Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವಿನ ಬಾಗಿಲು…
Share:
Poems October 13, 2022 ಕೆ.ಆರ್ ಮಂಗಳಾ

ಅರಿವಿನ ಬಾಗಿಲು…

ಹುಚ್ಚು ಮನಸಿನ ಕುಣಿತ
ದಿಕ್ಕುದಿಕ್ಕಿಗೂ ಸೆಳೆತ
ಅಡಿಗಡಿಗು ಎಡತಾಕುವ
ವಿಷಯಗಳ ಡೈನಮೈಟು
ಕಾಲು ಎಚ್ಚರ ತಪ್ಪದಂತೆ
ಜಾಣ ನಡಿಗೆಯ ಹೇಳಿಕೊಡುತಾನೆ
ಹುಟ್ಟು-ಸಾವಿನ ಚಕ್ರದ ಮರ್ಮ ತೋರುತಾನೆ

ಭಾವ ಜಾಲಗಳ ಹೆಣಿಗೆ
ಚಿತ್ತ ಭ್ರಾಂತಿಯ ಮೆರವಣಿಗೆ
ಪಂಚೇಂದ್ರಿಯಗಳ ಉರವಣೆ
ಮುಗಿಯಲಾರದ ಬವಣೆ
ಉಸಿರುಸಿಕ್ಕು ಚಡಪಡಿಸುವಾಗ
ಬಲೆ ಕತ್ತರಿಸುವ ಕಲೆಯ ಕಲಿಸುತಾನೆ
ಮತ್ತೆ ಅದ ಕಟ್ಟದಾ ತಂತ್ರ ತಿಳಿಸುತಾನೆ

ಬಾಳ ಕದಳಿಯಲಿ
ಬಸವಳಿದು ಕುಸಿದಾಗ
ದಿಕ್ಕುಗಾಣದೆ ಕಂಗೆಟ್ಟು ಅಲೆವಾಗ
ಮಮ್ಮಲ ಮರುಗುತಾನೆ
ಮಮತೆಯಲಿ ಕೈಹಿಡಿದು
ಪಯಣದ ನಿಜವ ಅರುಹುತಾನೆ
ಮತ್ತೆ ದಾರಿತಪ್ಪದ ಗುಟ್ಟು ಕಲಿಸುತಾನೆ

ನಿನ್ನ ನೀತಿಳಿಯೆಂದು
ಅರಿವಿನ ಕಂದೀಲ ಕೈಗಿಕ್ಕಿ
ಅಂತರಂಗದ ಪಯಣಕೆ
ಮನವ ಸಿದ್ಧಗೊಳಿಸುತಾನೆ
ಭವದ ಬೆಂಗುಡಿಯ ಬಿಡಿಸಿ
ಭಕ್ತಿಯ ಮರ್ಮವನು ಅಂಗೈಗೆ ಇಡುತಾನೆ
ನಿಜಮುಕ್ತಿಯ ಮಾರ್ಗವನು ತೋರುತಾನೆ

ತಿದ್ದಿ ತೀಡಿ ಬೆಳೆಸುತಾನೆ
ಝುಂಕಿಸಿ ಮನವ ಚುಚ್ಚುತಾನೆ
ಕದ್ದು ನಡೆದರೆ ಗುದ್ದುತಾನೆ
ಸುಳ್ಳು ನುಡಿಯಲು ಕೆರಳುತಾನೆ
ಸೋಗು ಮುಖಗಳ ಕೆಡವುತಾನೆ
ಬೀಳದಂತೆ ಎಚ್ಚರಿಸುತಾನೆ
ಬಿದ್ದಾಗಲೆಲ್ಲಾ ಎತ್ತುತಾನೆ

ಬೈದು ಬುದ್ಧಿ ಹೇಳುತಾನೆ
ನನ್ನ ಮೋಸ ನನಗೆ ತೋರುತಾನೆ
ಕಂಗಳ ಕರುಳ ಕತ್ತರಿಸುತಾನೆ
ಮನದ ತಿರುಳ ಹುರಿಯುತಾನೆ
ಮಾತಿನ ಮೂಲಕೆ ಒಯ್ಯುತಾನೆ
ಅರಿವಿನ ನೆಲೆಯತ್ತ ನಡೆಸುತಾನೆ
ನನ್ನ ಒಳಗನು ನನಗೆ ಪರಿಚಯಿಸುತಾನೆ

ನನ್ನ ನನಗೊಪ್ಪಿಸಲು
ಗುರು ತೆರೆಯದ ಕಿಟಕಿಗಳಿಲ್ಲ…
ತೋರದ ದಾರಿಗಳಿಲ್ಲ…
ಹೇಳದ ಗುಟ್ಟುಗಳಿಲ್ಲ…
ಸತ್ಯದ ದಾರಿ ತೋರಿದ
ಎನ್ನ ಭಾಗ್ಯದ ಬಾಗಿಲು ನೀ
ಶರಣು ಗುರುವೇ ನಿನಗೆ ಶರಣು ಶರಣು.

Previous post ಗೆರೆ ಎಳೆಯದೆ…
ಗೆರೆ ಎಳೆಯದೆ…
Next post ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?

Related Posts

ಶಾಂತಿ
Share:
Poems

ಶಾಂತಿ

April 11, 2025 Bayalu
ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ, ಸುಮದ ದಳವಾಗು ವನದಲಿ, ಓ ಮನವೇ, ಕಂದನ ಮುಗ್ದ ನಗುವಾಗು.| ೧ | ಹರುಷ ದುಗುಡಗಳ ಮೇಳದಲಿ, ಮಧುರ ನೆನಪುಗಳ ಹೊಳೆಯಾಗು,...
ಕಣ್ಣ ದೀಪ
Share:
Poems

ಕಣ್ಣ ದೀಪ

September 7, 2021 ಜ್ಯೋತಿಲಿಂಗಪ್ಪ
ನನ್ನ ಮನೆಯ ಅಂಗಳದಲ್ಲಿ ಒಬ್ಬ ಬುದ್ಧನಿದ್ದಾನೆ ಶೋ ಕೇಸಿನಲ್ಲಿ ಒಬ್ಬ ಬುದ್ಧನಿದ್ದಾನೆ ಗೋಡೆಯ ಮೇಲೆ ಒಬ್ಬ ಬುದ್ಧನಿದ್ದಾನೆ ಎಲ್ಲೆಲ್ಲೂ ಬುದ್ಧ ಬುದ್ಧ ಒಳಗೆ ಖಾಲಿ ಗೋಡೆಯ ಹಿಂದೆ...

Comments 3

  1. ಶರಣ್ ಸ್ವಾಮಿ ಮಠಪತಿ
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  2. Sharan swami
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  3. ಪೆರೂರು ಜಾರು, ಉಡುಪಿ
    Oct 20, 2022 Reply

    ಗುರು ಅರಿವಿನ ಬಾಗಿಲಾದರೆ ಓಕೆ; ಗರುವದ ಬಾಗಿಲಾದರೆ ಜೋಕೆ; ಈಗಿನ ಗುರುಗಳನ್ನು ಕಾಣುವಾಗ ಹೊರಗೆ ಒಳಗೆ ಬರಿ ಬಯಕೆ!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ನಡುವೆ ಸುಳಿವಾತ್ಮ…
ನಡುವೆ ಸುಳಿವಾತ್ಮ…
April 6, 2024
ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
November 10, 2022
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
April 11, 2025
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
February 11, 2022
Copyright © 2026 Bayalu