Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೋತ ಅಂಗೈಗಳಿಗಂಟಿ…
Share:
Poems October 19, 2025 ಜಬೀವುಲ್ಲಾ ಎಂ.ಅಸದ್

ಸೋತ ಅಂಗೈಗಳಿಗಂಟಿ…

ನನ್ನಲ್ಲಿ ನೀನು ತುಂಬಿರಲು
ನಿನ್ನಲ್ಲಿಲ್ಲ ನಾನು
ಇಲ್ಲವೆಂಬ ಅರಿವು ನನ್ನಲ್ಲಿರಲು
ಇನ್ನೂ ಹೇಳಲಿ ಏನು?

ಒಡೆದ ಗಾಜಿನ ಲೋಟ
ಚೂರಾದ ಹೃದಯದ ನೋಟ
ಎರಡೂ ಒಂದೇ ಆಗಿರುವಾಗ ಈಗ

ಮುರಿದ ರೆಕ್ಕೆಯ ಹಕ್ಕಿಯ ಶೋಕ
ಮನ ಅನುಭವಿಸುತ್ತಿರುವಾಗ
ಮಾತು ಹುಟ್ಟಿತು ಹೇಗೆ ಈ ಸಮಯ
ಮೌನವೇ ಎಲ್ಲವನ್ನು ಸಂಹರಿಸುವಾಗ

ದಿಕ್ಕಿಲ್ಲದ ದಾರಿಯ ಒಂಟಿ ಪಯಣಿಗ
ನಡೆದಷ್ಟು ದೂರ
ತಲುಪುವುದಾದರೂ ಎಲ್ಲಿಗೆ?
ಕೊನೆ ಮುಟ್ಟುವುದಾದರೂ ಹೇಗೆ?
ಕಾಣದ ಗಮ್ಯ, ಅನಾಥ ಭಾವ
ಹುಟ್ಟು ಅರಸುತ್ತಿದೆ ಸಾವಿನ ಮನೆಯಂಗಳವ
ಸೋತ ಅಂಗೈಗಳಿಗಂಟಿ ನಗುತಿದೆ ಶೂನ್ಯ

ಅದೇ ಎಲ್ಲಾ… ಎಲ್ಲಾ…

Previous post ಮಾಯದ ಗಾಯ
ಮಾಯದ ಗಾಯ
Next post ಹಣತೆಯ ಹಂಗು
ಹಣತೆಯ ಹಂಗು

Related Posts

ಗೆರೆ ಎಳೆಯದೆ…
Share:
Poems

ಗೆರೆ ಎಳೆಯದೆ…

October 13, 2022 ಜ್ಯೋತಿಲಿಂಗಪ್ಪ
ನೀನು ಕೂಗುವ ತನಕ ನನ್ನ ಕಿವಿಯಲಿ ಸದ್ದಿರಲಿಲ್ಲ ನನ್ನ ಸದ್ದಲಿ ನಿನ್ನ ಕಿವಿಯು ತೆರೆಯಲಿಲ್ಲ ನನ್ನ ನಿನ್ನ ಪ್ರತಿಷ್ಠೆ ಕಣ್ಣಲಿ ಬೆಳಕಾಗಲಿಲ್ಲ ಈ ಗಾಯಕೆ ಮುಲಾಮು ನಿನ್ನಿಂದ...
ಆಕಾರ-ನಿರಾಕಾರ
Share:
Poems

ಆಕಾರ-ನಿರಾಕಾರ

January 7, 2022 ಜ್ಯೋತಿಲಿಂಗಪ್ಪ
ಇರಯ್ಯಾ ಕಾಯುವವನೇ ಇರದಿರುವಾಗ ನಿನಗೇತರ ಅವಸರ ಕಾಯುತ್ತಾನೆಂದು ಕಾಯುವೆಯಲ್ಲಾ ಸಾವ ಕಾಯುವ ನ್ಯಾಯ ಅದಾವುದಯ್ಯಾ ಕೇಡಿಲ್ಲ ಅಳಿಯೆನೆಂದು ಹಲ್ಲ ಮಸೆಯದಿರು ಕಾಯ ಕಾಯದು ಆಕಾರಕೆ...

Comments 2

  1. ಗಿರೀಶ್ ವಿ
    Oct 27, 2025 Reply

    ಕಾಣದ ಗಮ್ಯ, ಕಾಣುವ ಶೂನ್ಯ… ಗಹನವಾದ ಪರಿಕಲ್ಪನೆಗಳು ಸರ್.

  2. ಜಾಹ್ನವಿ ಬೆಂಗಳೂರು
    Nov 7, 2025 Reply

    ಸೋಲು- ಗೆಲುವು ಎರಡೂ ನಮ್ಮ ನಮ್ಮ perceptions….. ಜಗದ ದುಃಖಕ್ಕೇಲ್ಲಾ ಸೋಲೇ ಕಾರಣವಲ್ಲಾ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಮನವೆಂಬ ಸರ್ಪ
ಮನವೆಂಬ ಸರ್ಪ
February 7, 2021
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಹುಲಿ ಸವಾರಿ…
ಹುಲಿ ಸವಾರಿ…
June 10, 2023
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
ಗಂಟಿನ ನಂಟು
ಗಂಟಿನ ನಂಟು
November 7, 2020
Copyright © 2026 Bayalu