Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಿಂಬ-ಪ್ರತಿಬಿಂಬ
Share:
Poems February 5, 2020 ಜ್ಯೋತಿಲಿಂಗಪ್ಪ

ಬಿಂಬ-ಪ್ರತಿಬಿಂಬ

ನೀನು
ಅಲ್ಲಿ ಉಂಟೆಂದು
ನಾನು
ಇಲ್ಲಿ ತೆವಳಿ ತೆವಳಿ ಬಳಲಿದೆ
ನೀನು ಎಲ್ಲಿರುವೆ
ಎಂಬುದು ನನ್ನ ಕಣ್ಣರಿವು
ಎಂಬುದ
ನಾನಲ್ಲದೆ ನೀನರಿದೆಯಾ ಹೇಳೇ
ಅಕ್ಕಾ
ಬೆಳಕ ತಿಂದಲ್ಲದೆ ಕನ್ನಡಿಯಲಿ ಉದಯಿಸದು ಬಿಂಬ
ಅರಿದ ಅರಿವನು ಉಪಮಿಸಬಾರದು

ತನ್ನರಿವ ತಾನುಣದೆ ಅನ್ಯರಿಗೆ
ಉಣಬಡಿಸುವ ಕೇಡು ನನದಲ್ಲ

ತನ್ನರಿವ ತಾನರಿಯದಾ ಕತ್ತಲು
ಇಳಿದು ಬಾರದಾ ಅರಿವು ತಾನರಿಯದೆ

ಒಳಗಣ ಜ್ಯೋತಿಯೂ
ಹೊರಗಣ ಕತ್ತಲೂ ಸಮನಿಸವು.

****************

ಆ ಮರದ ಕಾಯಲಿ ನೀರು
ತುಂಬಿದೆ ಹೇಗೆಂಬುದ ಎಚ್ಚರದಲಿ
ಹೇಳು ಪುರಾಣ ಕಟ್ಟಿಡು

ಅರಿಯುವ ಅರಿವ ಕಿತ್ತಿಡಲಾರೆ
ಒಣಹುಲ್ಲಿಗೆ ಬೆಂಕಿ ಇಟ್ಟು
ಹಸಿ ಹುಲ್ಲಲಿ ನಂದಿಸದಿರು

ನನ್ನ ಬಿಂಬ ನಿನ್ನಲಿ ಮೂಡದಿರೆ
ನಿನ್ನ ಕನ್ನಡಿ ಎಂಬುವವರು
ಯಾರೇ ಅಕ್ಕಾ
ನಾನಲ್ಲವೇ ನಿನ್ನ ಬಿಂಬ

ಇರಲಿ ಈಗ ಹೇಳು
ಲೌಕಿಕ ಪಾರಮಾರ್ಥಿಕ
ಜ್ಞಾನ ಕರ್ಮ
ಯಾವುದು

ನನ್ನ ನೆರಳು ನನಗಂಟದು
ಕಣ್ಣ ಮುಚ್ಚದು ಕನ್ನಡಿ ಬಿಂಬ
ಕಣ್ಣ ಮುಚ್ಚಿದರೆ ಕಾಣದು ಬಿಂಬ

ನನ್ನ ಹುಟ್ಟಿನೊಂದಿದೆ ಈ ಜೀನ್ಸ್
ನಕ್ಷತ್ರ ಸುಡುವ ಕಣ್ಣ ಹೊಳಪು.

Previous post ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
Next post ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ

Related Posts

ಕೇಳಿಸಿತೇ?
Share:
Poems

ಕೇಳಿಸಿತೇ?

April 6, 2024 ಜ್ಯೋತಿಲಿಂಗಪ್ಪ
ಈ ಮೂರರ ತಿರುಳ ತೆಗೆದವರಾರು ಐದರ ಒಗಟ ಬಿಡಿಸಿದವರಾರು ಆರರ ಬೆಡಗು ಸವಿದವರಾರು ಎರಡರಲಿ ಒಂದಾಗುವುದು ಒಂದರಲಿ ಹಲವಾಗುವುದು ಒಂದೆರಡಾಗಿ ಎರಡು ನಾಲ್ಕಾಗಿ… ಅನಂತವ ಕಂಡರೆ...
ಮಣ್ಣು ಮೆಟ್ಟಿದ ದಾರಿ
Share:
Poems

ಮಣ್ಣು ಮೆಟ್ಟಿದ ದಾರಿ

October 5, 2021 ಜ್ಯೋತಿಲಿಂಗಪ್ಪ
ಈ ಸಿಟ್ಟು ದ್ವೇಷ ಪ್ರೇಮ ಕಾಮ ಮದ… ಎಲ್ಲಾ ನಾನು ಹೊತ್ತು ಹೋಗುವನೇ… ಈ ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ ಇದೆಲ್ಲಾ ಮಣ್ಣಾಗುವುದು ಇದ್ದೇ ಇದೆ ನಾನು ಮಣ್ಣಾಗುವ...

Comments 2

  1. Geetha Jayraj
    Feb 6, 2020 Reply

    ಒಳಗಣ ಜ್ಯೋತಿಯೂ, ಹೊರಗಣ ಕತ್ತಲು ಸಮನಿಸವು! ಆಹಾ!!

  2. ಕವಿತಾ ಲಕ್ಷ್ಮೇಶ್ವರ
    Feb 9, 2020 Reply

    ಮತ್ತೆ ಕವನಗಳು ಬಯಲಿನಲ್ಲಿ ಶುರುವಾಗಿದ್ದು ತುಂಬಾ ಖುಷಿಯಾಯಿತು. ಇಲ್ಲಿಯ ಕವನಗಳು ವಿಶಿಷ್ಟವಾಗಿರುತ್ತವೆ. ಹೊಸ ದಿಕ್ಕಿನತ್ತ ಬೊಟ್ಟು ಮಾಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು
August 6, 2022
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
ವಚನಾಮೃತಂ: ಪುಸ್ತಕ ವಿಮರ್ಶೆ
ವಚನಾಮೃತಂ: ಪುಸ್ತಕ ವಿಮರ್ಶೆ
February 6, 2025
ಸುಮ್ಮನೆ ಇರು
ಸುಮ್ಮನೆ ಇರು
December 6, 2020
ಅನಿಮಿಷನ ಕಥೆ- 6
ಅನಿಮಿಷನ ಕಥೆ- 6
April 11, 2025
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
Copyright © 2025 Bayalu