Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವು-ಮರೆವಿನಾಟ
Share:
Poems August 8, 2021 ಕೆ.ಆರ್ ಮಂಗಳಾ

ಅರಿವು-ಮರೆವಿನಾಟ

ನೀನರಿಯೆ ನಾನಾರೆಂದು
ನಾಮರೆತೆ ನೀನಾರೆಂದು
ನನ್ನಲ್ಲೇ ನೀನಿದ್ದರೂ
ನಿನ್ನಿಂದಲೇ ನಾ ಬದುಕಿದ್ದರೂ…
ಇದೇ ಅಲ್ಲವೇ ವಿಸ್ಮಯ?

ನಾ-ನೀನೆಂಬ ಉಭಯವೇ ಇಲ್ಲ
ಭ್ರಮೆಗೆ ಬಲಿಯಾಗದೆ
ತಿಳಿದು ನೋಡೆಂದ ಗುರು-
ನೀನೇ ನಾನೋ, ನಾನೇ ನೀನೋ…
ಮತ್ತೇ ಶುರುವಾಯ್ತು ಗೊಂದಲ.

ನೀನು ನೀನೆಂದು
ಕನವರಿಸುತಿರುವುದೆಲ್ಲ ಬುದ್ಧಿಯ ಬೇಧ
ನಾನು ನಾನು ಎಂದು
ಬಡಬಡಿಸುತಿರುವುದೆಲ್ಲ ಮನದ ಕಸ

ಈ ತಿಪ್ಪೆಯ ಮೇಲೆ ಕೂತು
ಹಿಡಿಯಬಹುದೇ ಸತ್ಯದ ಕೈಯ?
ಅಂಟಿಸಿಕೊಂಡ ರೆಕ್ಕೆಗಳ ನೆಚ್ಚಿ
ಹಾರಲಾದೀತೆ ಬಯಲಿನತ್ತ?

ಬಣ್ಣಬಣ್ಣದ ಮಾತುಗಳೆಲ್ಲ
ಮೌನದಲಿ ಕರಗಿ
ಎಲ್ಲ ಖಾಲಿಯಾಗುವ ತನಕ
ಕೇಳಲಾದೀತೆ ಎದೆಯ ಗುಟ್ಟು?

Previous post ಹುಡುಕಾಟ…
ಹುಡುಕಾಟ…
Next post ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ

Related Posts

ಒಳಗಣ ಮರ
Share:
Poems

ಒಳಗಣ ಮರ

March 12, 2022 ಜ್ಯೋತಿಲಿಂಗಪ್ಪ
ಈ ಪದ ಏನು ನಿಜ ಹೇಳುತ್ತಾ ನಿಜ ಹೇಳುವುದು ಅಲ್ಲಾ ಕಾಣುವುದು ಅಲ್ಲಾ ಕೇಳುವುದು ಅಲ್ಲಾ ಅನುಭಾವಿಸುವುದು ಭಾವದಲಿ ಆನು ನಿಜವಾಗುವುದು ಈ ಪದ ಅರ್ಥದಲಿ ಏನಿದೆಯೋ ಅಕ್ಷರ ಬಲ್ಲವರು...
WHO AM I?
Share:
Poems

WHO AM I?

June 17, 2020 Chittara K. V
I have a wide brain And a open mind I think a lot at times But I come to a point To ask myself- Who am I? I swallow the pain But speak with the...

Comments 2

  1. Jyothilingappa
    Aug 9, 2021 Reply

    ಬುದ್ಧಿಯ ಬೇಧ
    ಮನದ ಕಸ… ಆಹಾ!

  2. ಪೇರೂರು ಜಾರು, ಮಂಗಳೂರು
    Aug 14, 2021 Reply

    ಅರಿವು ಮರೆವು
    ಅರಿತೇ ಮರೆಯುವುದು
    ಅರಿಯದೇ ಮರೆಯುವುದು
    ಕೆಲವ ಕುರಿತು ಮರೆಯುವುದು
    ಬಯಲಾಗು ಮರೆಯುವುದು
    ಎಲ್ಲ ಆಟಕ್ಕೂ ಕೊನೆ ತಿಳಿ
    ಅದೇ ಅರಿವು ತಿಳಿಯದೊಡೆ
    ಬಾಳ ಮರೆವು
    ಆಟ ಮುಗಿಯಲೇ ಬೇಕು
    ಮಂಗಳ ಹಾಡಲೇ ಬೇಕು
    (ಮಂಗಳಾ ಬರೆಯಲೂ ಬೇಕು)

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
April 9, 2021
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ
April 29, 2018
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಗುರುವಿನ ಸಂಸ್ಮರಣೆ
ಗುರುವಿನ ಸಂಸ್ಮರಣೆ
October 6, 2020
Copyright © 2026 Bayalu