Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮರೆತೆ…
Share:
Poems July 4, 2022 ಜ್ಯೋತಿಲಿಂಗಪ್ಪ

ಮರೆತೆ…

ಮಗುವಾಗಬೇಕು ನಿಜ
ಮರಳದು ಚೈತನ್ಯ ಮರೆತೆ

ಹೂಳಲಾಗದು ನೆಳಲು ನಿಜ
ನೆಳಲು ಹಿಂಬಾಲಿಸುವುದು ಮರೆತೆ

ನೆರಳು ಯಾವಾಗಲೂ ಇರದು ನಿಜ
ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ

ಸಮಯ ಕಳೆಯುವುದು ನಿಜ
ಕಳೆದ ಸಮಯ ಕಳೆದುದು ಮರೆತೆ

ಸಮಯಕೆ ಸಾವಿಲ್ಲ ನಿಜ
ಸಾಯುವ ಸಮಯ ಬರುವುದು ಮರೆತೆ

ಸುಖವೇನೂ ಸುಮ್ಮನೆ ಬರುವುದಿಲ್ಲ ನಿಜ
ದುಃಖವೂ ಜೊತೆಗೆ ಇರುವುದು ಮರೆತೆ

ಖಾಲೀ ಮಡಿಕೆ ಶಬ್ದ ಮಾಡುವುದು ನಿಜ
ಖಾಲಿಯಲಿ ಬಯಲು ತುಂಬುವುದು ಮರೆತೆ

ಏಕಾಂತ ಒಂಟಿತನವಲ್ಲ ನಿಜ
ಒಂಟಿತನವ ಏಕಾಂತವಾಗಿಸುವುದು ಮರೆತೆ

ಸತ್ಯದ ಮುಖವ ಕಾಣಿಸದು ಕತ್ತಲು ನಿಜ
ಕತ್ತಲೊಳಗೂ ಸತ್ಯ ಇರುವುದು ಮರೆತೆ

ಧ್ಯಾನವೇ ಸಾಧನೆಯಲ್ಲ ನಿಜ
ಸಾಧಿಸಿದುದೆಲ್ಲವೂ ಧ್ಯಾನ ಮರೆತೆ

ಬಯಲು ಓದಲು ಬಯಲಿಗಿಳಿದೆ ನಿಜ
ಬಯಲು ಬೆತ್ತಲಾಗಿಸಿ ಬಟ್ಟೆ ತೊಟ್ಟುದ ಮರೆತೆ.

ಬೇರಿಲ್ಲದೆ ಎಲೆಗಳಿರವು ನಿಜ
ಎಲೆಗಳಿರದೆ ಬೇರೂ ನಿಲ್ಲದು ಮರೆತೆ.

ಬೇರು ನೆಲದೊಳಗಿಳೀಯುವಾಗ ಎಲೆಗಳು ನಗುವವು ನಿಜ
ಎಲೆಗಳು ಒಣಗಿ ನೆಲಕುದುರುವಾಗ ಬೇರು ನಗುವುದು ಮರೆತೆ.

Previous post ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
Next post ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…

Related Posts

ಈ ಕ್ಷಣದ ಸತ್ಯ
Share:
Poems

ಈ ಕ್ಷಣದ ಸತ್ಯ

March 12, 2022 ಕೆ.ಆರ್ ಮಂಗಳಾ
ಧಗಧಗಿಸಿ ಮೇಲೇರುತಿಹ ಕೆನ್ನಾಲಿಗೆಯ ಈ ಬೆಂಕಿ ಅಡಗಿತ್ತು ಎಲ್ಲಿ? ಮರದ ಬೊಡ್ಡೆಯಲೋ? ಒಣಗಿದ ಸೌದೆಯಲೋ, ಮದ್ದಗೀರಿದ ಕಡ್ಡಿಯಲ್ಲೋ, ಊದುತಿಹ ಗಾಳಿಯಲ್ಲೋ? ಎಲ್ಲಿಂದ ಬಂತು ಕಣ್ಣ...
ಇದ್ದ ಅಲ್ಲಮ ಇಲ್ಲದಂತೆ
Share:
Poems

ಇದ್ದ ಅಲ್ಲಮ ಇಲ್ಲದಂತೆ

April 29, 2018 ಡಾ. ಶಶಿಕಾಂತ ಪಟ್ಟಣ
ಕಲ್ಯಾಣ ಹಣತೆ ಭಕ್ತಿ ರಸ ತೈಲ ಅನುಭವ ಅಬ್ಬರ ಚಿಂತನೆ ಹೊರಗೆ ದುಡಿ ಮದ್ದಳೆ ಸದ್ದು ಒಳಗೊಳಗೆ ಮಿಡಿವ ತಂತಿ. ಕಾಣಲಾಗದ ತೋರಬಾರದ ಮಹಾ ಘನವ ತೋರಿ ಅರಿವು ಮರೆಯ ಜಾಣ ಅಂಧ ಮೌಢ್ಯಕೆ...

Comments 2

  1. Praveen Kammar
    Jul 5, 2022 Reply

    ಮರೆತದ್ದೇನು, ಅರಿತದ್ದೇನು? ದ್ವಂದ್ವಗಳಲ್ಲಿ ಸಿಕ್ಕಿದ್ದೇನು? ಸುಂದರ ಕವನ.

  2. Channabasappa B
    Jul 7, 2022 Reply

    ಮರೆಯಬೇಕಾದವುಗಳನ್ನು ಮರೆತಾಗಲೇ ಅರಿವು ಕಣ್ಣುತೆರೆಯುವುದು, ಬಯಲು ಸಾಕ್ಷಾತ್ಕಾರವಾಗುವುದು!!!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಕಣ್ಣ ದೀಪ
ಕಣ್ಣ ದೀಪ
September 7, 2021
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
February 11, 2022
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
January 15, 2026
Copyright © 2026 Bayalu