ್ಳಿಗೊಂದು ಕಾಣಿಸಲಾರೆ ನಿಜ
ಹುಡುಕುತಿರುವೆ ಸತ್ಯ ಮಿಥ್ಯ
ಮೂಗನ ಕನಸೊಂದು ಮೌನದ ಮೊನೆಯಲಿದೆ

ಸುಳ್ಳು ಕತೆಗಳ ಸತ್ಯದ ಹುಡುಕಾಟ
ಜೀವ ಮರೆಯ ಸಾವು
ಸಾವಿನ ಮರೆಯ ಜೀವನ
ಬದುಕಿನ ಮರೆಯ ಬಯಲು

ಒಣಗಿದ ಎಲೆ
ಉದುರಲು ಕಾಯುತಿರುವ ಚಿಗುರು

ಮೌನವಾದಷ್ಟೂ ಕ್ಷೇಮ
ಹೆತ್ತ ಕರುವ ನೆಕ್ಕಿ ನೆಕ್ಕಿ ತೊಳೆದು ನಿಲಿಸುವ ತಾಯತನ

ನಾ ಹೆತ್ತ ಕೂಸಲ್ಲವೇ…
ಈ ದೇವರು ಬಯಲೇ…

Previous post ಹುಡುಕಾಟ
ಹುಡುಕಾಟ
Next post ನಾನೆಂಬ ನಿನಾದ…
ನಾನೆಂಬ ನಿನಾದ…

Related Posts

ದಾರಿ ಬಿಡಿ…
Share:
Poems

ದಾರಿ ಬಿಡಿ…

December 6, 2020 ಕೆ.ಆರ್ ಮಂಗಳಾ
ದಾರಿ ಬಿಡಿ ದಾರಿ ಬಿಡಿ ಕಲ್ಯಾಣಪುರಕೆ ಹೊರಟಿದ್ದೇನೆ ದಾರಿಬಿಡಿ ನೆನಪುಗಳೇ ಜಗ್ಗದಿರಿ ಹಿಂದಕ್ಕೆ ಅಡ್ಡಕೆ ಕಾಲ್ಕೊಟ್ಟು ಕೆಳಗೆ ಕೆಡವದಿರಿ ಕಳೆದ ಕಾಲಗಳಿಗೆಳೆದು ಸಮಯ...
ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...

Comments 3

  1. Vijaya Bagevadi
    Jan 20, 2026 Reply

    ಸುಳ್ಳು ಕತೆಗಳ ಸತ್ಯದ ಹುಡುಕಾಟ😟

  2. Dr. Umesh Soraba
    Jan 23, 2026 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ಕವಿತೆಗಳಿಗೆ ಭಾವಲೋಕದ ಸತ್ಯ-ಮಿಥ್ಯಗಳೊಂದಿಗೆ ಸೆಣಸುವ ಆರೋಗ್ಯಕರ ಜವಾಬ್ದಾರಿಯ ನಡೆಯೊಂದು ಇದ್ದೇ ಇದೆ. ಇದು ‘ಬಯಲಾದ ದೇವರು’ ಕವಿತೆಯಲ್ಲೂ ಮುಂದುವರೆದಿರುವುದನ್ನು ಕಾಣಬಹುದು… ದೇವರ ಅಸ್ತಿತ್ವದ ಕುರಿತು ಈಗಾಗಲೇ ಇರುವ ಪ್ರಚಲಿತ ವ್ಯಾಖ್ಯಾನ-ವಿವರಣೆಗಳ ಮಧ್ಯೆ ಈ ಕವಿತೆಯಲ್ಲಿ ದೇವರು ಕುರಿತು ಆಲೋಚಿಸಿರುವ ಬಗೆ ಭಿನ್ನವೂ ಆಪ್ತವೂ ಆದುದು. ಈ ದೇವರನ್ನು ನಂಬಿದರೂ ಕೇಡಿಲ್ಲ…. ನಂಬದಿರಲೂ ಕೇಡಿಲ್ಲ…. ಒಣಗಿದ ಎಲೆ ಉದುರಲು ಕಾಯುತಿರುವ ಚಿಗುರಿನಂತೆ ಈ ದೇವರು ಮರಮರಳಿ ಹೊಸತಾಗುವ ರೂಪಕ. ಹುಟ್ಟು- ಸಾವುಗಳ ಮಧ್ಯೆ ಬದುಕಿನ ಸ್ಥಿತಿಸ್ಥಾಪಕತೆಗೆ ಕಾರಕ… ಹೀಗೆ ದೇವರು ಮತ್ತು ದೇವರ ಅಸ್ತಿತ್ವ ಮಾನವ ಪ್ರಜ್ಞೆಯಲ್ಲಿ ನಿಂತ ಬಗೆಯನ್ನು ಕವಿ ಇಲ್ಲಿ ಭಾವಿಸಿದ ಮತ್ತು ಭಾಷ್ಯೀಕರಿಸಿದ ಬಗೆ ವಿಶಿಷ್ಟವಾಗಿದೆ. ಕವಿಗೆ ಅಭಿನಂದನೆಗಳು.

  3. ನವೀನ್ ಕುಮಾರ್, ಬೆಟಗೇರಿ
    Feb 5, 2026 Reply

    ನಿಜ, ಸುಳ್ಳು ಎರಡೂ ಆಗಿರುವುದರಿಂದಲೇ ಆ ದೇವರು ಮನುಷ್ಯನ ಹಳಬಂಡ ಕನಸು, ಕವನ ಚೆನ್ನಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ನಾನರಿಯದ ಬಯಲು
ನಾನರಿಯದ ಬಯಲು
April 9, 2021
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ಲಿಂಗಾಚಾರ
ಲಿಂಗಾಚಾರ
May 6, 2021
ನಿನ್ನದೊಂದು ಸ್ಪರ್ಶ
ನಿನ್ನದೊಂದು ಸ್ಪರ್ಶ
February 16, 2026
ನಿಲುಗಡೆಯಿಲ್ಲದ ಪಯಣ…
ನಿಲುಗಡೆಯಿಲ್ಲದ ಪಯಣ…
September 6, 2026
ಹಾಯ್ಕು
ಹಾಯ್ಕು
September 6, 2023
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
Copyright © 2026 Bayalu