Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅಂದು-ಇಂದು
Share:
Poems December 8, 2021 ಕೆ.ಆರ್ ಮಂಗಳಾ

ಅಂದು-ಇಂದು

ಅಂದು-
ಹೇಗೋ ಎಂತೋ
ಸುರುಸುರುಳಿಯಾಗಿ
ಬಗೆಬಗೆಯಲಿ ಪರಿಪರಿಯಲಿ
ಸುತ್ತಿಕೊಂಡಿದ್ದು-
ಮೆತ್ತಿಕೊಂಡಿದ್ದು
ಬೆಳೆಯುತ್ತಾ-ಬಲಿಯುತ್ತಾ
ನಂಟಾಗಿ- ಗಂಟಾಗಿ
ಯಮಯಾತನೆಯ ಹೊರೆಯಾಗಿ
ಮುಡಿಯೇರಿ ಭವಭಾರ
ಉಸಿರ ಹಿಸುಕಿತ್ತು.

ಇಂದು-
ಹೊರೆಗಳನು ಇಳುಹುತ್ತಾ
ಗಂಟುಗಳ ಬಿಡಿಸುತ್ತಾ
ಪೊರೆಗಳನು ಕಳಚುತ್ತಾ
ಹಗುರಾಗಿ ನವಿರಾಗಿ
ಸಾಗುತಿದೆ ನಡಿಗೆ
ಕಾಲದೊಂದಿಗೆ ಚಲನೆ…

ಗುರು ಸಿಕ್ಕು ಬೆಳಕಾಗಿ
ಗಮ್ಯತೆಯ ಅರಿವಾಗಿ
ಕೇಳುವ- ಕೆದಕುವ
ಸಂಚಿ ಬರಿದಾಗಿತ್ತು…
ನಿನ್ನೆ ಕಳೆದ ಮೇಲೆ
ನಾಳೆ ಎಂಬುದೂ ಇಲ್ಲ…
ಮಾತು ಮರೆತಾ ‘ನಾನು’
ಮಾತಿಲ್ಲದಾ ನೀನು
ಸಂಧಿಸುವ ಆ ಗಳಿಗೆ
ಬರಬಾರದೇ ಇಂದೇ?

Previous post ಬೆಳಕಲಿ ದೀಪ
ಬೆಳಕಲಿ ದೀಪ
Next post ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ

Related Posts

ವರದಿ ಕೊಡಬೇಕಿದೆ
Share:
Poems

ವರದಿ ಕೊಡಬೇಕಿದೆ

March 17, 2021 ಕೆ.ಆರ್ ಮಂಗಳಾ
ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...
ಶಾಂತಿ
Share:
Poems

ಶಾಂತಿ

April 11, 2025 Bayalu
ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ, ಸುಮದ ದಳವಾಗು ವನದಲಿ, ಓ ಮನವೇ, ಕಂದನ ಮುಗ್ದ ನಗುವಾಗು.| ೧ | ಹರುಷ ದುಗುಡಗಳ ಮೇಳದಲಿ, ಮಧುರ ನೆನಪುಗಳ ಹೊಳೆಯಾಗು,...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಕೊಂಡಗುಳಿ ಕೇಶಿರಾಜ ಮತ್ತು…
ಕೊಂಡಗುಳಿ ಕೇಶಿರಾಜ ಮತ್ತು…
April 6, 2020
ದಾಸೋಹ ತತ್ವ
ದಾಸೋಹ ತತ್ವ
January 10, 2021
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ಹೀಗೊಂದು ತಲಪರಿಗೆ (ಭಾಗ-5)
ಹೀಗೊಂದು ತಲಪರಿಗೆ (ಭಾಗ-5)
December 8, 2021
ಯೋಗ – ಶಿವಯೋಗ
ಯೋಗ – ಶಿವಯೋಗ
August 2, 2019
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
January 4, 2020
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಲಿಂಗಾಯತ ಸ್ವತಂತ್ರ ಧರ್ಮ
ಲಿಂಗಾಯತ ಸ್ವತಂತ್ರ ಧರ್ಮ
July 10, 2023
Copyright © 2025 Bayalu