Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕ ಬೆಂಬತ್ತಿ…
Share:
Poems November 9, 2021 ಕೆ.ಆರ್ ಮಂಗಳಾ

ಬೆಳಕ ಬೆಂಬತ್ತಿ…

ಸಾಲು ಸಾಲು ಹಣತೆಗಳ ಹಚ್ಚಿ
ನೋಡುತ್ತಲೇ ಇದೆ
ಆಸೆಯಿಂದ ಈ ಮನ
ಬೆಳಕ ಗೋರಲು… ಒಳಗ ಬೆಳಗಲು…

ಕತ್ತಲೆಯ ಭಯವೋ, ಬೆಳಕಿನ ಮೋಹವೋ..

ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ
ಅನಾದಿ ಕಾಲದ ಅಜ್ಞಾನದ ಕಮಟು
ಆ ದೂಳು, ಆ ಗದ್ದಲ
ಸಾವಿರ ಸಾವಿರ ಇರುಳು
ಬಸಿದು ಕುಳಿತಂತೆ ನನ್ನೊಳಗೆ
ದಟ್ಟಗತ್ತಲು, ಕಾರ್ಗತ್ತಲು, ಕಡುಗತ್ತಲು
ಭವದ ಈ ಗವಗತ್ತಲನಟ್ಟಲು
ಸಾವಿರ ಸೂರ್ಯರೂ ಸಾಲಲಿಕ್ಕಿಲ್ಲ!

ಅಷ್ಟಿಷ್ಟು ಬತ್ತಿಗೆ, ಇಷ್ಟಿಷ್ಟು ಎಣ್ಣೆ
ಉರಿಯು ದಾಟುತಲಿರುವ
ಮರ್ಮವ ಕಾಣಬಲ್ಲೆಯಾ?

ಕಾಯ- ಜೀವದ ಬೆಸುಗೆಯಲಿ
ಅನೂಹ್ಯ ಪ್ರಕೃತಿಯೊಳಿರುವ
ಜೀವಚೈತನ್ಯವ ನೋಡಬಲ್ಲೆಯಾ?

-ಗುರು ಹಚ್ಚಿದ ಕಿಡಿಯಲ್ಲಿ
ಕಪ್ಪಾದ ಕಣ್ಣಾಲೆಯೊಳಗೊಂದು ಮಿಂಚು!
ಕಂದೀಲು ಹಿಡಿದು
ಬೆಳಕ ಹುಡುಕಲು ಹೊರಟ
ಮನ ನಾಚಿತ್ತು… ನಾಚಿತ್ತು…

Previous post ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
Next post ನಾನು ಯಾರು?
ನಾನು ಯಾರು?

Related Posts

ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...
ಕಾಣದ ಬೆಳಕ ಜಾಡನರಸಿ…
Share:
Poems

ಕಾಣದ ಬೆಳಕ ಜಾಡನರಸಿ…

December 13, 2024 ಜಬೀವುಲ್ಲಾ ಎಂ.ಅಸದ್
ಮರೆತ ಇಳಿ ಸಂಜೆಯೊಂದು ಮುಂಜಾನೆಗೆ ಕಾಡುವಾಗ ಕಾಫಿ ಮುಗಿದ ಕಪ್ಪಿನಲಿ ತುಂಬಿ ಚೆಲ್ಲಿದೆ ವೈರಾಗ್ಯ ಶೂನ್ಯ ಹೀರಿದವನೆ ವಶ ಕಾಲು ಮುರಿದ ಕುರ್ಚಿಯ ಮೇಲು ಕಾಲಿನ ಮೇಲೆ ಕಾಲು ಹಾಕಿ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
June 12, 2025
ವೀರದಾಸಮ್ಮನ ಸಹಜಾಮನಸ್ಕ ಯೋಗ
ವೀರದಾಸಮ್ಮನ ಸಹಜಾಮನಸ್ಕ ಯೋಗ
October 21, 2024
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಶಿವಾಚಾರ
ಶಿವಾಚಾರ
April 9, 2021
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
May 8, 2024
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
December 9, 2025
ಮೈಯೆಲ್ಲಾ ಕಣ್ಣಾಗಿ (10)
ಮೈಯೆಲ್ಲಾ ಕಣ್ಣಾಗಿ (10)
September 13, 2025
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
Copyright © 2026 Bayalu