Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕ ಬೆಂಬತ್ತಿ…
Share:
Poems November 9, 2021 ಕೆ.ಆರ್ ಮಂಗಳಾ

ಬೆಳಕ ಬೆಂಬತ್ತಿ…

ಸಾಲು ಸಾಲು ಹಣತೆಗಳ ಹಚ್ಚಿ
ನೋಡುತ್ತಲೇ ಇದೆ
ಆಸೆಯಿಂದ ಈ ಮನ
ಬೆಳಕ ಗೋರಲು… ಒಳಗ ಬೆಳಗಲು…

ಕತ್ತಲೆಯ ಭಯವೋ, ಬೆಳಕಿನ ಮೋಹವೋ..

ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ
ಅನಾದಿ ಕಾಲದ ಅಜ್ಞಾನದ ಕಮಟು
ಆ ದೂಳು, ಆ ಗದ್ದಲ
ಸಾವಿರ ಸಾವಿರ ಇರುಳು
ಬಸಿದು ಕುಳಿತಂತೆ ನನ್ನೊಳಗೆ
ದಟ್ಟಗತ್ತಲು, ಕಾರ್ಗತ್ತಲು, ಕಡುಗತ್ತಲು
ಭವದ ಈ ಗವಗತ್ತಲನಟ್ಟಲು
ಸಾವಿರ ಸೂರ್ಯರೂ ಸಾಲಲಿಕ್ಕಿಲ್ಲ!

ಅಷ್ಟಿಷ್ಟು ಬತ್ತಿಗೆ, ಇಷ್ಟಿಷ್ಟು ಎಣ್ಣೆ
ಉರಿಯು ದಾಟುತಲಿರುವ
ಮರ್ಮವ ಕಾಣಬಲ್ಲೆಯಾ?

ಕಾಯ- ಜೀವದ ಬೆಸುಗೆಯಲಿ
ಅನೂಹ್ಯ ಪ್ರಕೃತಿಯೊಳಿರುವ
ಜೀವಚೈತನ್ಯವ ನೋಡಬಲ್ಲೆಯಾ?

-ಗುರು ಹಚ್ಚಿದ ಕಿಡಿಯಲ್ಲಿ
ಕಪ್ಪಾದ ಕಣ್ಣಾಲೆಯೊಳಗೊಂದು ಮಿಂಚು!
ಕಂದೀಲು ಹಿಡಿದು
ಬೆಳಕ ಹುಡುಕಲು ಹೊರಟ
ಮನ ನಾಚಿತ್ತು… ನಾಚಿತ್ತು…

Previous post ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
Next post ನಾನು ಯಾರು?
ನಾನು ಯಾರು?

Related Posts

ಹಾಯ್ಕು
Share:
Poems

ಹಾಯ್ಕು

September 6, 2023 ಜ್ಯೋತಿಲಿಂಗಪ್ಪ
೦೧ ದೀಪ ಹಿಡಿದು ಇರುಳು ಆ ನಕ್ಷತ್ರ ಹುಡುಕಲುಂಟೇ… ೦೨ ಮದವೇ ಮದ್ಯ ಮದ ಏರಿದ ಅಷ್ಟೂ ಮತ್ತು ಏರಿತು. ೦೩ ಸಾವು ಎಂಬುದು ಕೊಬ್ಬಿನ ಮಾತು ಅಲ್ಲಾ ಮೆಲ್ಲ ಮಾತಾಡು. ೦೪...
ಭವ ರಾಟಾಳ
Share:
Poems

ಭವ ರಾಟಾಳ

September 10, 2022 ಕೆ.ಆರ್ ಮಂಗಳಾ
ಇಗೋ ಹರಾಜಾಗುತ್ತಿದೆ ಈ ದೇಹ ಪ್ರತಿ ದಿನ, ಪ್ರತಿ ಗಳಿಗೆ ಕಾಣದ ಖದೀಮನ ಕೈಗೆ ಸಿಕ್ಕು ತನ್ನದಲ್ಲದ ಕಾಯವನು ಹರಾಜು ಹಾಕುತ್ತಲೇ ಇರುತ್ತಾನೆ ಕ್ಷಣಾರ್ಧದ ಬಿಡುವೂ ಕೊಡದೆ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗಾಳಿ ಬುರುಡೆ
ಗಾಳಿ ಬುರುಡೆ
June 17, 2020
ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
June 5, 2021
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
February 5, 2020
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
September 14, 2024
ತತ್ವಪದಗಳ ಜಾಡು ಹಿಡಿದು…
ತತ್ವಪದಗಳ ಜಾಡು ಹಿಡಿದು…
October 6, 2020
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ
May 6, 2021
Copyright © 2026 Bayalu