Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅಪ್ಪನಿಲ್ಲದ ಮನೆ
Share:
Poems January 10, 2021 ಕೆ.ಆರ್ ಮಂಗಳಾ

ಅಪ್ಪನಿಲ್ಲದ ಮನೆ

ಅಪ್ಪನಿಲ್ಲದ ಮನೆ
ಎಲ್ಲ ಇದ್ದೂ ಭಣಗುಡುತ್ತಿದೆ.
ಎದೆಯ ಬೆಳಕೇ ಆರಿ ಹೋದಂತೆ
ಮನದಲ್ಲಿ ಗಾಢ ಕಾರ್ಗತ್ತಲೆ

ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು
ಅಪ್ಪ ಮೌನ ಹೊದ್ದು ನಿರ್ಲಿಪ್ತನಾಗುತ್ತಿದ್ದ
ಅವ್ವನ ಮಾತಿಗೆ ಕಿವಿಯಾದೆವು
ಅಪ್ಪನ ಮೌನಕ್ಕೆ ಕಣ್ಣಾದೆವು…

ಕೊನೆಗೆ ಮಾತು ಮರೆತ ಅಪ್ಪ
ನೆನಪುಗಳನ್ನೂ ತೂರಿಬಿಟ್ಟ
ಬಿಸಿ ರೊಟ್ಟಿಗೆ, ರಾಗಿ ಗಂಜಿಗೆ,
ಹಸಿವು- ಬಾಯಾರಿಕೆಗೆ,
ರಾತ್ರಿ- ಬೆಳಗುಗಳಿಗೆ ಸ್ಪಂದಿಸದೇ
ತನ್ನೊಳಗೆ ಇಳಿಯುತ್ತಾ
ಮೌನವಾಗಿ
ಕಣ್ಣು ತೆರೆಯುವುದನ್ನೇ ನಿಲ್ಲಿಸಿದ…
ಜೋಪಾನ ಮಾಡಿದ ಹೆಂಡತಿ,
ಒಡಲ ಮಕ್ಕಳು, ಮೊಮ್ಮಕ್ಕಳು,
ಜೀವದಂತಿದ್ದ ಗೆಳೆಯರು,
ಹತ್ತಿರದ ಬಸವ ಬಂಧುಗಳು,
ದೂರದ ಬಳಗಕ್ಕೆ ಕರೆ ಮಾಡಲು
ರೀಚಾರ್ಜ್ ಮಾಡಿಸಿಕೊಳ್ಳುತ್ತಿದ್ದ ಮೊಬೈಲ್,
ಬಸವ ಟಿವಿ ನೋಡಲು
ಪಕ್ಕದಲ್ಲೇ ಇಟ್ಟುಕೊಳ್ಳುತ್ತಿದ್ದ ರಿಮೋಟ್,
ಕೊನೆಗೆ ಎದೆಯ ಮೇಲಿನ
ಲಿಂಗವನ್ನೂ ಮರೆತು ಬಿಟ್ಟ…

ಮುಂಜಾನೆಯ ಅಂಗಳ,
ನಡುಮನೆಯ ಕುರ್ಚಿ,
ಕೋಣೆಯ ಮಂಚ,
ಮೂಲೆಯಲ್ಲಿನ ಕೋಲು,
ಟೀಪಾಯಿ ಮೇಲಿನ ಕನ್ನಡಕ,
ಸಿಂಕ್ ಪಕ್ಕದಲ್ಲಿನ ಹಲ್ಲಿನ ಸೆಟ್,
ಕಾಯುತ್ತಿರುವಂತಿವೆ ಅಪ್ಪನಿಗಾಗಿ…

ಇದ್ದಾಗ ಅಪ್ಪನ ಜಗತ್ತಿನಲ್ಲಿ
ತೂರಿಕೊಳ್ಳದ ಸಂಕಟ,
ಮಸಣದ ಮಣ್ಣಲ್ಲಿ
ವಿಭೂತಿ ಬೂದಿಯ ಹಚ್ಚಿಸಿಕೊಳ್ಳುತ್ತಿದ್ದ
ಅಪ್ಪನ ಶಾಂತ ಮುಖ
ಮಿಸುಕಾಡುತ್ತಿದೆ ಮನದಲ್ಲಿ ಒಂದೆ ಸಮ
ಬಯಲಲ್ಲಿ ಬಯಲಾದ ಅಪ್ಪ
ಪದಾರ್ಥದಿಂದ ಪ್ರಸಾದಕ್ಕೆ
ಎಲ್ಲೆ ದಾಟಿದ ಜೀವ
ಮಾತನಾಡದೆಯೇ
ಕಲಕುತಿದೆ ಎದೆಯ ಭಾವ
ಅಪ್ಪನಿಲ್ಲದ ಮನೆ
ಹೇಗೆ ಮರೆಯುವುದು ನೋವ?

Previous post ಇದ್ದಷ್ಟೇ…
ಇದ್ದಷ್ಟೇ…
Next post ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ

Related Posts

ಹಾದಿಯ ಹಣತೆ…
Share:
Poems

ಹಾದಿಯ ಹಣತೆ…

June 12, 2025 ಕೆ.ಆರ್ ಮಂಗಳಾ
ಕೈಯಲಿ ಹಿಡಿದು ಅಲೆಯುತಲಿದ್ದೆ ಕಣ್ಣಿಗೊತ್ತಿಕೊಂಡು ಕರಗುತಲಿದ್ದೆ ಎದೆಗವುಚಿಕೊಂಡು ಮುದ್ದಾಡುತಲಿದ್ದೆ ತಲೆಯ ಮೇಲೆ ಹೊತ್ತು ಬೀಗುತಲಿದ್ದೆ… ವಚನ ರಾಶಿಯಲಿ ಅರಸುತಲಿದ್ದೆ ಹಿರಿಯರ...
ಮನವೇ ಮನವೇ…
Share:
Poems

ಮನವೇ ಮನವೇ…

May 6, 2020 Bayalu
ಭವ ಸಂಸಾರದ ಸವಿಯನು ನಂಬಿ ಸವೆಯದಿರು ಮನವೇ ಶಿವಜ್ಞಾನಿಗಳ ತವಕದಿ ಬೆರಸು ಸವಿಯುಂಟಲೆ ಮನವೇ //ಪ// ಎಲುವನು ಕಡಿದ ಸೊಣಗನು ಕಂಡ ಫಲದಂತೆ ಮನವೇ ವಿಲವಿಲ ಎನ್ನುತ ನಲುಗಿದೆ ನೀನು...

Comments 1

  1. ಪಂಕಜಾ
    Jan 14, 2021 Reply

    ಎರಡು ವರ್ಷಗಳ ಹಿಂದೆ ನಾನೂ ತಂದೆಯನ್ನು ಕಳೆದುಕೊಂಡೆ, ಇದೇ ನೋವನ್ನು ಅನುಭವಿಸಿದೆ, ಓದುತ್ತಾ ಕಣ್ಣು ಹನಿಯಾದವು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ
June 5, 2021
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ವಚನಾಮೃತಂ: ಪುಸ್ತಕ ವಿಮರ್ಶೆ
ವಚನಾಮೃತಂ: ಪುಸ್ತಕ ವಿಮರ್ಶೆ
February 6, 2025
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಸಕಾರವೋ… ನಕಾರವೋ…
ಸಕಾರವೋ… ನಕಾರವೋ…
July 5, 2019
ಬೆಳಕು ನುಂಗಿದ ಕತ್ತಲು
ಬೆಳಕು ನುಂಗಿದ ಕತ್ತಲು
December 9, 2025
ಈ  ದಾರಿ…
ಈ ದಾರಿ…
May 10, 2023
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
Copyright © 2026 Bayalu