Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಶಾಂತಿ
Share:
Poems April 11, 2025 Bayalu

ಶಾಂತಿ

ಪಯಣದ ಉಬ್ಬುತಗ್ಗು ಹಾದಿಯಲಿ,
ಗಂಧದ ಕಣವಾಗು ಬಯಲಲಿ,
ಸುಮದ ದಳವಾಗು ವನದಲಿ,
ಓ ಮನವೇ,
ಕಂದನ ಮುಗ್ದ ನಗುವಾಗು.| ೧ |

ಹರುಷ ದುಗುಡಗಳ ಮೇಳದಲಿ,
ಮಧುರ ನೆನಪುಗಳ ಹೊಳೆಯಾಗು,
ಹಾಡಾಗು ಕಾಡುವ ನೋವಿಗೆ,
ಓ ಮನವೇ,
ಬಾನಲಿ ಹಾರುವ ಹಕ್ಕಿಯಾಗು. | ೨ |

ಕಷ್ಟಸುಖಗಳು ಬೆರೆತ ಬದುಕಿನಲಿ,
ಚಿಂತನೆಯ ಮುನಿಯಾಗು ಗದ್ದಲದಲಿ,
ಹರಿವ ನದಿಯಾಗು ಹರುಷದಲಿ
ಓ ಮನವೇ,
ಕರುಣೆ ಮಮತೆಗಳ ಸೆಲೆಯಾಗು. | ೩ |

ನೇಸರನ ದಿಗಂತದಂಚಿನ ಪಥದಲಿ,
ಮುಪ್ಪುದೇಹ ಕೊನೆ ಕೋರಿದಂದು,
ಮುಕ್ತನಾಗು ತುಂಬು ಹೃದಯದಲಿ,
ಓ ಮನವೇ,
ಪರಮ ಶಾಂತಿಯ ನೆಲೆಯಾಗು. | ೪ |

-ಅಂಬಳೆ ನಾಗ
(ರವೀಂದ್ರನಾಥ್ ಟಾಗೋರ್ ಅವರ ಕವಿತೆಯಿಂದ ಸ್ಫೂರ್ತಿ ಪಡೆದು)

Previous post ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
Next post ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು

Related Posts

ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...
ನನ್ನ ಶರಣರು…
Share:
Poems

ನನ್ನ ಶರಣರು…

April 9, 2021 ಕೆ.ಆರ್ ಮಂಗಳಾ
ನನ್ನ ಶರಣರು ಅವರು- ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...

Comments 3

  1. Raviraju A
    Apr 20, 2025 Reply

    ಮುಕ್ತವಾಗಲಿ ಮನವು ಎಲ್ಲಾ ಕ್ಲೀಷೆಗಳಿಂದ… ಶಾಂತ ಲಹರಿಯಂತಿದೆ ಭಾವನೆ.

  2. ಕೀರ್ತಿ ಎನ್, ಗುಂಡ್ಲುಪೇಟೆ
    Apr 28, 2025 Reply

    ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ- ಮಾರ್ಮಿಕವಾದ ಸಾಲುಗಳು. ಗಂಧದ ಕಣವಾಗುವುದು!

  3. ಉಮಾದೇವಿ ಶಂಕರಪ್ಪ
    May 1, 2025 Reply

    ಬಯಲು ಕವನಗಳು ಮತ್ತೆ ಮತ್ತೆ ಓದುವಂತಿವೆ✌️

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ಗಣಾಚಾರ
ಗಣಾಚಾರ
August 8, 2021
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಈ ಕನ್ನಡಿ
ಈ ಕನ್ನಡಿ
March 6, 2024
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
Copyright © 2026 Bayalu