Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹೆಸರಿಲ್ಲದಾ ಊರಿನ ಹಾಡು
Share:
Poems May 6, 2020 ಪದ್ಮಾಲಯ ನಾಗರಾಜ್

ಹೆಸರಿಲ್ಲದಾ ಊರಿನ ಹಾಡು

ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ
ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ//

ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ
ಶೋಕಿ ದಾರಿಯು ತಾನೇ ಆಗುತಾ/ ಮಾಯೆಯೊಳಗೇ ಹಬ್ಬತೋ //ಅ.ಪ//

ಮೂರು ದಾರಿ ಸೇರೋ ಜಾಗದಿ ಗೂಡು ಕಟ್ಟಿ ಕುಣಿಯಿತೋ
ಗಂಡೂ ಅಲ್ಲಾ ಹೆಣ್ಣು ಅಲ್ಲದು/ ಆಟತಿಳಿದು ನಡೆಯಿರೋ //ಚಿಂತೆ//

ಹರಿವು ನದಿದಡಲಿ ಬೆಳೆದಾ/ ದಿಕ್ಕುಗಾಣದ ಮರವಿದೋ
ತಾಯಿ ತಂದೆ ಇದಕಾರಿಲ್ಲ/ ಹುಚ್ಚು ಕುದುರೆ ಪಯಣವೋ //ಚಿಂತೆ//

ರಂಕುಮುಂಡೆಯ ಮಡಿಲಲಿ ಚಿಂತೆ/ ಇಲ್ಲದೇ ತಾ ತೋರಿತೋ
ದಾಟ ಹೋಗಿ ಇದನೂ ಗೆದ್ದರು/ ಕೋಟಿಗೊಬ್ಬರು ನಿಜವಹುದೋ //ಚಿಂತೆ//

ಹೆಸರಾ ಇಲ್ಲದಾ ಊರಿನೊಳಗೆ/ ಹುಲ್ಲುಗುಡಿಸಲು ಇದ್ದಿತೋ
ಮೂರನಾಗಿಸಿ ಕೊಂದೇ ಹಾಕಿತ/ ಇದರ ನಿಜವನು ಅರಿಯಿರೋ.

-ಪದ್ಮಾಲಯ ನಾಗರಾಜ್

Previous post ಮನವೇ ಮನವೇ…
ಮನವೇ ಮನವೇ…
Next post WHO AM I?
WHO AM I?

Related Posts

ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...
ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...

Comments 3

  1. Jyothilingappa
    May 7, 2020 Reply

    ಪದ್ಮಾಲಯ ರ ಕವನ ಸರಳ ಅರ್ಥಗರ್ಭಿತ.. ಹಾಡುವ ದಾಟಿ..ರಚನೆ.. ಸುಂದರ.

  2. Gangadhar navale
    May 14, 2020 Reply

    ಮನಸ್ಸಿನಲ್ಲಿರುವ ಚಿಂತೆಯೇ ಹಾವೆಂದುಕೊಂಡಿದ್ದೆ, ಚಿಂತೆಯೊಳಗೆ ಇರೋ ಹಾವು ಯಾವುದು? ಚಿಂತೆಯಲ್ಲಿರುವ ಹಾವು ಭ್ರಮೆಯೇ ಇರಬಹುದೆಂದುಕೊಂಡೆ.

  3. Chandru pujar
    Aug 25, 2020 Reply

    Dhanyvad Sar Tumba chennagide

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
November 7, 2020
ನಾನರಿಯದ ಬಯಲು
ನಾನರಿಯದ ಬಯಲು
April 9, 2021
ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!
September 14, 2024
ತುತ್ತೂರಿ…
ತುತ್ತೂರಿ…
June 10, 2023
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
Copyright © 2026 Bayalu