Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವಿನ ಬಾಗಿಲು…
Share:
Poems October 13, 2022 ಕೆ.ಆರ್ ಮಂಗಳಾ

ಅರಿವಿನ ಬಾಗಿಲು…

ಹುಚ್ಚು ಮನಸಿನ ಕುಣಿತ
ದಿಕ್ಕುದಿಕ್ಕಿಗೂ ಸೆಳೆತ
ಅಡಿಗಡಿಗು ಎಡತಾಕುವ
ವಿಷಯಗಳ ಡೈನಮೈಟು
ಕಾಲು ಎಚ್ಚರ ತಪ್ಪದಂತೆ
ಜಾಣ ನಡಿಗೆಯ ಹೇಳಿಕೊಡುತಾನೆ
ಹುಟ್ಟು-ಸಾವಿನ ಚಕ್ರದ ಮರ್ಮ ತೋರುತಾನೆ

ಭಾವ ಜಾಲಗಳ ಹೆಣಿಗೆ
ಚಿತ್ತ ಭ್ರಾಂತಿಯ ಮೆರವಣಿಗೆ
ಪಂಚೇಂದ್ರಿಯಗಳ ಉರವಣೆ
ಮುಗಿಯಲಾರದ ಬವಣೆ
ಉಸಿರುಸಿಕ್ಕು ಚಡಪಡಿಸುವಾಗ
ಬಲೆ ಕತ್ತರಿಸುವ ಕಲೆಯ ಕಲಿಸುತಾನೆ
ಮತ್ತೆ ಅದ ಕಟ್ಟದಾ ತಂತ್ರ ತಿಳಿಸುತಾನೆ

ಬಾಳ ಕದಳಿಯಲಿ
ಬಸವಳಿದು ಕುಸಿದಾಗ
ದಿಕ್ಕುಗಾಣದೆ ಕಂಗೆಟ್ಟು ಅಲೆವಾಗ
ಮಮ್ಮಲ ಮರುಗುತಾನೆ
ಮಮತೆಯಲಿ ಕೈಹಿಡಿದು
ಪಯಣದ ನಿಜವ ಅರುಹುತಾನೆ
ಮತ್ತೆ ದಾರಿತಪ್ಪದ ಗುಟ್ಟು ಕಲಿಸುತಾನೆ

ನಿನ್ನ ನೀತಿಳಿಯೆಂದು
ಅರಿವಿನ ಕಂದೀಲ ಕೈಗಿಕ್ಕಿ
ಅಂತರಂಗದ ಪಯಣಕೆ
ಮನವ ಸಿದ್ಧಗೊಳಿಸುತಾನೆ
ಭವದ ಬೆಂಗುಡಿಯ ಬಿಡಿಸಿ
ಭಕ್ತಿಯ ಮರ್ಮವನು ಅಂಗೈಗೆ ಇಡುತಾನೆ
ನಿಜಮುಕ್ತಿಯ ಮಾರ್ಗವನು ತೋರುತಾನೆ

ತಿದ್ದಿ ತೀಡಿ ಬೆಳೆಸುತಾನೆ
ಝುಂಕಿಸಿ ಮನವ ಚುಚ್ಚುತಾನೆ
ಕದ್ದು ನಡೆದರೆ ಗುದ್ದುತಾನೆ
ಸುಳ್ಳು ನುಡಿಯಲು ಕೆರಳುತಾನೆ
ಸೋಗು ಮುಖಗಳ ಕೆಡವುತಾನೆ
ಬೀಳದಂತೆ ಎಚ್ಚರಿಸುತಾನೆ
ಬಿದ್ದಾಗಲೆಲ್ಲಾ ಎತ್ತುತಾನೆ

ಬೈದು ಬುದ್ಧಿ ಹೇಳುತಾನೆ
ನನ್ನ ಮೋಸ ನನಗೆ ತೋರುತಾನೆ
ಕಂಗಳ ಕರುಳ ಕತ್ತರಿಸುತಾನೆ
ಮನದ ತಿರುಳ ಹುರಿಯುತಾನೆ
ಮಾತಿನ ಮೂಲಕೆ ಒಯ್ಯುತಾನೆ
ಅರಿವಿನ ನೆಲೆಯತ್ತ ನಡೆಸುತಾನೆ
ನನ್ನ ಒಳಗನು ನನಗೆ ಪರಿಚಯಿಸುತಾನೆ

ನನ್ನ ನನಗೊಪ್ಪಿಸಲು
ಗುರು ತೆರೆಯದ ಕಿಟಕಿಗಳಿಲ್ಲ…
ತೋರದ ದಾರಿಗಳಿಲ್ಲ…
ಹೇಳದ ಗುಟ್ಟುಗಳಿಲ್ಲ…
ಸತ್ಯದ ದಾರಿ ತೋರಿದ
ಎನ್ನ ಭಾಗ್ಯದ ಬಾಗಿಲು ನೀ
ಶರಣು ಗುರುವೇ ನಿನಗೆ ಶರಣು ಶರಣು.

Previous post ಗೆರೆ ಎಳೆಯದೆ…
ಗೆರೆ ಎಳೆಯದೆ…
Next post ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?

Related Posts

ಗುಟುಕು ಆಸೆ…
Share:
Poems

ಗುಟುಕು ಆಸೆ…

May 8, 2024 ಜ್ಯೋತಿಲಿಂಗಪ್ಪ
ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...
ನಾನುವಿನ ಉಪಟಳ
Share:
Poems

ನಾನುವಿನ ಉಪಟಳ

December 13, 2024 ಕೆ.ಆರ್ ಮಂಗಳಾ
ಕಣ್ಣಪಾಪೆಯಲಿ ನಾನವಿತು ಕುಳಿತಿರಲು ಕಾಣುವ ನೋಟಗಳಿಗೆ ಲೆಕ್ಕ ಹಾಕುವರಾರು? ತಲೆಯೊಳಗೆ ನಾನೆಂಬುದು ತತ್ತಿ ಇಟ್ಟಿರುವಾಗ ಬರುವ ಯೋಚನೆಗಳನು ಎಣಿಸಿದವರಾರು? ಮನದ ಮೂಲೆಮೂಲೆಯಲು...

Comments 3

  1. ಶರಣ್ ಸ್ವಾಮಿ ಮಠಪತಿ
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  2. Sharan swami
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  3. ಪೆರೂರು ಜಾರು, ಉಡುಪಿ
    Oct 20, 2022 Reply

    ಗುರು ಅರಿವಿನ ಬಾಗಿಲಾದರೆ ಓಕೆ; ಗರುವದ ಬಾಗಿಲಾದರೆ ಜೋಕೆ; ಈಗಿನ ಗುರುಗಳನ್ನು ಕಾಣುವಾಗ ಹೊರಗೆ ಒಳಗೆ ಬರಿ ಬಯಕೆ!

Leave a Reply to ಶರಣ್ ಸ್ವಾಮಿ ಮಠಪತಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
November 10, 2022
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ಗಂಟಿನ ನಂಟು
ಗಂಟಿನ ನಂಟು
November 7, 2020
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಗುರುವಿನ ಸಂಸ್ಮರಣೆ
ಗುರುವಿನ ಸಂಸ್ಮರಣೆ
October 6, 2020
ಸತ್ಯದ ಬೆನ್ನು ಹತ್ತಿ…
ಸತ್ಯದ ಬೆನ್ನು ಹತ್ತಿ…
April 29, 2018
Copyright © 2025 Bayalu