Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವಿನ ಬಾಗಿಲು…
Share:
Poems October 13, 2022 ಕೆ.ಆರ್ ಮಂಗಳಾ

ಅರಿವಿನ ಬಾಗಿಲು…

ಹುಚ್ಚು ಮನಸಿನ ಕುಣಿತ
ದಿಕ್ಕುದಿಕ್ಕಿಗೂ ಸೆಳೆತ
ಅಡಿಗಡಿಗು ಎಡತಾಕುವ
ವಿಷಯಗಳ ಡೈನಮೈಟು
ಕಾಲು ಎಚ್ಚರ ತಪ್ಪದಂತೆ
ಜಾಣ ನಡಿಗೆಯ ಹೇಳಿಕೊಡುತಾನೆ
ಹುಟ್ಟು-ಸಾವಿನ ಚಕ್ರದ ಮರ್ಮ ತೋರುತಾನೆ

ಭಾವ ಜಾಲಗಳ ಹೆಣಿಗೆ
ಚಿತ್ತ ಭ್ರಾಂತಿಯ ಮೆರವಣಿಗೆ
ಪಂಚೇಂದ್ರಿಯಗಳ ಉರವಣೆ
ಮುಗಿಯಲಾರದ ಬವಣೆ
ಉಸಿರುಸಿಕ್ಕು ಚಡಪಡಿಸುವಾಗ
ಬಲೆ ಕತ್ತರಿಸುವ ಕಲೆಯ ಕಲಿಸುತಾನೆ
ಮತ್ತೆ ಅದ ಕಟ್ಟದಾ ತಂತ್ರ ತಿಳಿಸುತಾನೆ

ಬಾಳ ಕದಳಿಯಲಿ
ಬಸವಳಿದು ಕುಸಿದಾಗ
ದಿಕ್ಕುಗಾಣದೆ ಕಂಗೆಟ್ಟು ಅಲೆವಾಗ
ಮಮ್ಮಲ ಮರುಗುತಾನೆ
ಮಮತೆಯಲಿ ಕೈಹಿಡಿದು
ಪಯಣದ ನಿಜವ ಅರುಹುತಾನೆ
ಮತ್ತೆ ದಾರಿತಪ್ಪದ ಗುಟ್ಟು ಕಲಿಸುತಾನೆ

ನಿನ್ನ ನೀತಿಳಿಯೆಂದು
ಅರಿವಿನ ಕಂದೀಲ ಕೈಗಿಕ್ಕಿ
ಅಂತರಂಗದ ಪಯಣಕೆ
ಮನವ ಸಿದ್ಧಗೊಳಿಸುತಾನೆ
ಭವದ ಬೆಂಗುಡಿಯ ಬಿಡಿಸಿ
ಭಕ್ತಿಯ ಮರ್ಮವನು ಅಂಗೈಗೆ ಇಡುತಾನೆ
ನಿಜಮುಕ್ತಿಯ ಮಾರ್ಗವನು ತೋರುತಾನೆ

ತಿದ್ದಿ ತೀಡಿ ಬೆಳೆಸುತಾನೆ
ಝುಂಕಿಸಿ ಮನವ ಚುಚ್ಚುತಾನೆ
ಕದ್ದು ನಡೆದರೆ ಗುದ್ದುತಾನೆ
ಸುಳ್ಳು ನುಡಿಯಲು ಕೆರಳುತಾನೆ
ಸೋಗು ಮುಖಗಳ ಕೆಡವುತಾನೆ
ಬೀಳದಂತೆ ಎಚ್ಚರಿಸುತಾನೆ
ಬಿದ್ದಾಗಲೆಲ್ಲಾ ಎತ್ತುತಾನೆ

ಬೈದು ಬುದ್ಧಿ ಹೇಳುತಾನೆ
ನನ್ನ ಮೋಸ ನನಗೆ ತೋರುತಾನೆ
ಕಂಗಳ ಕರುಳ ಕತ್ತರಿಸುತಾನೆ
ಮನದ ತಿರುಳ ಹುರಿಯುತಾನೆ
ಮಾತಿನ ಮೂಲಕೆ ಒಯ್ಯುತಾನೆ
ಅರಿವಿನ ನೆಲೆಯತ್ತ ನಡೆಸುತಾನೆ
ನನ್ನ ಒಳಗನು ನನಗೆ ಪರಿಚಯಿಸುತಾನೆ

ನನ್ನ ನನಗೊಪ್ಪಿಸಲು
ಗುರು ತೆರೆಯದ ಕಿಟಕಿಗಳಿಲ್ಲ…
ತೋರದ ದಾರಿಗಳಿಲ್ಲ…
ಹೇಳದ ಗುಟ್ಟುಗಳಿಲ್ಲ…
ಸತ್ಯದ ದಾರಿ ತೋರಿದ
ಎನ್ನ ಭಾಗ್ಯದ ಬಾಗಿಲು ನೀ
ಶರಣು ಗುರುವೇ ನಿನಗೆ ಶರಣು ಶರಣು.

Previous post ಗೆರೆ ಎಳೆಯದೆ…
ಗೆರೆ ಎಳೆಯದೆ…
Next post ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?

Related Posts

ನಾನೊಂದು ನೀರ್ಗುಳ್ಳೆ
Share:
Poems

ನಾನೊಂದು ನೀರ್ಗುಳ್ಳೆ

September 6, 2023 ಕೆ.ಆರ್ ಮಂಗಳಾ
ಕಾಲದ ಊದುಗೊಳವೆಯಲಿ ನಿರಂತರವಾಗಿ ಉಕ್ಕುತಿವೆ ಅನಂತಾನಂತ ನೀರ್ಗುಳ್ಳೆ ಎಲ್ಲಕೂ ಒಂದೇ ಹುಟ್ಟು ಒಂದೇ ಬಗೆಯ ಸಂಯೋಜನೆ ನಾ ಬೇರೆ ನೀ ಬೇರೆ ಅಂವ ಬೇರೆ ಇಂವ ಬೇರೆ ನಾ ಮೇಲು ನೀ ಕೆಳಗೆ...
ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...

Comments 3

  1. ಶರಣ್ ಸ್ವಾಮಿ ಮಠಪತಿ
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  2. Sharan swami
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  3. ಪೆರೂರು ಜಾರು, ಉಡುಪಿ
    Oct 20, 2022 Reply

    ಗುರು ಅರಿವಿನ ಬಾಗಿಲಾದರೆ ಓಕೆ; ಗರುವದ ಬಾಗಿಲಾದರೆ ಜೋಕೆ; ಈಗಿನ ಗುರುಗಳನ್ನು ಕಾಣುವಾಗ ಹೊರಗೆ ಒಳಗೆ ಬರಿ ಬಯಕೆ!

Leave a Reply to Sharan swami Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ಶಬ್ದದೊಳಗಣ ನಿಶ್ಶಬ್ದ…
ಶಬ್ದದೊಳಗಣ ನಿಶ್ಶಬ್ದ…
July 21, 2024
ಕೊಂಡಗುಳಿ ಕೇಶಿರಾಜ ಮತ್ತು…
ಕೊಂಡಗುಳಿ ಕೇಶಿರಾಜ ಮತ್ತು…
April 6, 2020
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ತೊತ್ತುಗೆಲಸವ ಮಾಡು
ತೊತ್ತುಗೆಲಸವ ಮಾಡು
June 5, 2021
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?
October 21, 2024
ಗುರುವಂದನೆ
ಗುರುವಂದನೆ
October 13, 2022
ಅನುಭವ ಮಂಟಪ
ಅನುಭವ ಮಂಟಪ
April 11, 2025
Copyright © 2025 Bayalu