Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವಿನ ಬಾಗಿಲು…
Share:
Poems October 13, 2022 ಕೆ.ಆರ್ ಮಂಗಳಾ

ಅರಿವಿನ ಬಾಗಿಲು…

ಹುಚ್ಚು ಮನಸಿನ ಕುಣಿತ
ದಿಕ್ಕುದಿಕ್ಕಿಗೂ ಸೆಳೆತ
ಅಡಿಗಡಿಗು ಎಡತಾಕುವ
ವಿಷಯಗಳ ಡೈನಮೈಟು
ಕಾಲು ಎಚ್ಚರ ತಪ್ಪದಂತೆ
ಜಾಣ ನಡಿಗೆಯ ಹೇಳಿಕೊಡುತಾನೆ
ಹುಟ್ಟು-ಸಾವಿನ ಚಕ್ರದ ಮರ್ಮ ತೋರುತಾನೆ

ಭಾವ ಜಾಲಗಳ ಹೆಣಿಗೆ
ಚಿತ್ತ ಭ್ರಾಂತಿಯ ಮೆರವಣಿಗೆ
ಪಂಚೇಂದ್ರಿಯಗಳ ಉರವಣೆ
ಮುಗಿಯಲಾರದ ಬವಣೆ
ಉಸಿರುಸಿಕ್ಕು ಚಡಪಡಿಸುವಾಗ
ಬಲೆ ಕತ್ತರಿಸುವ ಕಲೆಯ ಕಲಿಸುತಾನೆ
ಮತ್ತೆ ಅದ ಕಟ್ಟದಾ ತಂತ್ರ ತಿಳಿಸುತಾನೆ

ಬಾಳ ಕದಳಿಯಲಿ
ಬಸವಳಿದು ಕುಸಿದಾಗ
ದಿಕ್ಕುಗಾಣದೆ ಕಂಗೆಟ್ಟು ಅಲೆವಾಗ
ಮಮ್ಮಲ ಮರುಗುತಾನೆ
ಮಮತೆಯಲಿ ಕೈಹಿಡಿದು
ಪಯಣದ ನಿಜವ ಅರುಹುತಾನೆ
ಮತ್ತೆ ದಾರಿತಪ್ಪದ ಗುಟ್ಟು ಕಲಿಸುತಾನೆ

ನಿನ್ನ ನೀತಿಳಿಯೆಂದು
ಅರಿವಿನ ಕಂದೀಲ ಕೈಗಿಕ್ಕಿ
ಅಂತರಂಗದ ಪಯಣಕೆ
ಮನವ ಸಿದ್ಧಗೊಳಿಸುತಾನೆ
ಭವದ ಬೆಂಗುಡಿಯ ಬಿಡಿಸಿ
ಭಕ್ತಿಯ ಮರ್ಮವನು ಅಂಗೈಗೆ ಇಡುತಾನೆ
ನಿಜಮುಕ್ತಿಯ ಮಾರ್ಗವನು ತೋರುತಾನೆ

ತಿದ್ದಿ ತೀಡಿ ಬೆಳೆಸುತಾನೆ
ಝುಂಕಿಸಿ ಮನವ ಚುಚ್ಚುತಾನೆ
ಕದ್ದು ನಡೆದರೆ ಗುದ್ದುತಾನೆ
ಸುಳ್ಳು ನುಡಿಯಲು ಕೆರಳುತಾನೆ
ಸೋಗು ಮುಖಗಳ ಕೆಡವುತಾನೆ
ಬೀಳದಂತೆ ಎಚ್ಚರಿಸುತಾನೆ
ಬಿದ್ದಾಗಲೆಲ್ಲಾ ಎತ್ತುತಾನೆ

ಬೈದು ಬುದ್ಧಿ ಹೇಳುತಾನೆ
ನನ್ನ ಮೋಸ ನನಗೆ ತೋರುತಾನೆ
ಕಂಗಳ ಕರುಳ ಕತ್ತರಿಸುತಾನೆ
ಮನದ ತಿರುಳ ಹುರಿಯುತಾನೆ
ಮಾತಿನ ಮೂಲಕೆ ಒಯ್ಯುತಾನೆ
ಅರಿವಿನ ನೆಲೆಯತ್ತ ನಡೆಸುತಾನೆ
ನನ್ನ ಒಳಗನು ನನಗೆ ಪರಿಚಯಿಸುತಾನೆ

ನನ್ನ ನನಗೊಪ್ಪಿಸಲು
ಗುರು ತೆರೆಯದ ಕಿಟಕಿಗಳಿಲ್ಲ…
ತೋರದ ದಾರಿಗಳಿಲ್ಲ…
ಹೇಳದ ಗುಟ್ಟುಗಳಿಲ್ಲ…
ಸತ್ಯದ ದಾರಿ ತೋರಿದ
ಎನ್ನ ಭಾಗ್ಯದ ಬಾಗಿಲು ನೀ
ಶರಣು ಗುರುವೇ ನಿನಗೆ ಶರಣು ಶರಣು.

Previous post ಗೆರೆ ಎಳೆಯದೆ…
ಗೆರೆ ಎಳೆಯದೆ…
Next post ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?

Related Posts

ಎರಡು ಎಲ್ಲಿ?
Share:
Poems

ಎರಡು ಎಲ್ಲಿ?

October 5, 2021 ಕೆ.ಆರ್ ಮಂಗಳಾ
ನಾನು ದ್ವೈತವೋ ಅದ್ವೈತವೋ ಹೀಗೊಂದು ಪ್ರಶ್ನೆ ಎದ್ದದ್ದೇ ತಡ ನಡೆದಿತ್ತು ಒಳಗೊಂದು ತಾಕಲಾಟ- ಒಂದೆಡೆ- ನೆನಪುಗಳಿಗೆ, ಕನಸುಗಳಿಗೆ ಪ್ರೀತಿಯ ಕನವರಿಕೆಗಳಿಗೆ ಎದೆಯ ಹಂಬಲಗಳಿಗೆಲ್ಲ...
ಸುತ್ತಿ ಸುಳಿವ ಆಟ
Share:
Poems

ಸುತ್ತಿ ಸುಳಿವ ಆಟ

May 6, 2021 ಕೆ.ಆರ್ ಮಂಗಳಾ
ಜೀವದ ಗೆಳೆಯಾ ಅಂತ ಕಟ್ಟಿಕೊಂಡೆ ಪ್ರಾಣ ಹಿಂಡೊ ಗಂಡನಾಗಿ ನನ್ನ ಆಳುತಾನವ್ವ ಜೇನಿನಂಥ ಮಾತುಗಳ ನಂಬಿಬಿಟ್ಟೆ ಗಾಳಿಯಲ್ಲಿ ಅವನ ಜೊತೆ ತೇಲಿಬಿಟ್ಟೆ ಗಿರಿಗಿಟ್ಲೆ ಆಟದಲ್ಲಿ...

Comments 3

  1. ಶರಣ್ ಸ್ವಾಮಿ ಮಠಪತಿ
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  2. Sharan swami
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  3. ಪೆರೂರು ಜಾರು, ಉಡುಪಿ
    Oct 20, 2022 Reply

    ಗುರು ಅರಿವಿನ ಬಾಗಿಲಾದರೆ ಓಕೆ; ಗರುವದ ಬಾಗಿಲಾದರೆ ಜೋಕೆ; ಈಗಿನ ಗುರುಗಳನ್ನು ಕಾಣುವಾಗ ಹೊರಗೆ ಒಳಗೆ ಬರಿ ಬಯಕೆ!

Leave a Reply to ಶರಣ್ ಸ್ವಾಮಿ ಮಠಪತಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
ಬರಿದಾಗುವ ಬೆರಗು
ಬರಿದಾಗುವ ಬೆರಗು
February 6, 2025
ಲಿಂಗಪೂಜೆ – ಜಂಗಮಸೇವೆ
ಲಿಂಗಪೂಜೆ – ಜಂಗಮಸೇವೆ
March 12, 2022
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಶಿವನ ಕುದುರೆ…
ಶಿವನ ಕುದುರೆ…
May 1, 2019
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
January 7, 2022
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ಅನುಭವ ಮಂಟಪ
ಅನುಭವ ಮಂಟಪ
April 11, 2025
Copyright © 2026 Bayalu