Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವು-ಮರೆವಿನಾಟ
Share:
Poems August 8, 2021 ಕೆ.ಆರ್ ಮಂಗಳಾ

ಅರಿವು-ಮರೆವಿನಾಟ

ನೀನರಿಯೆ ನಾನಾರೆಂದು
ನಾಮರೆತೆ ನೀನಾರೆಂದು
ನನ್ನಲ್ಲೇ ನೀನಿದ್ದರೂ
ನಿನ್ನಿಂದಲೇ ನಾ ಬದುಕಿದ್ದರೂ…
ಇದೇ ಅಲ್ಲವೇ ವಿಸ್ಮಯ?

ನಾ-ನೀನೆಂಬ ಉಭಯವೇ ಇಲ್ಲ
ಭ್ರಮೆಗೆ ಬಲಿಯಾಗದೆ
ತಿಳಿದು ನೋಡೆಂದ ಗುರು-
ನೀನೇ ನಾನೋ, ನಾನೇ ನೀನೋ…
ಮತ್ತೇ ಶುರುವಾಯ್ತು ಗೊಂದಲ.

ನೀನು ನೀನೆಂದು
ಕನವರಿಸುತಿರುವುದೆಲ್ಲ ಬುದ್ಧಿಯ ಬೇಧ
ನಾನು ನಾನು ಎಂದು
ಬಡಬಡಿಸುತಿರುವುದೆಲ್ಲ ಮನದ ಕಸ

ಈ ತಿಪ್ಪೆಯ ಮೇಲೆ ಕೂತು
ಹಿಡಿಯಬಹುದೇ ಸತ್ಯದ ಕೈಯ?
ಅಂಟಿಸಿಕೊಂಡ ರೆಕ್ಕೆಗಳ ನೆಚ್ಚಿ
ಹಾರಲಾದೀತೆ ಬಯಲಿನತ್ತ?

ಬಣ್ಣಬಣ್ಣದ ಮಾತುಗಳೆಲ್ಲ
ಮೌನದಲಿ ಕರಗಿ
ಎಲ್ಲ ಖಾಲಿಯಾಗುವ ತನಕ
ಕೇಳಲಾದೀತೆ ಎದೆಯ ಗುಟ್ಟು?

Previous post ಹುಡುಕಾಟ…
ಹುಡುಕಾಟ…
Next post ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ

Related Posts

ಕ್ವಾಂಟಮ್ ಮೋಡಿ
Share:
Poems

ಕ್ವಾಂಟಮ್ ಮೋಡಿ

November 9, 2021 ಜ್ಯೋತಿಲಿಂಗಪ್ಪ
ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು ಎಣಿಸಲಾರೆ ಈ ಬಯಲ ಹೆಜ್ಜೆ ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ ನನ್ನೀ ನೆರಳಾಟವ ಮೆಚ್ಚಿದೆ ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ ಈಗ...
ಬರಿದಾಗುವ ಬೆರಗು
Share:
Poems

ಬರಿದಾಗುವ ಬೆರಗು

February 6, 2025 ಜಬೀವುಲ್ಲಾ ಎಂ.ಅಸದ್
ನಿಂತಲ್ಲೇ ಬಯಲು ಕೊನೆಗೊಳ್ಳದು ಗೆಳೆಯ ನಡೆಯಬೇಕು ನೀನೇ ಖುದ್ದು ಭವದ ಬೇಲಿಗಳ ದಾಟುತ್ತ ಸಾವಿರ ಹೆಜ್ಜೆಗಳ ಮಿಡಿದು ಈ ಸಮಯ ಜಗ ಹುಚ್ಚನೆಂದರೂ ಸರಿಯೇ ಹತ್ತು ಮುಳ್ಳುಗಳ ಮಧ್ಯೆ...

Comments 2

  1. Jyothilingappa
    Aug 9, 2021 Reply

    ಬುದ್ಧಿಯ ಬೇಧ
    ಮನದ ಕಸ… ಆಹಾ!

  2. ಪೇರೂರು ಜಾರು, ಮಂಗಳೂರು
    Aug 14, 2021 Reply

    ಅರಿವು ಮರೆವು
    ಅರಿತೇ ಮರೆಯುವುದು
    ಅರಿಯದೇ ಮರೆಯುವುದು
    ಕೆಲವ ಕುರಿತು ಮರೆಯುವುದು
    ಬಯಲಾಗು ಮರೆಯುವುದು
    ಎಲ್ಲ ಆಟಕ್ಕೂ ಕೊನೆ ತಿಳಿ
    ಅದೇ ಅರಿವು ತಿಳಿಯದೊಡೆ
    ಬಾಳ ಮರೆವು
    ಆಟ ಮುಗಿಯಲೇ ಬೇಕು
    ಮಂಗಳ ಹಾಡಲೇ ಬೇಕು
    (ಮಂಗಳಾ ಬರೆಯಲೂ ಬೇಕು)

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ವಚನಗಳ ಓದು ಮತ್ತು ಅರ್ಥೈಸುವಿಕೆ
ವಚನಗಳ ಓದು ಮತ್ತು ಅರ್ಥೈಸುವಿಕೆ
August 5, 2018
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
December 9, 2025
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ದೇಹ ದೇವಾಲಯ
ದೇಹ ದೇವಾಲಯ
June 12, 2025
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ವಚನ – ಚಿಂತನ
ವಚನ – ಚಿಂತನ
October 10, 2023
Copyright © 2026 Bayalu