Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವಿನ ಬಾಗಿಲು…
Share:
Poems October 13, 2022 ಕೆ.ಆರ್ ಮಂಗಳಾ

ಅರಿವಿನ ಬಾಗಿಲು…

ಹುಚ್ಚು ಮನಸಿನ ಕುಣಿತ
ದಿಕ್ಕುದಿಕ್ಕಿಗೂ ಸೆಳೆತ
ಅಡಿಗಡಿಗು ಎಡತಾಕುವ
ವಿಷಯಗಳ ಡೈನಮೈಟು
ಕಾಲು ಎಚ್ಚರ ತಪ್ಪದಂತೆ
ಜಾಣ ನಡಿಗೆಯ ಹೇಳಿಕೊಡುತಾನೆ
ಹುಟ್ಟು-ಸಾವಿನ ಚಕ್ರದ ಮರ್ಮ ತೋರುತಾನೆ

ಭಾವ ಜಾಲಗಳ ಹೆಣಿಗೆ
ಚಿತ್ತ ಭ್ರಾಂತಿಯ ಮೆರವಣಿಗೆ
ಪಂಚೇಂದ್ರಿಯಗಳ ಉರವಣೆ
ಮುಗಿಯಲಾರದ ಬವಣೆ
ಉಸಿರುಸಿಕ್ಕು ಚಡಪಡಿಸುವಾಗ
ಬಲೆ ಕತ್ತರಿಸುವ ಕಲೆಯ ಕಲಿಸುತಾನೆ
ಮತ್ತೆ ಅದ ಕಟ್ಟದಾ ತಂತ್ರ ತಿಳಿಸುತಾನೆ

ಬಾಳ ಕದಳಿಯಲಿ
ಬಸವಳಿದು ಕುಸಿದಾಗ
ದಿಕ್ಕುಗಾಣದೆ ಕಂಗೆಟ್ಟು ಅಲೆವಾಗ
ಮಮ್ಮಲ ಮರುಗುತಾನೆ
ಮಮತೆಯಲಿ ಕೈಹಿಡಿದು
ಪಯಣದ ನಿಜವ ಅರುಹುತಾನೆ
ಮತ್ತೆ ದಾರಿತಪ್ಪದ ಗುಟ್ಟು ಕಲಿಸುತಾನೆ

ನಿನ್ನ ನೀತಿಳಿಯೆಂದು
ಅರಿವಿನ ಕಂದೀಲ ಕೈಗಿಕ್ಕಿ
ಅಂತರಂಗದ ಪಯಣಕೆ
ಮನವ ಸಿದ್ಧಗೊಳಿಸುತಾನೆ
ಭವದ ಬೆಂಗುಡಿಯ ಬಿಡಿಸಿ
ಭಕ್ತಿಯ ಮರ್ಮವನು ಅಂಗೈಗೆ ಇಡುತಾನೆ
ನಿಜಮುಕ್ತಿಯ ಮಾರ್ಗವನು ತೋರುತಾನೆ

ತಿದ್ದಿ ತೀಡಿ ಬೆಳೆಸುತಾನೆ
ಝುಂಕಿಸಿ ಮನವ ಚುಚ್ಚುತಾನೆ
ಕದ್ದು ನಡೆದರೆ ಗುದ್ದುತಾನೆ
ಸುಳ್ಳು ನುಡಿಯಲು ಕೆರಳುತಾನೆ
ಸೋಗು ಮುಖಗಳ ಕೆಡವುತಾನೆ
ಬೀಳದಂತೆ ಎಚ್ಚರಿಸುತಾನೆ
ಬಿದ್ದಾಗಲೆಲ್ಲಾ ಎತ್ತುತಾನೆ

ಬೈದು ಬುದ್ಧಿ ಹೇಳುತಾನೆ
ನನ್ನ ಮೋಸ ನನಗೆ ತೋರುತಾನೆ
ಕಂಗಳ ಕರುಳ ಕತ್ತರಿಸುತಾನೆ
ಮನದ ತಿರುಳ ಹುರಿಯುತಾನೆ
ಮಾತಿನ ಮೂಲಕೆ ಒಯ್ಯುತಾನೆ
ಅರಿವಿನ ನೆಲೆಯತ್ತ ನಡೆಸುತಾನೆ
ನನ್ನ ಒಳಗನು ನನಗೆ ಪರಿಚಯಿಸುತಾನೆ

ನನ್ನ ನನಗೊಪ್ಪಿಸಲು
ಗುರು ತೆರೆಯದ ಕಿಟಕಿಗಳಿಲ್ಲ…
ತೋರದ ದಾರಿಗಳಿಲ್ಲ…
ಹೇಳದ ಗುಟ್ಟುಗಳಿಲ್ಲ…
ಸತ್ಯದ ದಾರಿ ತೋರಿದ
ಎನ್ನ ಭಾಗ್ಯದ ಬಾಗಿಲು ನೀ
ಶರಣು ಗುರುವೇ ನಿನಗೆ ಶರಣು ಶರಣು.

Previous post ಗೆರೆ ಎಳೆಯದೆ…
ಗೆರೆ ಎಳೆಯದೆ…
Next post ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?

Related Posts

ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...

Comments 3

  1. ಶರಣ್ ಸ್ವಾಮಿ ಮಠಪತಿ
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  2. Sharan swami
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  3. ಪೆರೂರು ಜಾರು, ಉಡುಪಿ
    Oct 20, 2022 Reply

    ಗುರು ಅರಿವಿನ ಬಾಗಿಲಾದರೆ ಓಕೆ; ಗರುವದ ಬಾಗಿಲಾದರೆ ಜೋಕೆ; ಈಗಿನ ಗುರುಗಳನ್ನು ಕಾಣುವಾಗ ಹೊರಗೆ ಒಳಗೆ ಬರಿ ಬಯಕೆ!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಭವ ರಾಟಾಳ
ಭವ ರಾಟಾಳ
September 10, 2022
ನಡೆಯ ಎಡೆ…
ನಡೆಯ ಎಡೆ…
April 5, 2026
ಕಣ್ಣ ದೀಪ
ಕಣ್ಣ ದೀಪ
September 7, 2021
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಲಿಂಗಾಚಾರ
ಲಿಂಗಾಚಾರ
May 6, 2021
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ಅಲ್ಲಮಪ್ರಭು ಮತ್ತು ಮಾಯೆ
ಅಲ್ಲಮಪ್ರಭು ಮತ್ತು ಮಾಯೆ
January 7, 2022
ಆಗು ಕನ್ನಡಿಯಂತೆ…
ಆಗು ಕನ್ನಡಿಯಂತೆ…
September 13, 2025
ಶಾಂತಿ
ಶಾಂತಿ
April 11, 2025
Copyright © 2026 Bayalu