Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯ ಸಂತ
Share:
Poems September 7, 2020 ಜ್ಯೋತಿಲಿಂಗಪ್ಪ

ಸಂತೆಯ ಸಂತ

ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ
ಕಣ್ಣಿಗೆ ಕರುಳು ಇರಬಾರದು
ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ
ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ

ಈ ಮೂರು ಮೊಳದ ಗುಂಡಿಯ ತೋಡುವರೈದು ಮಂದಿ
ಓಡುವ ಸೂರ್ಯನ ಹಿಡಿಯಲಾಗದು ನೆರಳು
ಬಿಡಮ್ಮಾ ಇದು ಯಾವ ತತ್ವದ ಹಾಡೋ
ತಂಬೂರಿ ಮೀಟುವ ಬೆರಳು ಮೊಂಡು

ನೆನೆದರೆ ಕಾಡುವುದು ಮರೆಹು
ಮರೆದರೆ ಕಾಡುವುದು ನೆನಹು
ಅರಿದರೆ ಕಾಡುವುದು ನೆನಹು ಮರೆಹು
ಶಬ್ದದೊಳಗಣ ನಿಸದ್ದುವ ಬಲ್ಲವರೇ ಬಲ್ಲರು

ನಿನ್ನಿಂದ ನಾನರಿದೆನಲ್ಲದೆ ಎನ್ನಿಂದ ನೀನಾಗಲಿಲ್ಲ
ಅಂತರಂಗದಲಿ ಅಡಗಿಸಿಟ್ಟ ಭಾವ
ಬಹಿರಂಗದಲಿ ಪೂಜೆಗೊಳ್ಳದು
ಕಣ್ಣ ಒಳಗಣ ಬಿಂಬ ಕಣ್ಣಿಗೆ ಇಂಬು

ಬೆಟ್ಟ ಏರಿ ಬಂದವನ ಕೂಡೇನು ಕಷ್ಟ ಸುಖ
ನೆಲದಲಿ ತೆವಳುವ ಮಣ್ಣು
ಮಣ್ಣಿಲ್ಲದೆ ಇರದು
ಅಂಗವಿಲ್ಲದವಗೆ ಅಂಗಿ ತೊಡಿಸಲುಂಟೇ…

Previous post ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
Next post ಮನಸ್ಸು
ಮನಸ್ಸು

Related Posts

ಸೋತ ಅಂಗೈಗಳಿಗಂಟಿ…
Share:
Poems

ಸೋತ ಅಂಗೈಗಳಿಗಂಟಿ…

October 19, 2025 ಜಬೀವುಲ್ಲಾ ಎಂ.ಅಸದ್
ನನ್ನಲ್ಲಿ ನೀನು ತುಂಬಿರಲು ನಿನ್ನಲ್ಲಿಲ್ಲ ನಾನು ಇಲ್ಲವೆಂಬ ಅರಿವು ನನ್ನಲ್ಲಿರಲು ಇನ್ನೂ ಹೇಳಲಿ ಏನು? ಒಡೆದ ಗಾಜಿನ ಲೋಟ ಚೂರಾದ ಹೃದಯದ ನೋಟ ಎರಡೂ ಒಂದೇ ಆಗಿರುವಾಗ ಈಗ ಮುರಿದ...
ಹಾಯ್ಕುಗಳು
Share:
Poems

ಹಾಯ್ಕುಗಳು

November 10, 2022 ಜ್ಯೋತಿಲಿಂಗಪ್ಪ
೦೧ ಖಾಲಿ ಮನೆಯ ಬಾಗಿಲು ಬಡಿದರೆ ಸದ್ದು ಕೇಳಿತು. ೦೨ ಹೆಂಡದ ಹುಳಿ ವಾಸನೆ ಮಡಿಕೆಯ ಖಾಲಿಗಂಟದು. ೦೩ ಏನು ಸೋಜಿಗ ಹೂವ ಪರಿಮಳವ ಗಾಳಿ ಹೊತ್ತುದು. ೦೪ ದೀಪ ಆರಿತು ಇದ್ದ ಬೆಳಕು...

Comments 2

  1. Mariswamy Gowdar
    Sep 10, 2020 Reply

    ಕಣ್ಣೊಳಗಣ ಕರುಳು ಹಿಂಗಿದಲ್ಲದೆ ನಿನ್ನ ನೋಡಲಾಗದು… ವಚನ ನೆನಪಿಸಿದಿರಿ. ಸುಂದರ ಕವನ.

  2. Nagaraju M.P
    Sep 13, 2020 Reply

    ಕವನ abstract art ಅನ್ನು ನೆನಪಿಸುವಂತಿದೆ. ನಿಮ್ಮ ಅಲ್ಲಮ ಮತ್ತು ಅಕ್ಕನ ನೆನಪಿನ ಕವನಗಳನ್ನು ನಾನು ಓದಿದ್ದೇನೆ, ಚೆನ್ನಾಗಿವೆ ಸರ್.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
April 29, 2018
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ಗೇಣು ದಾರಿ
ಗೇಣು ದಾರಿ
July 10, 2023
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
ಮರೆತೆ…
ಮರೆತೆ…
July 4, 2022
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
Copyright © 2026 Bayalu