Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಭವ ರಾಟಾಳ
Share:
Poems September 10, 2022 ಕೆ.ಆರ್ ಮಂಗಳಾ

ಭವ ರಾಟಾಳ

ಇಗೋ ಹರಾಜಾಗುತ್ತಿದೆ ಈ ದೇಹ
ಪ್ರತಿ ದಿನ, ಪ್ರತಿ ಗಳಿಗೆ
ಕಾಣದ ಖದೀಮನ ಕೈಗೆ ಸಿಕ್ಕು

ತನ್ನದಲ್ಲದ ಕಾಯವನು
ಹರಾಜು ಹಾಕುತ್ತಲೇ ಇರುತ್ತಾನೆ
ಕ್ಷಣಾರ್ಧದ ಬಿಡುವೂ ಕೊಡದೆ

ಕೊಳ್ಳುವವರಿಗಿಲ್ಲಿ ಬರವಿಲ್ಲ
ಬಿಡ್ ಮಾಡುತ್ತಲೇ ಇರುತ್ತವೆ
ಲಕ್ಷೋಪಲಕ್ಷ ಭಾವಗಳು
ಕೊನೆಯಿಲ್ಲದ ಬೇಡಿಕೆಗಳು
ತಬ್ಬಿಕೊಂಡು ಅಮರಿಕೊಳುವ
ನಂಬುಗೆಗಳು, ಚಿತ್ರವಿಚಿತ್ರ ಸೆಳೆತಗಳು
ಅನಂತ ಮುಖವಾಡಗಳ ಹೊತ್ತ
ಅಹಮಿನ ಅವತಾರಗಳು
ನಾ ಮುಂದು ತಾ ಮುಂದು ಎನ್ನುವ
ನಿರಂತರ ಪೈಪೋಟಿ…

ಒಡಲ ಸೇರುತ್ತಲೇ ಜೀವ ಪಡೆವ
ಈ ವಿದೇಹಗಳಿಗೆಲ್ಲಾ
ಯಾವ ಕರಾರುಗಳಿಲ್ಲದೆ
ಜೀತ ಮಾಡುತ್ತಿರುವ
ಕಾಯವು ಅಮಾಯಕವೋ?
ಮೋಸವನರಿಯದ ಮೊದ್ದೋ?
ತೀರದಾಸೆಯ ದಾಹಿಯೋ…

ವಿಷಯಂಗಳ ಕೈ ಬದಲಾದ
ಗಳಿಗೆ-ಗಳಿಗೆಗೂ ಇದಕೆ
ಹುಟ್ಟು-ಸಾವಿನ ಚಕ್ರ
ಮತ್ತದೇ ಭವದ ರಾಟಾಳ
ತಾನಾರೆನ್ನುವ ಪ್ರಜ್ಞೆ
ಮಾಸಿ ಈ ಅಂಗಕ್ಕೆ
ಯುಗಯುಗಗಳೇ ಕಳೆದಿವೆ…

ಗುರು ಅರಿವು ಸಿಕ್ಕಾಗಲೇ
ಹರಾಜಿನ ಸದ್ದು ಅಡಗೀತು
ಸುಖ-ದುಃಖಗಳ ಬವಣೆ ತಪ್ಪೀತು
ಜನನ-ಮರಣಗಳ ಆಟ ನಿಂದೀತು
ಕಾಯಕ್ಕೆ ಬಿಡುಗಡೆ ದಕ್ಕೀತು.

Previous post ಲಿಂಗದ ಹಂಗೇ…
ಲಿಂಗದ ಹಂಗೇ…
Next post ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ

Related Posts

ಆ ದಾರಿಯೇನು ಕುರುಡೇ…
Share:
Poems

ಆ ದಾರಿಯೇನು ಕುರುಡೇ…

June 5, 2021 ಜ್ಯೋತಿಲಿಂಗಪ್ಪ
ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ ಈ ಹುಣುಸೇ ಮರದ ಹುಳಿಗೇನು ಮುಪ್ಪೇ ಕನ್ಯೆಯ ಬೆನ್ನ ಬೆವರ ಉಪ್ಪು...
ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...

Comments 3

  1. Ramesh. M.Y
    Sep 18, 2022 Reply

    ರಾಟಾಳ ಎಂದರೆ ಚಕ್ರ ಅಥವಾ ಚರಕ ಎಂದು ಗೊತ್ತಾಯಿತು. ಕವನ ಚೆನ್ನಾಗಿದೆ.

  2. Gangadhar Mudaliar
    Sep 18, 2022 Reply

    ಭವದ ರಾಟಾಳ ಓದಿದೆ, ‘ಹರಾಜಿನ ಸದ್ದನ್ನು’ ನೀವೇ ಅಡಗಿಸಬೇಕು.

  3. ಪೆರೂರು ಜಾರು, ಉಡುಪಿ
    Sep 18, 2022 Reply

    ಹರಾಜಾದ ಗುರುಗಳು ಭವದ ರಾಟೆಯ ಭಾಗ
    ಹರಾಜು ತಡೆಯಲು ಇನ್ನೆಲ್ಲಿದೆ ಜಾಗ
    ತನ್ನರಿವು ತನ ತಲೆಗೆ ತನ್ನ ಕಯ್ಯೊಂದೆ ಈಗ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ಬೆಳಗಿನ ಬೆಳಗು ಮಹಾಬೆಳಗು
ಬೆಳಗಿನ ಬೆಳಗು ಮಹಾಬೆಳಗು
November 1, 2018
ನನ್ನೆದುರು ನಾ…
ನನ್ನೆದುರು ನಾ…
March 6, 2024
Copyright © 2025 Bayalu