Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸನ್ಯಾಸ ದೀಕ್ಷೆ
Share:
Poems June 12, 2025 ಜಬೀವುಲ್ಲಾ ಎಂ.ಅಸದ್

ಸನ್ಯಾಸ ದೀಕ್ಷೆ

ತುಂಬಿದ ಅಹಂ- ಸ್ವಾರ್ಥದ ಚೀಲವನು
ಬಯಲಿಗೊಯ್ದು ಸುರಿದು
ಸ್ವತಃ ಖಾಲಿಯಾಗಿ
ಸಂಭ್ರಮಿಸುವುದು – ಸನ್ಯಾಸ

ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ
ಬೇರು ಬಿಟ್ಟು ಬಿಸಿಲು ಗಾಳಿಗೆ ತೂಗಿ
ನೆರಳು, ಫಲ ನೀಡಿ
ಜೀವ ಸಂಕುಲಕೆ ನೆರವಾಗುವುದು – ಸನ್ಯಾಸ

ಇರುವುದನ್ನೆಲ್ಲ ಕಳೆದುಕೊಂಡು
ಪಡೆದದ್ದೆಲ್ಲವ ಹಂಚಿ ಬರಡಾಗಿ
ಬರಿಗೈಗಳ ಕಂಡು
ತಾನೇ ಧನ್ಯಗೊಳ್ಳುವುದು – ಸನ್ಯಾಸ

ಹಸಿವನ್ನು ನುಂಗಿ, ತೃಷೆಯನ್ನು ಮೀರಿ
ಧ್ಯಾನದಿ ಮುಗುಳ್ನಕ್ಕು,
ಕೈಗೆ ಸಿಕ್ಕ ಅರಿವೆ ಸುತ್ತಿ
ಬಯಲಾಗುವುದು – ಸನ್ಯಾಸ

ಸೂರ್ಯನೊಂದಿಗೆ ಎದ್ದು
ಚಂದಿರನೊಟ್ಟಿಗೆ ಆಕಳಿಸಿ
ಕಾಲದೊಂದಿಗೆ ಕೂಡಿ
ಲೋಕದ ಹೊಲಸು ಗುಡಿಸುವುದು – ಸನ್ಯಾಸ

ಹಕ್ಕಿಯ ರೆಕ್ಕೆ ಸವರಿ, ಚಿಗುರುವ ಎಲೆಗೆ ನಮಿಸಿ
ಅರಳುವ ಹೂವಿಗೆ ಮುತ್ತಿಟ್ಟು
ಮಗುವಂತೆ ಮಕ್ಕಳೊಟ್ಟಿಗೆ
ಆಡಿ ದಣಿಯುವುದು – ಸನ್ಯಾಸ!

ಬಿದಿರ ಮೆಳೆಯ ನಡುವೆ ಕೂತು
ಜಗದ ಸಂತೆಯ ಮರೆತು
ಕೊಳಲ ದೇಹಕೆ ಉಸಿರ ಸುರಿದು
ಪ್ರಕೃತಿಗೆ ಕೃತಜ್ಞನಾಗುವುದು – ಸನ್ಯಾಸ!

Previous post ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
Next post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು

Related Posts

ಈ ಬಳ್ಳಿ…
Share:
Poems

ಈ ಬಳ್ಳಿ…

October 21, 2024 ಜ್ಯೋತಿಲಿಂಗಪ್ಪ
ಗಾಳಿ ಉರಿಸುವುದು ಆರಿಸುವುದು ದೀಪ ಬೆಳಗಿಸುವುದು ಯಾರು…? ನಾನೂ ಒಂದು ದೀಪ ದ್ವೀಪದ ದಡ ಕಾಯುತ್ತಾ ಕಾಯುತ್ತಾ ಅಲೆ ಎಣಿಸುತಿರುವೆ ಈ ಸಂಖ್ಯೆ ಮೂರನ್ನು ದಾಟದೇ… ಈ...
ಸುತ್ತಿ ಸುಳಿವ ಆಟ
Share:
Poems

ಸುತ್ತಿ ಸುಳಿವ ಆಟ

May 6, 2021 ಕೆ.ಆರ್ ಮಂಗಳಾ
ಜೀವದ ಗೆಳೆಯಾ ಅಂತ ಕಟ್ಟಿಕೊಂಡೆ ಪ್ರಾಣ ಹಿಂಡೊ ಗಂಡನಾಗಿ ನನ್ನ ಆಳುತಾನವ್ವ ಜೇನಿನಂಥ ಮಾತುಗಳ ನಂಬಿಬಿಟ್ಟೆ ಗಾಳಿಯಲ್ಲಿ ಅವನ ಜೊತೆ ತೇಲಿಬಿಟ್ಟೆ ಗಿರಿಗಿಟ್ಲೆ ಆಟದಲ್ಲಿ...

Comments 2

  1. Pro. Mallesh K.S, Mysuru
    Jun 12, 2025 Reply

    ಸನ್ಯಾಸ ಕವನದ ಹೂರಣ ಚೆನ್ನಾಗಿದೆ. ಆದರೆ ಗದ್ಯ ಪದ್ಯದ ಮಿಶ್ರಣದಂತಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಜಬೀವುಲ್ಲಾ ಎಂ ಅಸದರವರ ಸನ್ಯಾಸ ದೀಕ್ಷೆ ಕವನ 👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಣಿಕೆಯ ರೂಪದ ಕಪ್ಪುಹಣ
ಕಾಣಿಕೆಯ ರೂಪದ ಕಪ್ಪುಹಣ
April 29, 2018
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
January 15, 2026
ನಾನುವಿನ ಉಪಟಳ
ನಾನುವಿನ ಉಪಟಳ
December 13, 2024
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
April 29, 2018
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
April 29, 2018
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
Copyright © 2026 Bayalu